ಹೆಬ್ರಿ: ದೀಪಾವಳಿ ಪ್ರಯುಕ್ತ ದೀಪ ಇಡಲು ಹೋದ ಯುವಕ ಬಾವಿಗೆ ಬಿದ್ದು ಮೃತ್ಯು

ಹೆಬ್ರಿ, ನ.13: ದೀಪಾವಳಿ ಹಬ್ಬದ ಪ್ರಯುಕ್ತ ಮನೆ ಸಮೀಪ ದೀಪ ಇಡಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನ.12ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಚಾರ ಗ್ರಾಮದ ಚಾರ ಬಸದಿ ಬಳಿಯ ನಿವಾಸಿ ಸಚಿನ್(35) ಎಂದು ಗುರುತಿಸಲಾಗಿದೆ.
ಇವರು ಮನೆಯ ಹತ್ತಿರ ಆವರಣವಿಲ್ಲದ ಬಾವಿಗೆ ದೀಪ ವನ್ನು ಇಡಲು ಹೋಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





