Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯದಲ್ಲಿ ಬೈಕ್ ಆಂಬ್ಯುಲೆನ್ಸ್‌ಗೆ...

ರಾಜ್ಯದಲ್ಲಿ ಬೈಕ್ ಆಂಬ್ಯುಲೆನ್ಸ್‌ಗೆ ಮತ್ತೆ ಚಾಲನೆ: ಆರೋಗ್ಯ ಸಚಿವ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ4 July 2026 9:49 PM IST
share
ರಾಜ್ಯದಲ್ಲಿ ಬೈಕ್ ಆಂಬ್ಯುಲೆನ್ಸ್‌ಗೆ ಮತ್ತೆ ಚಾಲನೆ: ಆರೋಗ್ಯ ಸಚಿವ ಯು.ಟಿ. ಖಾದರ್

ಉಡುಪಿ, ಜು.4: ವಾಹನ ದಟ್ಟಣೆಯಿಂದ ಆಂಬ್ಯುಲೆನ್ಸ್‌ಗಳಿಗೆ ಕಾರ್ಯ ನಿರ್ವಹಿಸಲು ಕಷ್ಟವಾಗುತ್ತಿದ್ದು, ಈ ನಿಟ್ಟಿನಲ್ಲಿ ಹಿಂದೆ ಆರಂಭಿಸಿದ್ದ ಬೈಕ್ ಆಂಬ್ಯುಲೆನ್ಸ್‌ಗೆ ಮತ್ತೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಪ್ರಾಕೃತಿಕ ವಿಕೋಪ ಸಂಬಂಧ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತ ನಾಡುತಿದ್ದರು. ಬೋಟ್ ಅಂಬುಲೆನ್ಸ್ ಬಗ್ಗೆಯೂ ಚಿಂತನೆ ನಡೆಸಲಾಗಿದ್ದು, ಅದರ ಬಗ್ಗೆಯೂ ತೀರ್ಮಾನ ಕೈಗೊಳ್ಳ ಲಾದುವುದು. ಮೆಟ್ರೋದಲ್ಲಿ ರೋಗಿಗಳಿಗೆ ಅನುಕೂಲವಾದ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೆಟ್ರೋ ಮುಖ್ಯಸ್ಥರ ಜೊತೆ ಚರ್ಚಿಸಿ, ಮುಂದೆ ಅನುಷ್ಠಾನ ಮಾಡ ಲಾಗುವುದು. ಈ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವರ ಗಮನಕ್ಕೂ ತರಲಾಗಿದೆ ಎಂದರು.

ಎಸ್‌ಐಆರ್ ವಿರೋಧಿಸಿಲ್ಲ: ಎಸ್‌ಐಆರ್‌ಗೆ ಕಾಂಗ್ರೆಸ್ ಯಾವತ್ತೂ ವಿರೋಧ ಮಾಡಿಲ್ಲ. ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹಕ್ಕನ್ನು ಕಸಿದು ಕೊಳ್ಳದಂತೆ ಜನಜಾಗೃತಿ ಮೂಡಿಸಲಾಗುತ್ತಿದೆ. ಎಸ್‌ಐಆರ್ ದುರು ಪಯೋಗ ಮಾಡಿ, ಮತದಾರರ ಪಟ್ಟಿಯಿಂದ ಅರ್ಹರನ್ನು ಕೈಬಿಡಬಾರದು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡು ವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಎಸ್‌ಐಆರ್ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಪ್ರಾತ್ರ ಇಲ್ಲ. ಮತದಾನದಿಂದ ಯಾರು ಕೂಡ ವಂಚಿತರಾಗಬಾರದು ಎಂಬುದು ರಾಜ್ಯ ಸರಕಾರದ ಉದ್ದೇಶವಾಗಿದ್ದು, ಆ ನಿಟ್ಟಿ ನಲ್ಲಿ ಜನಸಾಮಾನ್ಯರಿಗೆ ಸಹಾಯ ಮಾಡಲಾಗುತ್ತಿದೆ. ಎಸ್‌ಐಆರ್ ಸಮಸ್ಯೆ ಬಗ್ಗೆ ಆರೋಪಗಳಿದ್ದರೆ ಚುನಾವಣಾ ಆಯೋಗಕ್ಕೆ ತಿಳಿಸಬೇಕು. ಮುಂದೆ ಅವರು ಸೂಕ್ತ ಆದೇಶ ಮಾಡಬಹುದು. ಜನರು ಚುನಾವಣಾ ಆಯೋಗದ ಆದೇಶವನ್ನು ಪಾಲಿಸಬೇಕಾಗಿದೆ ಎಂದರು.

ಪರಿಹಾರಕ್ಕೆ 20 ಕೋಟಿ ರೂ. ಮೀಸಲು: ಮುಂದಿನ ಮಳೆಗಾಲದ ಸಂದರ್ಭಲ್ಲಿ ಯಾವುದೇ ಅನಾಹುತ ಸಂಭವಿಸಿ ದಾಗ ಸರಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿ ಸುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಸಂತ್ರಸ್ತರ ಹಕ್ಕಿನ ಸೌಲಭ್ಯ ಹಾಗೂ ಪರಿಹಾರವನ್ನು ತಕ್ಷಣವೇ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಿಧಿಯಲ್ಲಿ 20 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಸಂತ್ರಸ್ತರಿಗೆ ಯಾವುದೇ ವಿಳಂಬ ಮಾಡದೆ ತಕ್ಷಣ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಹಶೀಲ್ದಾರ್ ಖಾತೆಗಳಲ್ಲಿ ತಲಾ 20ಲಕ್ಷ ರೂ. ಅನುದಾನವನ್ನು ಇಡಲಾಗಿದೆ. ಅದೇ ರೀತಿ ಮೆಸ್ಕಾಂ, ನಗರಾಭಿವೃದ್ಧಿ, ಅರಣ್ಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಕಂಟ್ರೋಲ್ ರೂಂ(1926) ಪ್ರಾರಂಭಿಸಲಾಗಿದೆ. ಅದೇ ರೀತಿ ಜಿಲ್ಲಾಡಳಿತ ಮತ್ತು ಪೊಲೀಸ್ ಕಂಟ್ರೋಲ್ ರೂಂಗೂ ಯಾವುದೇ ತೊಂದರೆ ಆದಾಗ ಸಂಪರ್ಕಿಸ ಬಹುದು. ಅದಕ್ಕೆ ತಕ್ಷಣವೇ ಸ್ಪಂದಿಸಲಾಗುತ್ತದೆ. ವಿಪತ್ತು ಕಾಲದಲ್ಲಿ ಎಲ್ಲರೂ ಕೈಜೋಡಿಸಿಕೊಂಡು ಕೆಲಸ ಮಾಡಬೇಕಾಗಿದೆ. ಗ್ರಾಮೀಣ ಮಟ್ಟದಲ್ಲಿ ಗ್ರಾಪಂ ಆಡಳಿತಾಧಿಕಾರಿಗಳು, ಪಿಡಿಓಗಳು, ಸಂಘಸಂಸ್ಥೆ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳನ್ನು ಸೇರಿಕೊಂಡು ಟಾಸ್ಕ್ ಫೋರ್ಸ್ ರಚಿಸಿ ವಿಪತ್ತನ್ನು ಎದುರಿಸುವಂತೆ ಸೂಚಿಸಲಾಗಿದೆ.

ಉಡುಪಿ ಜಿಲ್ಲಾಸ್ಪತ್ರೆ ಉದ್ಘಾಟನೆ ಬಗ್ಗೆ ಮುಂದಿನ ವಾರ ನಿರ್ಧಾರ

ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮ ರ್ಪಕ ನಿರ್ವಹಣೆ ಕುರಿತು ಮುಂದಿನ ವಾರದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ರೇಷನ್ ಕಾರ್ಡ್ ಸಮಸ್ಯೆ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಸಂಬಂಧ ಪಟ್ಟ ಇಲಾಖೆಗೆ ಸೂಚನೆ ನೀಡಿದ್ದಾರೆ. ಆದಷ್ಟು ಶೀಘ್ರದಲ್ಲಿ ಆ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಅವರು ಹೇಳಿದರು.

Tags

BikeambulancelaunchestateHealth MinisterU.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X