Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 4-5 ತಿಂಗಳಲ್ಲಿ ಅರ್ಹ ಎಲ್ಲ ಅಕ್ರಮ ಸಕ್ರಮ...

4-5 ತಿಂಗಳಲ್ಲಿ ಅರ್ಹ ಎಲ್ಲ ಅಕ್ರಮ ಸಕ್ರಮ ಅರ್ಜಿ ವಿಲೇವಾರಿ: ಗೋಪಾಲ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ29 Aug 2026 9:13 PM IST
share
4-5 ತಿಂಗಳಲ್ಲಿ ಅರ್ಹ ಎಲ್ಲ ಅಕ್ರಮ ಸಕ್ರಮ ಅರ್ಜಿ ವಿಲೇವಾರಿ: ಗೋಪಾಲ ಪೂಜಾರಿ

ಕುಂದಾಪುರ: ಅಕ್ರಮ ಸಕ್ರಮ ಬಗರ್ ಹುಕುಂನಡಿ ಬೈಂದೂರಲ್ಲಿ 2,636 ಅರ್ಜಿ, ವಂಡ್ಸೆ ಹೋಬಳಿಯಲ್ಲಿ 1,963 ಅರ್ಜಿ ಒಟ್ಟು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 4 ಸಾವಿರಕ್ಕೂ ಮಿಕ್ಕಿ ಅರ್ಜಿಗಳು ಬಾಕಿ ಇವೆ. ಇನ್ನು ಮುಂದೆ ಪ್ರತಿ ಶುಕ್ರವಾರ ಸಭೆ ನಡೆಸಿ, ಪ್ರತಿವಾರ ಕನಿಷ್ಠ 25 ಅರ್ಜಿ ವಿಲೇವಾರಿ ನಡೆಸಿ, ಮುಂದಿನ 4-5 ತಿಂಗಳಲ್ಲಿ ಅರ್ಹ ಎಲ್ಲ ಅರ್ಜಿ ವಿಲೇವಾರಿಗೆ ಪ್ರಯತ್ನಿಸಲಾಗುವುದು ಎಂದು ಬೈಂದೂರು ಕ್ಷೇತ್ರದ ಅಕ್ರಮ - ಸಕ್ರಮ ಹೆಚ್ಚುವರಿ ಸಮಿತಿ ಅಧ್ಯಕ್ಷ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ.

ಬೈಂದೂರು ಮಿನಿ ವಿಧಾನಸೌಧದಲ್ಲಿರುವ ಕೋರ್ಟ್ ಹಾಲ್‌ನಲ್ಲಿ ಶುಕ್ರವಾರ ನಡೆದ ವಂಡ್ಸೆ ಹೋಬಳಿಯ ಅಕ್ರಮ - ಸಕ್ರಮ ಹೆಚ್ಚುವರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಏಳು ಮಂದಿಗೆ ಹಕ್ಕುಪತ್ರ ವಿತರಿಸಿ ಮಾತನಾಡುತಿದ್ದರು.

ಸಚಿವರು ಸಭೆ ನಡೆಸಿ, 3 ತಿಂಗಳಲ್ಲಿ ಜಿಲ್ಲೆಯಲ್ಲಿ 50 ಸಾವಿರ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ನಮ್ಮಲ್ಲೂ ಬಾಕಿ ಇರುವ ಬಗರ್ ಹುಕುಂನಡಿ 30-40 ವರ್ಷ ಗಳಿಂದ ಕೃಷಿ ಮಾಡುತ್ತಿರುವ ಜಾಗದ ಹಕ್ಕುಪತ್ರ ಕೊಡಿಸುವ ಕಾರ್ಯ ಮಾಡಲಾಗುವುದು. ತಹಶಿಲ್ದಾರ್, ಕಂದಾಯ ನಿರೀಕ್ಷಕರೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಾರೆ ಎಂದರು.

ಸಮಸ್ಯೆ ಇದ್ದ ಕಡೆಗಳಲ್ಲಿ ಸಮಿತಿಯವರು ಕೂಡ ಭೇಟಿ ನೀಡುತ್ತೇವೆ. ಯಾವುದೇ ಸಮಸ್ಯೆಯಿದ್ದರೂ, ಕೃಷಿಯಿದ್ದರೆ, ಬಗೆಹರಿಸಲಾಗುವುದು. ವಿಎ ಗಳು ಕೂಡ ಕಾರ್ಯೋತ್ತಡದ ನಡುವೆಯೂ ಬಡ ವರ್ಗದ 5-10 ಸೆನ್ಸ್ ನವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಂದಾಯ ನಿರೀಕ್ಷಕ ರಾಘವೇಂದ್ರ ಹೊಸ್ಕಳಿ, ಸಮಿತಿಯ ಶ್ರೀನಿವಾಸ ಸೌಡ, ಹೇಮಾ ಆರ್.ಪೂಜಾರಿ, ದಿನೇಶ್ ನಾಯ್ಕ್ ಹಳ್ಳಿಹೊಳೆ ಮತ್ತಿತರರು ಉಪಸ್ಥಿತರಿದ್ದರು.

‘ನನ್ನನ್ನು ಸರಕಾರ ಕಾನೂನು ಪ್ರಕಾರವೇ ಹೆಚ್ಚುವರಿ ಸಮಿತಿ ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದು. ಕಳೆದ ಹಲವು ವರ್ಷಗಳಿಂದ ಹೆಚ್ಚುವರಿ ಸಮಿತಿ ರಚಿಸಲಾಗುತ್ತಿದೆ. ನಾನು 4 ಬಾರಿ ಶಾಸಕನಾಗಿದ್ದೆ. ನನ್ನ ಕಾಲದಲ್ಲೂ ಹೆಚ್ಚುವರಿ ಸಮಿತಿ, ಎಸಿ ಸಮಿತಿ ಮಾಡಲಾಗಿತ್ತು. ಆದರೆ ನಾನು ಕೋರ್ಟ್‌ಗೆ ಹೋಗಿಲ್ಲ. ಆದರೆ ನನ್ನ ವಿರುದ್ದ ಕೋರ್ಟ್‌ಗೆ ಹೋಗಿರುವುದು ನೋವಾಗಿದೆ. 3 ವರ್ಷದಿಂದ ಯಾವುದೇ ಅರ್ಜಿ ವಿಲೇವಾರಿ ಆಗಿಲ್ಲ. 29 ಬಾರಿ ಹೈಕೋರ್ಟ್‌ನಲ್ಲಿ ನಮ್ಮ ವಿಚಾರಣೆ ನಡೆದು, ಕೊನೆಗೆ ಸರಕಾರದ ಆದೇಶವನ್ನು ಎತ್ತಿ ಹಿಡಿದು, ನಮ್ಮ ಪರ ಕೋರ್ಟ್ ತೀರ್ಪು ನೀಡಿದೆ’

-ಗೋಪಾಲ ಪೂಜಾರಿ

Tags

Akrama-SakramaGopal Poojary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X