Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಪ್ಪುಂದ ನಾಡದೋಣಿ ದುರಂತ: ಸಚಿವ ಮಂಕಾಳ...

ಉಪ್ಪುಂದ ನಾಡದೋಣಿ ದುರಂತ: ಸಚಿವ ಮಂಕಾಳ ವೈದ್ಯ ಭೇಟಿ

ಎರಡೂ ಕುಟುಂಬಗಳಿಗೆ ತಲಾ ಆರು ಲಕ್ಷ ಪರಿಹಾರ ಚೆಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ1 Aug 2023 9:32 PM IST
share
ಉಪ್ಪುಂದ ನಾಡದೋಣಿ ದುರಂತ: ಸಚಿವ ಮಂಕಾಳ ವೈದ್ಯ ಭೇಟಿ

ಬೈಂದೂರು, ಆ.1: ಉಪ್ಪುಂದ ಸಮೀಪದ ಮಡಿಕಲ್ ಕರ್ಕಿಕಳಿ ಬಳಿಯ ಸಮುದ್ರದಲ್ಲಿ ದೋಣಿ ದುರಂತದ ಸಂಭವಿಸಿದ ಸ್ಥಳಕ್ಕೆ ಮಂಗಳವಾರ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮೃತ ಹಾಗೂ ನಾಪತ್ತೆಯಾದ ಮೀನುಗಾರರ ಮನೆಗೆ ತೆರಳಿದ ಸಚಿವರು ಎರಡೂ ಕುಟುಂಬಗಳಿಗೆ ಮೀನುಗಾರ ಸಂಕಷ್ಟ ಪರಿಹಾರ ನಿಧಿ ಯಿಂದ ತಲಾ ಆರು ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರಿಸಿದರು. ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಕೊಡೇರಿ ಬಂದರಿನ ಕಾಮಗಾರಿಗೆ ಅನುದಾನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಅನುದಾನ ಒದಗಿಸಿಲು ಸಿಎಂ ಸಕರಾತ್ಮಕವಾಗಿ ಸ್ಪಂದಿಸಿ ದ್ದಾರೆ. ಶೀಘ್ರ ಬಂದರಿನ ಎರಡು ಭಾಗದಲ್ಲಿ ತಲಾ 250 ಮೀಟರ್ ಉದ್ದ ಬ್ರೇಕ್ ವಾಟರ್ ವಿಸ್ತರಿಸುವ ಕಾಮಗಾರಿ ಸಡೆಸಲಾಗುವುದು ಎಂದರು.

ಮೀನುಗಾರ ಸಂಕಷ್ಟ ಪರಿಹಾರ ನಿಧಿಯಿಂದ ಎರಡು ಕುಟುಂಬಗಳಿಗೆ ತಲಾ ಆರು ಲಕ್ಷ ರೂ ಪರಿಹಾರ ನೀಡಲಾಗಿದೆ. ಹಾನಿಗೀಡಾದ ದೋಣಿ ಹಾಗೂ ಬಲೆಗಳಿಗೆ ಸಮರ್ಪಕ ಪರಿಹಾರ ವಿತರಿಸಲಾಗುವುದು. ಘಟನೆ ನಡೆದು 24 ಗಂಟೆಯೊಳಗೆ ಪರಿಹಾರ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕರಾವಳಿ ಭಾಗದ 320ಕಿ.ಮೀ ಉದ್ದದ ಕಡಲತೀರದ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕಾಗಿ ಈಗಾಗಲೇ ಸರ್ವೇ ಕಾರ್ಯ ನಡೆದಿದ್ದು, ಅದರ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಶ್ವತ ತಡೆಗೋಡೆ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಬಾರಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮತ್ಸ್ಯಾಶ್ರಯ ಯೋಜನೆಯಡಿ 100 ಮೀನುಗಾರಿಕಾ ಮನೆಗಳನ್ನು ನೀಡಲಾಗುವುದು. ಕರಾವಳಿ ಭಾಗದ ಮೀನುಗಾರರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಮಾಜಿ ಜಿಪಂ ಅಧ್ಯಕ್ಷ ಎಸ್.ರಾಜು ಪೂಜಾರಿ, ಮುಖಂಡ ರಾದ ಮದನಕುಮಾರ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಬಿ.ಎಸ್.ಸುರೇಶ ಶೆಟ್ಟಿ, ದೀಪಕ್ ಕುಮಾರ ಶೆಟ್ಟಿ, ಮೋಹನ ಪೂಜಾರಿ, ರಾಣಿಬಲೆ ಮೀನುಗಾರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ, ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಮೀನುಗಾರಿಕಾ ಹಾಗೂ ಬಂದರು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಶೋಧ ಕಾರ್ಯ ಮುಂದುವರಿಕೆ

ಉಪ್ಪುಂದ ಸಮೀಪ ಸಮುದ್ರದಲ್ಲಿ ದೋಣಿ ದುರಂತದಲ್ಲಿ ನೀರುಪಾಲಾದ ಮೀನುಗಾರ ಕರ್ಕಿಕಳಿಯ ಸತೀಶ್ ಖಾರ್ವಿ(31) ಎಂಬವರಿ ಗಾಗಿ ಇಂದು ಕೂಡ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಅವರ ಬಗ್ಗೆ ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಗಂಗೊಳ್ಳಿಯ ಕರಾವಳಿ ಕವಾಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನಂಜಪ್ಪ ನೇತೃತ್ವದ ತಂಡ ಡ್ರೋನ್ ಮೂಲಕ ಪತ್ತೆ ಕಾರ್ಯ ನಡೆಸಿತು. ಸ್ಥಳಕ್ಕೆ ಕರಾವಳಿ ಕವಾಲು ಪೊಲೀಸ್ ಕಾರ್ಯಪಡೆ ಬಂದಿದ್ದು, ಬೆಳಗ್ಗೆಯಿಂದ ಡ್ರೋನ್ ಮೂಲಕ ನಾಪತ್ತೆಯಾದ ಸತೀಶ್ ಖಾರ್ವಿ ಅವರನ್ನು ಹುಡುಕುವ ಕಾರ್ಯ ನಡೆಸಿದ್ದೇವೆ. ಆದರೆ ಕಡಲ ಅಬ್ಬರ ಜಾಸ್ತಿ ಇರುವುದರಿಂದ ಯಾವುದೇ ಸುಳಿವು ಕಂಡು ಬಂದಿಲ್ಲ ಎಂದು ನಂಜಪ್ಪ ತಿಳಿಸಿದ್ದಾರೆ.

ಜು.31ರಂದು ಸಂಜೆ ಮೀನುಗಾರಿಕೆ ಮುಗಿಸಿ ದಡಕ್ಕೆ ಬರುತ್ತಿದ್ದ ನಾಡದೋಣಿ ಸಮುದ್ರದ ಅಲೆಗೆ ಸಿಲುಕಿ ಮುಗುಚಿ ಬಿತ್ತೆನ್ನಲಾಗಿದೆ. ಇದರಲ್ಲಿದ್ದ ಎಂಟು ಮಂದಿ ಪೈಕಿ ಸತೀಶ್ ಖಾರ್ವಿ ನೀರಿನಲ್ಲಿ ಮುಳುಗಿ ನಾಪತ್ತೆಯಾದರೆ, ಉಳಿದ ಏಳು ಮಂದಿ ಈಜಿ ದಡ ಸೇರಿದ್ದರು. ಈ ವೇಳೆ ತೀವ್ರವಾಗಿ ಅಸ್ವಸ್ಥ ಗೊಂಡಿದ್ದ ನಾಗೇಶ್ ಖಾರ್ವಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X