ಅಪಘಾತ: ಗಾಯಾಳು ಮೃತ್ಯು

ಮಲ್ಪೆ, ಆ.5: ಮೂರು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮ ಸ್ಥಿತಿಯಲ್ಲಿದ್ದ ನೇಜಾರು ಕೆಮ್ಮಣ್ಣು ರಸ್ತೆಯ ಸುಧಾಕರ(49) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
2022ರ ಸೆ.16ರಂದು ಇವರ ಬೈಕ್ ಎದುರಿನಲ್ಲಿ ಬರುತ್ತಿದ್ದ ಟ್ಯಾಂಕರ್ಗೆ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Next Story





