Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಚೆ ನೌಕರರ 26ನೇ ಕರ್ನಾಟಕ ವೃತ್ತ ಜಂಟಿ...

ಅಂಚೆ ನೌಕರರ 26ನೇ ಕರ್ನಾಟಕ ವೃತ್ತ ಜಂಟಿ ಸಮ್ಮೇಳನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 May 2024 7:29 PM IST
share
ಅಂಚೆ ನೌಕರರ 26ನೇ ಕರ್ನಾಟಕ ವೃತ್ತ ಜಂಟಿ ಸಮ್ಮೇಳನಕ್ಕೆ ಚಾಲನೆ

ಉಡುಪಿ: ನ್ಯಾಶನಲ್ ಅಸೋಸಿಯೇಶನ್ ಆಫ್ ಪೋಸ್ಟಲ್ ಎಂಪ್ಲಾಯೀಸ್ ಗ್ರೂಪ್ ಸಿ, ನ್ಯಾಶನಲ್ ಯೂನಿಯನ್ ಆಫ್ ಪೋಸ್ಟಲ್ ಎಂಪ್ಲಾಯೀಸ್, ಪೋಸ್ಟ್ಮೆನ್ ಆ್ಯಂಡ್ ಎಂಟಿಎಸ್, ನ್ಯಾಶನಲ್ ಯೂನಿ ಯನ್ ಆಫ್ ಗ್ರಾಮೀಣ ಡಕ್ ಸೇವಕ್ ಕರ್ನಾಟಕ ವೃತ್ತ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ 26ನೇ ಕರ್ನಾಟಕ ವೃತ್ತ ಸಮ್ಮೇಳನಕ್ಕೆ ರವಿವಾರ ಚಾಲನೆ ನೀಡಲಾಯಿತು.

ಸಮ್ಮೇಳನವನ್ನು ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಅಂಚೆ ಇಲಾಖೆಯಲ್ಲಿ ಅರೆ ಸರಕಾರಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸರಕಾರ ಪೂರ್ಣಕಾಲಿಕ ನೌಕರರನ್ನಾಗಿ ನೇಮಕ ಮಾಡಬೇಕು. ಪ್ರಸ್ತುತ ಅಂಚೆ ಇಲಾಖೆ ನಮ್ಮ ಜನಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅದೇ ರೀತಿ ಅದರ ನೌಕರರು ಕೂಡ ಮುಖ್ಯ ವಾಗುತ್ತಿದ್ದಾರೆ. ಜಾತಿ, ಮತವನ್ನು ಮೀರಿ ಸಂಘಟಿತರಾದಾಗ ನಮ್ಮ ಸಂಘಟನೆ ಇನ್ನಷ್ಟು ಬಲಯುತವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಮುಖ್ಯ ಅತಿಥಿಗಳಾಗಿ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎನ್ಎಪಿಇ ಗ್ರೂಪ್ ಸಿ ಪ್ರಧಾನ ಕಾರ್ಯದರ್ಶಿ ಶಿವಾಜಿ ವಸಿ ರೆಡ್ಡಿ, ಎನ್ಯುಪಿಇ ಪೋಸ್ಟ್ಮೆನ್ ಆ್ಯಂಡ್ ಎಂಟಿಎಸ್ ಪ್ರಧಾನ ಕಾರ್ಯದರ್ಶಿ ನಿಸಾರ್ ಮುಜಾವರ್, ನ್ಯಾಶನಲ್ ಯೂನಿಯನ್ ಆಫ್ ಗ್ರಾಮೀಣ ಡಕ್ ಸೇವಕ್ ಪ್ರಧಾನ ಕಾರ್ಯದರ್ಶಿ ಪಿ.ಯು. ಮುರಳೀಧರನ್, ಎಫ್ಎನ್ಪಿಓ ಮಾಜಿ ಕಾರ್ಯದರ್ಶಿ ಟಿ.ಎನ್.ರಾಹತೆ, ಅಂಚೆ ಕಚೇರಿಯ ನಿವೃತ್ತ ಹಿರಿಯ ಅಧೀಕ್ಷಕ ನವೀನ್ ಚಂದರ್, ಉಡುಪಿ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು ಮಾತನಾಡಿದರು.

ಅಧ್ಯಕ್ಷತೆಯನ್ನು ಎನ್ಎಪಿಇ ಗ್ರೂಪ್ ಸಿ ಕರ್ನಾಟಕ ವೃತ್ತ ಅಧ್ಯಕ್ಷ ಮೋಹನ್ ಕುಮಾರ್ ಕಟ್ಟಿಮನಿ ವಹಿಸಿದ್ದರು. ಗ್ರೂಪ್ ಸಿ ಕರ್ನಾಟಕ ವೃತ್ತ ಕಾರ್ಯದರ್ಶಿ ಎಸ್.ಖಂಡೋಜಿ ರಾವ್, ಎನ್ಯುಪಿಇ ಪೋಸ್ಟ್ಮೆನ್ ಆ್ಯಂಡ್ ಎಂಟಿಎಸ್ ಕರ್ನಾಟಕ ವೃತ್ತ ಅಧ್ಯಕ್ಷ ಪಿ.ಸತೀಶ್, ಕಾರ್ಯದರ್ಶಿ ಆರ್. ಮಹಾದೇವ್, ನ್ಯಾಶನಲ್ ಯೂನಿಯನ್ ಆಫ್ ಗ್ರಾಮೀಣ ಡಕ್ ಸೇವಕ್ ಕರ್ನಾಟಕ ವೃತ್ತ ಅಧ್ಯಕ್ಷ ಮೋಹನ್ ರೆಡ್ಡಿ ದೇಸಾಯಿ, ಪ್ರಧಾನ ಕಾರ್ಯದರ್ಶಿ ಎಂ.ಪಿ. ಚಿತ್ರಸೇನಾ, ಡಿ.ವಿ.ಪಡುಬಿದ್ರೆ ಉಪಸ್ಥಿತರಿದ್ದರು.

ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕ ಸುರೇಶ್ ಕೆ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ಎಪಿಇ ಗ್ರೂಪ್ ಸಿ ಉಡುಪಿ ಕಾರ್ಯದರ್ಶಿ ಪ್ರವೀಣ್ ಜತ್ತನ್ನ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X