Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ...

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ: 3 ವರ್ಷಗಳಲ್ಲಿ 1184 ಪ್ರಕರಣ; 3.78 ಕೋಟಿ ರೂ. ದಂಡ ವಸೂಲಿ

ವಾರ್ತಾಭಾರತಿವಾರ್ತಾಭಾರತಿ20 Feb 2024 6:53 PM IST
share
ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ: 3 ವರ್ಷಗಳಲ್ಲಿ 1184 ಪ್ರಕರಣ; 3.78 ಕೋಟಿ ರೂ. ದಂಡ ವಸೂಲಿ

ಉಡುಪಿ: ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 1184 ಪ್ರಕರಣಗಳಲ್ಲಿ ಬರೋಬ್ಬರಿ 3,78,74,555ರೂ. ದಂಡ ವಸೂಲಿ ಮಾಡಿದ್ದು, ಈ ಮೂಲಕ ಅಕ್ರಮ ದಂಧೆಕೋರರಿಗೆ ದಂಡದ ಬಿಸಿ ಮುಟ್ಟಿಸಲಾಗಿದೆ.

ಸಾರ್ವಜನಿಕ ದೂರು ಮತ್ತು ವಿಶೇಷ ಕಾರ್ಯಾಚರಣೆ ಮೂಲಕ ಗಣಿ ಇಲಾಖೆ ಅಧಿಕಾರಿಗಳು ಕಂದಾಯ, ಪೊಲೀಸ್, ಅರಣ್ಯ ಇಲಾಖೆ ಸಹಿತ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ ವಿವಿಧ ಕಡೆಗಳಿಗೆ ದಾಳಿ ನಡೆಸಿ ಈ ಕ್ರಮ ತೆಗೆದುಕೊಂಡಿದೆ.

ಕಟ್ಟಡ ಕಲ್ಲು, ಸಾಮಾನ್ಯ ಮರಳು, ಕಪ್ಪೆ ಚಿಪ್ಪು, ಲ್ಯಾಟರೈಟ್, ಆಲಂಕಾರಿಕ ಶಿಲೆ, ಸಿಲಿಕಾ ಮರಳು, ಜೇಡಿ ಮಣ್ಣು ಮತ್ತು ಎಂ-ಸ್ಯಾಂಡ್ ಸಾಗಾಟ ಹಾಗೂ ಗಣಿಗಾರಿಕೆಗೆ ಸಂಬಂಧಿಸಿ ಕಾನೂನು ಬಾಹಿರವಾಗಿ ನಡೆದಿರುವ ಘಟನೆಗಳಲ್ಲಿ ಪ್ರತ್ಯೇಕ ವಾಗಿ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ.

3 ವರ್ಷಗಳ ಪ್ರಕರಣಗಳು-ದಂಡ

2021-22ನೇ ಸಾಲಿನ ಅಕ್ರಮ ಗಣಿಗಾರಿಕೆ(165 ಪ್ರಕರಣಗಳು, 84,25,676ರೂ. ದಂಡ) ಖನಿಜ ಸಾಗಾಣಿಕೆ(26 ಪ್ರಕರಣಗಳು, 2,38,264 ರೂ. ದಂಡ), ದಾಸ್ತಾನು (232 ಪ್ರಕರಣಗಳು, 6,856415ರೂ. ದಂಡ)ಗೆ ಸಂಬಂಧಿಸಿ ಒಟ್ಟು 423 ಪ್ರಕರಣಗಳಲ್ಲಿ 1,55,20,355 ರೂ. ದಂಡ ವಸೂಲಿ ಮಾಡಲಾಗಿದೆ.

2022-23ರಲ್ಲಿ ಅಕ್ರಮ ಗಣಿಗಾರಿಕೆ(205 ಪ್ರಕರಣಗಳು, 7588044ರೂ. ದಂಡ) ಖನಿಜ ಸಾಗಾಣಿಕೆ (8 ಪ್ರಕರಣಗಳು, 238420ರೂ. ದಂಡ), ದಾಸ್ತಾನು (266 ಪ್ರಕರಣಗಳು, 6480490ರೂ. ದಂಡ)ಗೆ ಸಂಬಂಧಿಸಿ 479 ಪ್ರಕರಣಗಳಲ್ಲಿ 1,43,06,954ರೂ. ದಂಡ ವಸೂಲಿ ಮಾಡಲಾಗಿದೆ.

2023-24ರಲ್ಲಿ 10 ತಿಂಗಳಲ್ಲಿ (ಡಿಸೆಂಬರ್‌ವರೆಗೆ) ಅಕ್ರಮ ಗಣಿಗಾರಿಕೆ(87 ಪ್ರಕರಣಗಳು, 3229196ರೂ. ದಂಡ) ಖನಿಜ ಸಾಗಾಣಿಕೆ(14 ಪ್ರಕರಣಗಳು, 315940ರೂ. ದಂಡ), ದಾಸ್ತಾನು(181 ಪ್ರಕರಣಗಳು, 4502110ರೂ. ದಂಡ)ಗೆ ಸಂಬಂಧಿಸಿ 282 ಪ್ರಕರಣಗಳಲ್ಲಿ 80,47,246 ರೂ. ದಂಡ ವಸೂಲಿ ಮಾಡಲಾಗಿದೆ.

2021ರಿಂದ ಈವರೆಗೆ ಒಟ್ಟು ಮೂರು ವರ್ಷಗಳಲ್ಲಿ ಇಲಾಖೆ ಅಂಕಿಅಂಶ ಪ್ರಕಾರ ಮರಳುಗಾರಿಕೆ ದೂರುಗಳೇ ಹೆಚ್ಚು. 2021-22ನೇ ಸಾಲಿನಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿ 263 ಪ್ರಕರಣಗಳು, 2022-23ನೇ ಸಾಲಿನಲ್ಲಿ 340 ಪ್ರಕರಣಗಳು, 151 ಪ್ರಕರಣಗಳು ಸೇರಿದಂತೆ ಒಟ್ಟು 754 ಪ್ರಕರಣಗಳನ್ನು ದಾಖಲಿಸಿ, ಒಟ್ಟು 18,058,396ರೂ. ದಂಡ ಸಂಗ್ರಹಿಸಲಾಗಿದೆ.

24 ಗಂಟೆ ಕಂಟ್ರೋಲ್ ರೂಂ

ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಗಣಿ ಇಲಾಖೆ ಕಂಟ್ರೋಲ್ ರೂಂ ಸ್ಥಾಪಿಸ ಲಾಗಿದ್ದು, ದಿನದ 24 ಗಂಟೆಗಳ ಕಾಲವೂ ಕಂಟ್ರೋಲ್‌ರೂಂಗೆ ಬರುವ ದೂರು ಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾ ಗಿದೆ. ಇದರಲ್ಲಿ ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕಂಟ್ರೋಲ್ ರೂಮ್‌ಗೆ ಬರುವ ಸಾರ್ವಜನಿಕ ದೂರುಗಳನ್ನು ಸ್ವೀಕರಿಸಿ, ನೋಂದಾಯಿಸಲಾಗುತ್ತದೆ. ಬಳಿಕ ಸಂಬಂಧ ಪಟ್ಟ ತಾಲೂಕಿನ ಗಣಿ ಇಲಾಖೆ ಅಧಿಕಾರಿಗಳು, ಕಂದಾಯ, ಪೊಲೀಸ್, ಅರಣ್ಯ ಇಲಾಖೆ ಸಹಿತ ಸಂಬಂಧಪಟ್ಟ ಇಲಾಖೆ ಗಳಿಗೆ ಮಾಹಿತಿ ನೀಡಲಾಗುತ್ತದೆ. ಕಂಟ್ರೋಲ್‌ರೂಂನಲ್ಲಿ ಬೃಹತ್ ಟಿವಿ ಸ್ಕ್ರೀನ್ ಅಳವಡಿಸಲಾಗಿದ್ದು, ಜಿಪಿಎಸ್ ವ್ಯವಸ್ಥೆ ಯಡಿ ಗಣಿ ಸಾಗಾಟ ವಾಹನಗಳ ಮೇಲೆ ನಿಗಾ ಇರಿಸಲಾಗುತ್ತದೆ ಎನ್ನುತ್ತಾರೆ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ.ಯು.

2021ರಿಂದ 2024ರ ವರೆಗೆ ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದ ಒಟ್ಟು 669 ದೂರುಗಳ ಪೈಕಿ 663 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.

ಅನಧಿಕೃತ ಮರಳುಗಾರಿಕೆ ಸಂಬಂಧಿಸಿ ಕುಂದಾಪುರ ಭಾಗದಿಂದ ಹೆಚ್ಚು ದೂರು ಬಂದಿದ್ದು, ಕಾಪು, ಉಡುಪಿ, ಕಾರ್ಕಳ ಭಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಬೈಂದೂರು, ಕುಂದಾಪುರ, ಬ್ರಹ್ಮಾವರ ಭಾಗದಲ್ಲಿ ಅನಧಿಕೃತ ಮಣ್ಣು ಗಣಿಗಾರಿಕೆ ಸಂಬಂಧಿಸಿ ದೂರುಗಳು ದಾಖಲಾಗಿವೆ.

ಕುಂದಾಪುರ ತಾಲೂಕಿನ 261 ದೂರುಗಳಲ್ಲಿ 261, ಬೈಂದೂರು ತಾಲೂಕಿನ 106 ದೂರುಗಳ ಪೈಕಿ 106, ಬ್ರಹ್ಮಾವರ ತಾಲೂಕಿನ 117ದೂರುಗಳಲ್ಲಿ 115, ಉಡುಪಿ ತಾಲೂಕಿನ 56 ದೂರುಗಳಲ್ಲಿ 56, ಕಾರ್ಕಳ ತಾಲೂಕಿನ 40 ದೂರುಗಳ ಪೈಕಿ 37, ಕಾಪು ತಾಲೂಕಿನ 72 ದೂರುಗಳಲ್ಲಿ 71 ಮತ್ತು ಹೆಬ್ರಿ ತಾಲೂಕಿನ 17ದೂರುಗಳ ಪೈಕಿ 17ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗಣಿ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಅನಧಿಕೃತ ಗಣಿಗಾರಿಕೆ, ಸಾಗಾಟ, ದಾಸ್ತಾನು ವಿರುದ್ಧ ನಿರಂತರ ಕಾರ್ಯಾ ಚರಣೆ ನಡೆಸಿ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ. ಜಿಲ್ಲೆಯಲ್ಲಿ ಅನಧಿಕೃತ ಕಲ್ಲು, ಮರಳು ಗಣಿಗಾರಿಕೆ ಸಂಬಂಧಿಸಿ ಸಾರ್ವಜನಿಕ ದೂರು ಮತ್ತು ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಳೆದ 10 ತಿಂಗಳಲ್ಲಿ 80 ಲಕ್ಷ ರೂ. ಅಧಿಕ ದಂಡ ಸಂಗ್ರಹಿಸಲಾಗಿದೆ. ಈಗಾಗಲೆ ಒನ್‌ಸ್ಟೇಟ್ ಒನ್ ಜಿಪಿಎಸ್ ನಿಯಮಾವಳಿಯಲ್ಲಿ ಜಿಲ್ಲೆಯಲ್ಲಿ 1826 (ಲಾರಿ, ಟೆಂಪೋ) ಖನಿಜ ಸಾಗಾಟ ವಾಹನಗಳು ಜಿಪಿಎಸ್ ಅಳವಡಿಸಿಕೊಂಡಿವೆ’

-ಸಂದೀಪ್ ಜಿ.ಯು., ಹಿರಿಯ ಭೂ ವಿಜ್ಞಾನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X