ಬ್ರಹ್ಮಾವರ : ತೆಂಗಿನ ಎಣ್ಣೆ ಮಿಲ್ ನಲ್ಲಿ ಬೆಂಕಿ ಅವಘಡ

ಬ್ರಹ್ಮಾವರ: ಕೊಕ್ಕರ್ಣೆ ಪೇಟೆಯಲ್ಲಿ ತೆಂಗಿನ ಎಣ್ಣೆ ಮಿಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಫ್ಯಾಕ್ಟರಿಯಲ್ಲಿ ದಾಸ್ತಾನು ಇರಿಸಿದ ತೆಂಗಿನಎಣ್ಣೆ ಮತ್ತು ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ.
Next Story





