Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಮನ ಹೆಸರಿನಲ್ಲಿ ಬಿಜೆಪಿಯ ರಾಜಕಾರಣ:...

ರಾಮನ ಹೆಸರಿನಲ್ಲಿ ಬಿಜೆಪಿಯ ರಾಜಕಾರಣ: ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ23 Jan 2024 2:03 PM IST
share
ರಾಮನ ಹೆಸರಿನಲ್ಲಿ ಬಿಜೆಪಿಯ ರಾಜಕಾರಣ: ಸಚಿವ ಶಿವರಾಜ್ ತಂಗಡಗಿ

ಉಡುಪಿ, ಜ.23: ರಾಮ ಮಂದಿರ ವಿಚಾರದಲ್ಲಿ ನಾವು ಅಂತರ ಕಾಯ್ದು ಕೊಂಡಿಲ್ಲ. ನಾವು ಕೂಡ ರಾಮ, ಆಂಜನೇಯರ ಭಕ್ತರೇ ಆಗಿದ್ದೇವೆ. ಆದರೆ ಬಿಜೆಪಿಯವರು ಅದನ್ನು ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮ ಇದ್ದರೆ ಮಾತ್ರ ರಾಜಕಾರಣ ಮಾಡಲು ಸಾಧ್ಯ. ಅಭಿವೃದ್ಧಿ, ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 10ವರ್ಷಗಳಿಂದ ಬಿಜೆಪಿ ಸರಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ. ಅವರು ಎಷ್ಟು ರೈತರಿಗೆ ನೀರಾವರಿ ಯೋಜನೆ ಮಾಡಿಕೊಟ್ಟಿದ್ದಾರೆ. ಎಷ್ಟು ಯುವಕರಿಗೆ ಉದ್ಯೋಗ ನೀಡಿದ್ದಾರೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಎಷ್ಟು ಬಡವರಿಗೆ ಮನೆ ನಿರ್ಮಿಸಿಕೊಟ್ಟಿದ್ದಾರೆ ಎಂದು ಹೇಳಲಿ. ಇದನ್ನೆಲ್ಲ ಬಿಟ್ಟು ರಾಮನನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ನಮ್ಮೆಲ್ಲರ ಮನೆಯಲ್ಲೂ ದೇವರ ಕೋಣೆ ಇದೆ. ನಾವು ಪ್ರತಿದಿನ ಪೂಜೆ ಮಾಡಿಯೇ ಹೊರಗಡೆ ಕಾಲಿಡುತ್ತೇವೆ. ಆದರೆ ಬಿಜೆಪಿಯವರು ದೇವರನ್ನು ಬೀದಿಗೆ ತಂದು ಬಿಟ್ಟಿದ್ದಾರೆ. ನಾವು ಬಿಜೆಪಿಯವರ ಹಾಗೆ ದೇವರನ್ನು ಇಟ್ಟು ರಾಜಕಾರಣ ಮಾಡುವುದಿಲ್ಲ ಎಂದು ಅವರು ಹೇಳಿದರು.

ನಾನು ನಿಶ್ಚಯವಾಗಿಯೂ ಅಯೋಧ್ಯೆ ಹೋಗುತ್ತೇನೆ. ಪ್ರತಿವರ್ಷ ನಾನು ಆಂಜನೇಯನ ಮಾಲೆ ಹಾಕುತ್ತೇನೆ. ಅದನ್ನು ಭಕ್ತಿಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಹಾಕುತ್ತೇನೆಯೇ ಹೊರತು ಬಿಜೆಪಿಯವರ ಹಾಗೆ ಚುನಾವಣೆ ದೃಷ್ಠಿಯಿಂದ ಅಲ್ಲ. ಇವರಿಗೆ ಚುನಾವಣೆ ಬಂದಾಗ ನೆನಪು ಆಗುವುದು ಧರ್ಮ, ಮಸೀದಿ, ಇಲ್ಲದಿದ್ದರೆ ಪಾಕಿಸ್ತಾನ. ಮತ್ತೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟೇ ಇವರು ಎರಡು ಅವಧಿಗೆ ಆಡಳಿತ ನಡೆಸಿದ್ದಾರೆ ಎಂದು ಅವರು ಟೀಕಿಸಿದರು.

ನಿಗಮ ಮಂಡಳಿ ನೇಮಕ

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆಯನ್ನು ಮುಖ್ಯಮಂತ್ರಿ, ರಾಜಾಧ್ಯಕ್ಷರು ಹಾಗೂ ಹೈಕಮಾಂಡ್ ಮಾಡುತ್ತಾರೆ. ಜಿಲ್ಲಾವಾರು ಸಮಾನವಾಗಿ ಹಂಚಿಕೆ ಮಾಡಲಾಗುವುದು. ಕಾಂಗ್ರೆಸ್ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದರಿಂದ ಈ ಆಯ್ಕೆ ಪ್ರಕ್ರಿಯೆ ಸ್ವಲ್ಪ ವಿಳಂಬವಾಗುಬಹುದು ಎಂದು ಸಚಿವ ತಂಗಡಗಿ ತಿಳಿಸಿದರು.

ಕಳೆದ ಬಾರಿಯಂತೆ ಈ ಬಾರಿಯು ಯಕ್ಷಗಾನ ಸಮ್ಮೇಳನ ನಡೆಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಯಕ್ಷಗಾನ ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿ ಎರಡು ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ಆದಷ್ಟು ಬೇಗ ನೇಮಕ ಮಾಡಲಾಗುವುದು. ಅದರ ಬಳಿಕ ಅವರಿಗೆ ಜವಾಬ್ದಾರಿ ಕೊಟ್ಟ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ಅನುದಾನ ತಾರತಮ್ಯ ಇಲ್ಲ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಅನುದಾನ ನೀಡುವ ಬಗ್ಗೆ ಉಡುಪಿ ಜಿಲ್ಲೆಗೆ ತಾರತಮ್ಯ ಎಸಗಿರುವ ಕುರಿತ ಆರೋಪದ ಬಗ್ಗೆ ಉತ್ತರಿಸಿದ ಸಚಿವರು, ಅಂತಹ ಕೆಲಸ ಬಿಜೆಪಿಯವರು ಮಾತ್ರ ಮಾಡುತ್ತಾರೆಯೇ ಹೊರತು ನಾವು ಮಾಡಲ್ಲ. ನಾವು ಎಲ್ಲರನ್ನೂ ಸಾಮಾನವಾಗಿ ಕಾಣುತ್ತೇವೆ. ಸಮ ಪಾಲು, ಸಮ ಬಾಳು ಇದ್ದರೆ ಅದು ಕಾಂಗ್ರೆಸ್ ನಲ್ಲಿ ಮಾತ್ರ. ಬಿಜೆಪಿಯವರ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಕೇವಲ ಮಾತಿನಲ್ಲಿದೆ. ಯಾರಿಗೂ ಸಾಥ್ ಇಲ್ಲ, ವಿಕಾಸ್ ಕೂಡ ಇಲ್ಲ ಎಂದು ಟೀಕಿಸಿದರು.

ಅನುದಾನದಲ್ಲಿ ತಾರತಮ್ಯ ಮಾಡಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಯಾವುದೇ ಕಾರ್ಯಕ್ರಮದ ಬಗ್ಗೆ ಜಿಲ್ಲೆಯಿಂದ ಪ್ರಸ್ತಾವನೆ ಬಂದರೆ ಅದಕ್ಕೆ ಅದುನಾನ ಕೊಡುತ್ತೇವೆ. ಈ ಬಾರಿಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ 40-50ಕೋಟಿ ರೂ. ಕೇಳಿದ್ದೇವೆ. ನಮ್ಮಲ್ಲಿ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಕಣ್ಣಿಗೆ ಮಾತ್ರ ಕೊರತೆ ಕಾಣುತ್ತಿದೆ. ಗ್ಯಾರಂಟಿ ಬಗ್ಗೆ ವಿರೋಧ ಮಾಡುತ್ತಿದ್ದವರು ಈಗ ಮೋದಿ ಗ್ಯಾರಂಟಿ ಹೇಳಿ ನಮ್ಮ ಗ್ಯಾರಂಟಿಯನ್ನು ಕಾಪಿ ಮಾಡುತ್ತಿದ್ದಾರೆ ಎಂದು ಸಚಿವರು ವ್ಯಂಗ್ಯವಾಡಿದರು.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಅವ್ಯವಹಾರದ ಕುರಿತು ಪ್ರವಾಸೋದ್ಯಮ ಇಲಾಖೆಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಶಾಸ್ತ್ರೀಯ ಭಾಷಾ ಅನುದಾನಕ್ಕೆ ಮನವಿ

ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆತು 15ವರ್ಷಗಳಾಗಿವೆ. ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದ ತಮಿಳುನಾಡಿಗೆ ಕೇಂದ್ರ ಸರಕಾರದಿಂದ ವಿಶೇಷ ಅನುದಾನ ದೊರೆತಿದೆ. ಆದರೆ ಈ ಬಗ್ಗೆ ಕರ್ನಾಟಕ ಸಂಸದರು ರಾಜ್ಯದ ಪರವಾಗಿ ಮೋದಿಯವರಿಗೆ ಒಂದು ಪತ್ರ ಕೂಡಲ ಬರೆದಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದರು.

ನಾನು ಈ ತಿಂಗಳ ಅಂತ್ಯಕ್ಕೆ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಅನುದಾನ ನೀಡುವಂತೆ ಮನವಿ ಮಾಡುತ್ತೇನೆ. ರಾಜ್ಯದ 26 ಮಂದಿ ಸಂಸದರು ಮೋದಿ ಜೊತೆ ಮಾತನಾಡಲು ಹೆದರುತ್ತಾರೆ. ಇನ್ನು ಅನುದಾನ ಎಲ್ಲಿಂದ ಕೇಳುತ್ತಾರೆ. ಇಲ್ಲಿ ಬಂದು ಕೇವಲ ಮಾಧ್ಯಮದವರ ಮುಂದೆ ಮಾತ್ರ ಮಾತನಾಡುವ ಇವರಿಗೆ ಮೋದಿ ಎದುರು ಮಾತನಾಡುವ ಧೈರ್ಯ ಇಲ್ಲ. ಇವರಿಗೆ ಕರ್ನಾಟಕ ಹಾಗೂ ಕನ್ನಡದ ಅಭಿಮಾನ ಇದ್ದರೆ ಅನುದಾನ ಕೊಡುವ ಕೆಲಸ ಮಾಡಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X