ಬ್ರಹ್ಮಾವರ: ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.
ಪ್ರಮೋದ್ ಬಡ ಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
Next Story





