Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.14: ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ...

ಅ.14: ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕೆ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ13 Oct 2023 6:17 PM IST
share
ಅ.14: ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕೆ ದಿನಾಚರಣೆ

ಉಡುಪಿ, ಅ.13: ಉಡುಪಿಯಲ್ಲಿ ಕಳೆದೊಂದು ಶತಮಾನದಿಂದ ಜನತೆಗೆ ಆರೋಗ್ಯ ಸೇವೆಯನ್ನು ನೀಡುತ್ತಿರುವ ಲೋಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ವತಿಯಿಂದ ಜಾಗತಿಕ ಸಹಾನುಭೂತಿ (ಹಾಸ್ಪೈಸ್) ಮತ್ತು ಉಪಶಮಕ (ಪಲ್ಲಿಟೇವ್) ಆರೈಕಾ ದಿನಾಚರಣೆಯನ್ನು ಅ.14ರ ಸಂಜೆ 4:00ಗಂಟೆಗೆ ಆಚರಿಸಲಾಗುವುದು ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಹಾನುಭೂತಿಯ ಸಮುದಾಯಗಳು ಉಪಶಾಮಕ ಆರೈಕೆಗಾಗಿ ಒಂದಾಗಿ’ ಎಂಬ ಧ್ಯೇಯವಾಕ್ಯದೊಂದಿಗೆ ಈ ದಿನಾಚರಣೆಯನ್ನು ಆಸ್ಪತ್ರೆಯ ಅಂಗಸಂಸ್ಥೆ ಯಾದ ಉಪ ಶಾಮಕ ಆರೈಕೆ ಕೇಂದ್ರ ‘ವಾತ್ಸಲ್ಯ’ ಘಟಕದ ವಠಾರದಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಗುಣಪಡಿಸಲು ಸಾಧ್ಯವಿಲ್ಲದ ಹಾಗೂ ದೀರ್ಘಕಾಲಿಕ ನೋವು ಅನುಭವಿ ಸುತ್ತಿರುವ ಕ್ಯಾನ್ಸರ್ ಸೇರಿದಂತೆ ಇತರ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ನಿರ್ವಹಣೆಯಲ್ಲಿ ಉಪಶಾಮಕ ಆರೈಕೆ ಪಾತ್ರ ಮಹತ್ವದ್ದಾ ಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಲಭ್ಯವಿರುವ ವಿವಿಧ ಆಯ್ಕೆಗಳ ಕುರಿತು ಸಾರ್ವಜನಿಕರಿಗೆ ನಾಳೆ ಅರಿವು ಮತ್ತು ಮಾಹಿತಿ ನೀಡಲಾಗುತ್ತದೆ ಎಂದವರು ವಿವರಿಸಿದರು.

ಮಿಷನ್ ಆಸ್ಪತ್ರೆಯ ಕಳೆದ ಎಪ್ರಿಲ್ ತಿಂಗಳಲ್ಲಿ ಉದ್ಘಾಟನೆಗೊಂಡ ‘ವಾತ್ಸಲ್ಯ’ ಕೇಂದ್ರದಲ್ಲಿ ಕ್ಯಾನ್ಸರ್, ಕಿಡ್ನಿವೈಫಲ್ಯ, ವೃದ್ಧಾಪ್ಯದ ವಯೋಸಹಜ ಕಾಯಿಲೆ, ಪ್ಯಾರಲಿಸಿಸ್‌ನಿಂದ ನರಳುವ 25 ಮಂದಿ ರೋಗಿಗಳಿಗೆ ಆರೈಕೆ ನೀಡಲಾಗುತ್ತಿದೆ. ಇದಕ್ಕಾಗಿಯೇ ವಿಶೇಷ ತರಬೇತಿ ಪಡೆದ ನರ್ಸ್‌ಗಳು ಇಲ್ಲಿ ಸೇವೆ ಸಲ್ಲಿಸುತಿದ್ದಾರೆ ಎಂದು ಡಾ.ಜತ್ತನ್ನ ತಿಳಿಸಿದರು.

ಉಪಶಾಮಕ ಆರೈಕೆಯು ಮಾರಣಾಂತಿಕ ಕಾಯಿಲೆಯಿಂದ ಮತ್ತು ಮರಣವನ್ನು ಎದುರಿಸುತ್ತಿರುವ ರೋಗಿಗಳ ಜೀವನ ಮಟ್ಟವನ್ನು ಸುಧಾರಿಸುವ, ಅವರ ಕುಟುಂಬಿಕರಿಗೆ ಸಾಯುವ ಹಂತದಲ್ಲಿರುವ ರೋಗಿಗಳ ಆರೋಗ್ಯ ಸೇವೆ, ಅರೈಕೆ ಹಾಗೂ ಯೋಗಕ್ಷೇಮವನ್ನು ಚಿಕಿತ್ಸೆಯೊಂದಿಗೆ ನೋಡಿಕೊಳ್ಳುವ ವ್ಯವಸ್ಥೆಯಾಗಿದೆ ಎಂದರು.

ಮನುಷ್ಯ ಜೀವಿತಾವಧಿ ಈಗ 70+ ಆಗಿರುವ ಹಿನ್ನೆಲೆಯಲ್ಲಿ ವಯಸ್ಸಾದವರ ಜನಸಂಖ್ಯೆ ಹೆಚ್ಚಳದಿಂದ ಕ್ಯಾನ್ಸರ್ ಹಾಗೂ ಇತರ ವಿಷಮ ರೋಗಗಳಿಂದ ಪೀಡತರಾಗುವ ಜನರ ಸಂಖ್ಯೆಯೂ ಹೆಚ್ಚಿದ್ದು, ಇಂಥವರಿಗೆ ಉಪಶಾಮಕ ಆರೈಕೆ ಅಗತ್ಯವೆನಿಸಿದೆ. ಹೀಗಾಗಿ ಈ ಕುರಿತ ಮಾಹಿತಿ ಕಾರ್ಯಕ್ರಮವನ್ನು ಬ್ರಹ್ಮಾವರದ ಜಯಂಟ್ಸ್ ಇಂಟರ್‌ನೇಷನಲ್‌ನ ಸಹಯೋಗದೊಂದಿಗೆ ನಾಳೆ ಆಯೋಜಿಸಲಾಗಿದೆ ಎಂದರು.

ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ಹಿರಿಯ ನಾಗರಿಕರಿಗಾಗಿ ‘ಸಹಜೀವನ’ ಹಿರಿಯ ನಾಗರಿಕರ ಆರೈಕಾ ಕೇಂದ್ರ, ‘ಕರುಣಾಲಯ’ ವಯೋ ಸಂಬಂಧಿ ಸಮಸ್ಯೆಗಳಿಂದ ಬಳಲುವವರ ಚಿಕಿತ್ಸಾ ಕೇಂದ್ರ ಹಾಗೂ ‘ವಾತ್ಸಲ್ಯ’ ಉಪಶಾಮಕ ಕೇಂದ್ರವನ್ನು ನಡೆಸುತ್ತಿದೆ ಎಂದು ಡಾ.ಸುಶೀಲ್ ಜತ್ತನ್ನ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ದೀನಾ ಪ್ರಭಾವತಿ, ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಗಣೇಶ ಕಾಮತ್, ಸಮುದಾಯ ಘಟಕ ಮುಖ್ಯಸ್ಥ ರೋಹಿ ರತ್ನಾಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X