ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಗ್ರಾಪಂ ಸದಸ್ಯರು ಬಿಜೆಪಿಯಿಂದ ಉಚ್ಛಾಟನೆ

ಉಡುಪಿ, ಆ.19: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಂದಾರ್ತಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಬಿಜೆಪಿ ಬೆಂಬಲಿತ ಸದಸ್ಯರಿಬ್ಬರನ್ನು 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.
ಮಂದಾರ್ತಿ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಸುಕುಮಾರ್ ಶೆಟ್ಟಿ ಮತ್ತು ಜ್ಯೋತಿ ಎಸ್.ಹೆಗ್ಡೆ ಅವರನ್ನು ಕುಂದಾಪುರ ಮಂಡಲ ಅಧ್ಯಕ್ಷ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೂಚನೆ ಯಂತೆ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್.ಕಲ್ಮಾಡಿ ತಿಳಿಸಿದ್ದಾರೆ.
Next Story





