Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಡಿವೈಎಸ್ಪಿ ವಿರುದ್ಧ ಅಂಬೇಡ್ಕರ್...

ಉಡುಪಿ ಡಿವೈಎಸ್ಪಿ ವಿರುದ್ಧ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Sept 2024 9:01 PM IST
share
ಉಡುಪಿ ಡಿವೈಎಸ್ಪಿ ವಿರುದ್ಧ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

ಉಡುಪಿ: ಹಲವು ಸಾಧನೆಗಳ ಕಿರೀಟಗಳನ್ನು ತೊಟ್ಟ ಉಡುಪಿ ಜಿಲ್ಲೆಯ ದಲಿತರು ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲ ಗೊಳಿಸುವ ಖಾಕಿ ತೋಳಗಳ ಕಾಟಕ್ಕೆ ಎಂದೂ ಹೆದರಲಾರರು ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಗುರುವಾರ ಸಂಜೆ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣವನ್ನು ದುರ್ಬಲ ಪಡಿಸುತ್ತಿದ್ದಾರೆಂದು ಆರೋಪಿಸಿ, ಡಿವೈಎಸ್ಪಿ ಪ್ರಭು ಅವರನ್ನು ಅಮಾನತು ಗೊಳಿಸುವಂತೆ ಆಗ್ರ ಹಿಸಿ ಅಂಬೇಡ್ಕರ್ ಯುವಸೇನೆ ಜಿಲ್ಲಾ ಘಟಕ ಆಯೋಜಿಸಿದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ದೌರ್ಜನ್ಯಕ್ಕೆ ಒಳಗಾದವರು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ, ಪ್ರಕರಣಕ್ಕೆ ಸಿಸಿಟಿವಿ ದ್ರಶ್ಯಾವಳಿ ಮತ್ತು ಇತರರು ಸಾಕ್ಷಿ ನುಡಿದಿದ್ದರೂ, ನ್ಯಾಯಲಯ ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದರೂ, ಪ್ರಕರಣಕ್ಕೆ ಸರಿ ಯಾದ ಸಾಕ್ಷಾಧಾರವಿಲ್ಲ ಎಂದು ಬಿ.ರಿಪೋರ್ಟ್ ಹಾಕಿರುವುದರ ಹಿಂದೆ ಉಡುಪಿ ಡಿವೈಎಸ್ಪಿ ಪ್ರಭು ಅವರು ಆರೋಪಿ ಗಳಿಂದ ಆಮಿಷಕ್ಕೆ ಒಳಗಾಗಿದ್ದಾರೆ ಎಂದು ಅವರು ಆರೋಪಿಸಿದರು.

ಒಬ್ಬ ಅನುಸೂಚಿತ ಜಾತಿಗಳ ದೌರ್ಜನ್ಯ ಕಾಯ್ದೆಯ ತನಿಖಾಧಿಕಾರಿಯಾಗಿ ಪ್ರಕರಣಕ್ಕೆ ಪೂರಕವಾದ ಸಾಕ್ಷಿಗಳನ್ನು ಬಲಪಡಿಸಬೇಕಾದ ಪೋಲೀಸ್ ಉಪಾಧೀಕ್ಷಕರೇ ಕರ್ತವ್ಯ ಲೋಪವೆಸಗಿ ಆರೋಪಿಗಳಿಗೆ ನೆರವಾಗುವುದು ನಾಚಿಕೆಗೇಡು ಎಂದರು.

ಅಂಬೇಡ್ಕರ್, ಸಂವಿಧಾನ, ಬುದ್ಧನ ಬಗ್ಗೆ ಮಾತನಾಡುತ್ತಾ ಹಿಂದಿನಿಂದ ದಲಿತರ ಬೆನ್ನಿಗೆ ಚೂರಿ ಹಾಕುವ ಇಂತಹ ಅಧಿಕಾರಿಗಳನ್ನು ಸರಕಾರ ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ರಂಗಕರ್ಮಿ ಉದ್ಯಾವರ ನಾಗೇಶ್‌ಕುಮಾರ್ ಮಾತನಾಡಿ, ದಲಿತರ ಪರ ನ್ಯಾಯವಿದ್ದರೂ ಬೀದಿಯಲ್ಲಿ ನಿಂತು ಪ್ರಜಾ ಪ್ರಭುತ್ವ ರಕ್ಷಕರಿಗೆ ದಿಕ್ಕಾರ ಕೂಗುವ ಪರಿಸ್ಥಿತಿ ಬಂದಿರುವುದು ದುರಾದೃಷ್ಟಕರ. ಆರೋಪಿಗಳ ಪರ ಪೊಲೀಸ್ ಉಪಾಧೀಕ್ಷರು ಶಾಮೀಲಾಗಿರವುದು ಖಂಡನಾರ್ಹ ಎಂದರು.

ಪ್ರಗತಿಪರ ಚಿಂತಕ ಸಂಜೀವ ಬಳ್ಕೂರು ಮಾತನಾಡಿ ಉಡುಪಿಯ ದಲಿತ ವಿರೋಧಿ ಡಿವೈಎಸ್ಪಿಯನ್ನು ತಕ್ಷಣ ಅಮಾನತುಗೊಳಿಸದಿದ್ದಲ್ಲಿ ಉಗ್ರ ಹೋರಾಟ ಸಂಘಟಿಸುವುದಾಗಿ ಎಚ್ಚರಿಸಿದರು.

ಸಭೆಯನ್ನುದ್ದೇಶಿ ದಲಿತ ಹೋರಾಟಗಾರ್ತಿ ಸುಂದರಿ ಪುತ್ತೂರು, ಕಾಂಗ್ರೆಸ್ ಮುಖಂಡ ಪ್ರಖ್ಯಾತ್ ಶೆಟ್ಟಿ, ಕೃಷ್ಣ ಬಂಗೇರ, ಅನಂತ ನಾಯ್ಕ ಮುಂತಾದವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಯುವಸೇನೆಯ ಹರೀಶ್ ಸಲ್ಯಾನ್, ಯುವರಾಜ್ ಪುತ್ತೂರು, ರವಿರಾಜ್, ಭಗವಾನ್, ಸಾಧು ಚಿಟ್ಪಾಡಿ, ಪ್ರಸಾದ್ ಮಲ್ಪೆ, ಸತೀಶ್ ಮಂಚಿ, ಸುರೇಶ್ ಚಿಟ್ಪಾಡಿ, ಸಂಧ್ಯಾ ತಿಲಕ್‌ರಾಜ್, ಸರಸ್ವತಿ ಕಿನ್ನಿಮುಲ್ಕಿ, ಅರುಣ್ ಸಲ್ಯಾನ್, ಮೀನಾಕ್ಷಿ ಮಾಧವ ಬನ್ನಂಜೆ, ದೀಪಕ್ ಕೋಟ್ಯಾನ್, ಅಹಮ್ಮದ್ ಉಡುಪಿ, ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯ್ಕ, ಶರತ್ ಶೆಟ್ಟಿ, ಕುಸುಮ ಗುಜ್ಜರಬೆಟ್ಟು ಮುಂತಾದವರು ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X