Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್...

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ವಾರ್ತಾಭಾರತಿವಾರ್ತಾಭಾರತಿ20 March 2026 10:23 AM IST
share
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಈದುಲ್ ಫಿತ್ರ್ ಅನ್ನು ಸಂಭ್ರಮ, ಸಡಗರದಿಂದ ಶುಕ್ರವಾರ ಆಚರಿಸಲಾಯಿತು.

ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.

ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ‌್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಈ ಸಂದರ್ಭ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಹಬ್ಬದ ಶುಭಾಶಯ ತಿಳಿಸಿದರು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡರು.


ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ‌್ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗ ದಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.

ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಬಹುತೇಕ ಮಸೀದಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

"ಪೋಷಕರು ತಮ್ಮ ಮಕ್ಕಳನ್ನು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು. ಇಂದು ಅತಿ ವೇಗ, ಅಜಾಗ್ರತೆಯಿಂದ ವಾಹನ ಚಲಾವಣೆಯ ಪರಿಣಾಮ ರಸ್ತೆ ಅಪಘಾತಕ್ಕೆ ಯುವಜನತೆ ಬಲಿಯಾಗುತ್ತಿದ್ದು ಈ ಬಗ್ಗೆ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಎಲ್ಲರೊಂದಿಗೆ ಬೆರೆತು ಹಬ್ಬವನ್ನು ಆಚರಿಸುವ ಮೂಲಕ ಸೌಹರ್ದತೆಯನ್ನು ಎತ್ತಿ ಹಿಡಿಯಬೇಕು"

- ಒಬೇದುರ‌್ರಹ್ಮಾನ್ ನದ್ವಿ, ಇಮಾಮ್, ಹಾಶಿಮಿ ಮಸೀದಿ, ನಾಯರ್ ಕೆರೆ, ಬ್ರಹ್ಮಗಿರಿ



ಕುಂದಾಪುರದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಕುಂದಾಪುರ: ಪವಿತ್ರ ಈದ್-ಉಲ್-ಫಿತ್ರ್‌ ಅನ್ನು ಸಂಭ್ರಮ ಹಾಗೂ ಸಡಗರದಿಂದ ಕುಂದಾಪುರದಲ್ಲಿ ಶುಕ್ರವಾರ ಬೆಳಿಗ್ಗೆ ಆಚರಿಸಲಾಯಿತು.

ಜಾಮೀಯಾ ಮಸೀದಿಯಿಂದ ಕುಂದಾಪುರದ ನಗರದ ಹೃದಯ ಭಾಗದಲ್ಲಿರುವ ಮೈದಾನದವರೆಗೂ ಬೃಹತ್ ಮೆರವಣಿಗೆ ಮೂಲಕ ಸಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ಜಮಾತ್‌ನ ಖತೀಬರಾದ ಶಾಹೀದ್ ಹುಸೇನ್ ದುವಾ ಹಾಗೂ ನಮಾಝ್ ನೆರವೇರಿಸಿದರು. ಕುಂದಾಪುರ ಜಾಮೀಯಾ ಮಸೀದಿಯ ಅಧ್ಯಕ್ಷ ಮಹಮ್ಮದ್ ವಸೀಂ ಬಾಷಾ, ಉಪಾಧ್ಯಕ್ಷ ಹಾಗೂ ಪುರಸಭೆ ಮಾಜಿ ಸದಸ್ಯ ಅಬು ಮಹಮ್ಮದ್ ಮುಝಾಫರ್, ಕಾರ್ಯದರ್ಶಿ ಶಂಸ್ ತಬ್ರೇಝ್ ಮೊದಲಾದವರು ಉಪಸ್ಥಿತರಿದ್ದರು.

ಈದ್‌ ನಮಾಝ್‌ ಗೆ ಸೇರಿದವರು ಪರಸ್ಪರ ಆಲಂಗಿಸಿಕೊಂಡು ಶುಭಾಶಯವನ್ನು ವಿನಿಮಯ ಮಾಡಿಕೊಂಡು ಸಿಹಿ ತಿಂದು ಈದ್ ಅಚರಿಸಿದರು. ಕುಂದಾಪುರ ನಗರದಲ್ಲಿ ಹಾಗೂ ಬೈಂದೂರು, ಕುಂದಾಪುರ ತಾಲೂಕಿನ ವಿವಿದೆಡೆಯಲ್ಲಿ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲಾಯಿತು.

ಗುರುವಾರ ಸಂಜೆ ಚಂದ್ರ ದರ್ಶನವಾದ ಹಿನ್ನೆಲೆ ಕರಾವಳಿಯಲ್ಲಿ ಇಂದು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.







Tags

CelebrationEidul FitracrossUdupidistrict
share
ವಾರ್ತಾಭಾರತಿ
ವಾರ್ತಾಭಾರತಿ
Next Story
X