Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರಂತರಂತಹ ವಿದ್ವಾಂಸರ ಪ್ರವೇಶದಿಂದ...

ಕಾರಂತರಂತಹ ವಿದ್ವಾಂಸರ ಪ್ರವೇಶದಿಂದ ಮಾತ್ರ ಕಲೆ ಉಳಿಯಲು ಸಾಧ್ಯ: ಡಾ.ಬಿಳಿಮಲೆ

‘ಕಾರಂತರ ಬದುಕು -ಬರಹಗಳ ಪ್ರಸ್ತುತತೆ’ ಕುರಿತು ಉಪನ್ಯಾಸ-ಸಂವಾದ

ವಾರ್ತಾಭಾರತಿವಾರ್ತಾಭಾರತಿ22 July 2025 8:39 PM IST
share
ಕಾರಂತರಂತಹ ವಿದ್ವಾಂಸರ ಪ್ರವೇಶದಿಂದ ಮಾತ್ರ ಕಲೆ ಉಳಿಯಲು ಸಾಧ್ಯ: ಡಾ.ಬಿಳಿಮಲೆ

ಉಡುಪಿ, ಜು.22: ಯಕ್ಷಗಾನ ಹೊರತು ಪಡಿಸಿ ಕರ್ನಾಟಕದ ಇತರ ಯಾವುದೇ ಕಲೆಗಳಿಗೂ ಒಬ್ಬನೇ ಒಬ್ಬ ಶಿವರಾಮ ಕಾರಂತ ಇವತ್ತಿನವರೆಗೆ ಸಿಕ್ಕಿಲ್ಲ. ಹಾಗಾಗಿ ಯಕ್ಷಗಾನ ಇಂದಿಗೂ ಉಳಿದಿವೆ ಮತ್ತು ಇತರ ಕಲೆಗಳು ನಾಶದ ಅಂಚಿಗೆ ತಲುಪಿದೆ. ಕಾರಂತರು ಕರಾವಳಿಯಲ್ಲಿ ಯಕ್ಷಗಾನ ಬದುಕಿಸಿದ ರೀತಿ ದೇಶದ ಯಾವುದೇ ಕಲೆಗಳಲ್ಲೂ ಆಗಿಲ್ಲ. ಕಾರಂತರಂತೆ ವಿದ್ವಾಂಸರು ಕಲೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಕಲೆ ಉಳಿಯುತ್ತದೆ. ಆ ನಿಟ್ಟಿನಲ್ಲಿ ಕಲೆಗೆ ವಿದ್ಯಾವಂತರ ಪ್ರವೇಶ ಅಗತ್ಯವಾಗಿ ಆಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಉಡುಪಿ ರಥಬೀದಿ ಗೆಳೆಯರು ಸಹಯೋಗದಲ್ಲಿ ಮಂಗಳವಾರ ಉಡುಪಿ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಆಯೋಜಿಸಲಾದ ಅರವಿನ ಬೆಳಕು ಉಪನ್ಯಾಸ ಮಾಲೆ-7 ಕಾರ್ಯಕ್ರಮದಲ್ಲಿ ಅವರು ‘ಡಾ.ಶಿವರಾಮ ಕಾರಂತರ ಬದುಕು ಮತ್ತು ಬರಹಗಳ ಪ್ರಸ್ತುತತೆ’ ಕುರಿತು ಉಪನ್ಯಾಸ ನೀಡಿದರು.

ಭೂಮಸೂದೆ ಕಾಯಿದೆಯಿಂದ ಜಮೀನು ಪಡೆದವರು ಇಂದು ತಮ್ಮ ಭೂಮಿಗಳು ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ಜಮೀನು ಎಂಬುದು ಕೆಲವರ ಕೈಯಲ್ಲಿ ಕ್ರೋಡೀಕರಣ ವಾಗುತ್ತಿದೆ. ಕಾರಂತರು ತನ್ನ ಕಾದಂಬರಿಯಲ್ಲಿ ಬರುವ ಚೋಮನಿಗೆ ಭೂಮಿ ಸಿಗಬೇಕೆಂದು ಆಸೆ ಪಟ್ಟರು. ಆದರೆ ಇಂದು ಆ ಚೋಮ ಮತ್ತೆ ಜಮೀನುನನ್ನು ಸಂಪೂರ್ಣವಾಗಿ ಕಳೆದುಕೊಳ್ಳುತ್ತಿದ್ದಾನೆ. ಈ ಸಂದೇಶ ನಮಗೆ ಸಿಕ್ಕಿದರೆ ಕಾರಂತರು ನಮ್ಮ ಒಳಗೆ ಜೀವಂತವಾ ಗಿರುತ್ತಾರೆ ಎಂದು ಅವರು ಅಭಿಪ್ರಾಯ ಪಟ್ಟರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಶಿವರಾಮ ಕಾರಂತರು ಚೋಮನ ದುಡಿಯಂತಹ ಕಾದಂಬರಿ ಬರೆದಿರುವುದು ಅವರ ಶ್ರೇಷ್ಠತೆಯಾಗಿದೆ. ಈ ದೇಶದ ನಿಜವಾದ ಸಮಸ್ಯೆ ಇರುವುದು ನೆಲ ಹಂಚಿಕೆ ಯಲ್ಲಿಯೇ ಹೊರತು ಬ್ರಿಟಿಷರು ಇಲ್ಲಿ ಇರುವುದರಿಂದಲ್ಲ ಎಂಬುದನ್ನು ಶಿವರಾಮ ಕಾರಂತರು ಪ್ರತಿಪಾದಿ ಸಿದ್ದರು. ಇದು ಕಾಲವನ್ನು ಮೀರಿದ ಯೋಚನೆಯಾಗಿದೆ. ಕಾರಂತರ ಮೈಮನಗಳ ಸುಳಿಯಲ್ಲಿ ಕಾದಂಬರಿಯು ಕನ್ನಡದ ಮೊದಲ ಸ್ತ್ರೀವಾದಿ ಕಾದಂಬರಿಯಾಗಿದೆ ಎಂದರು.

20ನೇ ಶತಮಾನದಲ್ಲಿನ ಪರಿಸರ ನಾಶ, ಸಾಹಿತ್ಯಿಕವಾಗಿ ಬಂಡಾಯ, ದಲಿತ, ಪ್ರಗತಿಪರ ಹಾಗೂ ನವ್ಯ ಚಳವಳಿಗಳಿಗೆ ಧೀಮಂತ ಹಾಗೂ ಜವಾಬ್ದಾರಿಯಿಂದ ಪ್ರತಿಕ್ರಿಯಿಸಿದ ಇಬ್ಬರು ಲೇಖಕರು ಅಂದರೆ ಕುವೆಂಪು ಮತ್ತು ಶಿವರಾಮ ಕಾರಂತರು. ಕನ್ನಡ ಭಾಷೆಗೆ ಸಂಬಂಧಿಸಿ ಬರೆದ ಲೇಖನ, ಮಾತುಗಳಿಂದ ಹಾಗೂ ಧರ್ಮದ ಬಗೆಗಿನ ವ್ಯಾಖ್ಯಾನದಿಂದ ಕುವೆಂಪು ನಮಗೆ ಇಂದಿಗೂ ಪ್ರಸ್ತುತರಾಗಿದ್ದಾರೆ. ಪ್ರಸ್ತುತ ಧರ್ಮ ರಾಜಕಾರಣವಾಗಿ ಬೇರೆ ಆಯಾಮ ತೆಗೆದುಕೊಂಡಿರುವಾಗ ಕುವೆಂಪು ಅವರನ್ನು ಓದುವುದು ಅಗತ್ಯ ಎಂದರು.

ಕಾರ್ಯಕ್ರಮವನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಭಾಷಾ ವಿಜ್ಞಾನಿ ಡಾ.ಕೆ.ಪಿ.ರಾವ್, ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಳಿಮಲೆ ಜೊತೆ ಸಂವಾದ ನಡೆಯಿತು. ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ.ನಿಕೇತನ ಕಾರ್ಯಕ್ರಮ ನಿರೂಪಿಸಿದರು.

‘ನಮ್ಮ ಇಡೀ ವ್ಯವಸ್ಥೆಗೆ ಇಂದು ಪರಿಸರ ಎಂಬುದು ಉದ್ಯಮವಾಗಿದ್ದರೆ ಶಿವರಾಮ ಕಾರಂತರಿಗೆ ಪರಿಸರ ಎಂಬುದು ಜೈವಿಕವಾಗಿತ್ತು. ಪರಿಸರವನ್ನು ಉದ್ಯಮವನ್ನಾಗಿಸಿದ ಪರಿಣಾಮಗಳಿಂದಾಗಿ ಇಂದು ದುರಂತಗಳು ಸಂಭವಿಸುತ್ತಿವೆ. ಕಾರಂತರು ಪರಿಸರವನ್ನು ಉದ್ಯಮವಾಗಿ ನೋಡದೆ ಜೈವಿಕ ಪ್ರತಕ್ರಿಯೆಯಾಗಿ ನೋಡಿದರು. ಅದಕ್ಕೆ ಅತ್ಯುತ್ತಮ ಉದಾಹರಣೆ ಅವರ ಬೆಟ್ಟ ಜೀವ ಕಾದಂಬರಿ’

-ಡಾ.ಪುರುಷೋತ್ತಮ ಬಿಳಿಮಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X