Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂದುವರೆದ ಕೊರಗರ ಧರಣಿ: ಅಲ್ಪಸಂಖ್ಯಾತರ...

ಮುಂದುವರೆದ ಕೊರಗರ ಧರಣಿ: ಅಲ್ಪಸಂಖ್ಯಾತರ ವೇದಿಕೆ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ8 Jan 2026 7:49 PM IST
share
ಮುಂದುವರೆದ ಕೊರಗರ ಧರಣಿ: ಅಲ್ಪಸಂಖ್ಯಾತರ ವೇದಿಕೆ ಬೆಂಬಲ

ಉಡುಪಿ, ಜ.8: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 25ನೆ ದಿನವಾದ ಗುರುವಾರವೂ ಮುಂದುವರೆದಿದೆ.

ಕೊರಗ ಸಮುದಾಯ ಈ ನ್ಯಾಯಯುತ ಬೇಡಿಕೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ನಿಯೋಗ ಧರಣಿ ಸ್ಥಳಕ್ಕೆ ಭೇಟಿ ನೀಡಿತು. ಕೊರಗ ಸಮುದಾಯ ಜನಸಂಖ್ಯೆ ದಿನದಿಂದ ದಿನಕ್ಕೆ ತಮ್ಮ ಸಮುದಾಯ ನಶಿಸಿ ಹೋಗುತ್ತಿದ್ದು, ಈಗ ಕೇವಲ 14,000 ಜನಸಂಖ್ಯೆ ಮಾತ್ರ ಉಳಿದಿದೆ. ಇದಕ್ಕೆ ಕಾರಣ ಆ ಸಮುದಾಯದ ವರಿಗೆ ಯಾವುದೇ ರೀತಿಯ ಉತ್ತಮ ದರ್ಜೆಯ ಉದ್ಯೋಗ ಇಲ್ಲದೆ ಇರುವುದು. ಪದವಿ ಮಾಡಿದವರು ಕೂಡ ಪೌರ ಕಾರ್ಮಿಕರಾಗಿ ದುಡಿಯುತ್ತಿದ್ದು, ಕುಡಿಯುವ ದುಶ್ಚಟಕ್ಕೆ ಬಲಿಯಾಗಿ 35-40 ವರ್ಷ ದಲ್ಲಿಯೇ ಅನಾರೋಗ್ಯಪೀಡಿತರಾಗಿ ಸಾಯುತ್ತಿರುವುದಾಗಿ ಕೊರಗ ಮುಖಂಡರು ನಿಯೋಗಕ್ಕೆ ತಿಳಿಸಿದರು.

ಅದಕ್ಕಾಗಿ ಹಲವು ವರ್ಷಗಳಿಂದ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗ ನೇರ ನೇಮಕಾತಿಯಿಂದ ನೀಡುವ ಬೇಡಿಕೆ ಸಲ್ಲಿಸಿದ್ದೇವೆ. ಸರಕಾರದ ಹಿರಿಯ ನಾಯಕರು ಕೇವಲ ಮನವಿ ಪಡೆದು ಭರವಸೆ ಮಾತ್ರ ನೀಡುತ್ತಿದ್ದಾರೆ. ಆದ್ದರಿಂದ ನಾವು ನಮ್ಮ ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಇಲ್ಲಿ ಧರಣಿ ಮಾಡುತ್ತಿದ್ದೇವೆ ಎಂದು ಮುಖಂಡರು ನಿಯೋಗಕ್ಕೆ ಮಾಹಿತಿ ನೀಡಿದರು.

ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ ಚಾರ್ಲ್ಸ್ ಆ್ಯಂಬ್ಲರ್ ಮಾತನಾಡಿ, ನಮ್ಮ ವೇದಿಕೆ ಸಂಪೂರ್ಣವಾಗಿ ತಮಗೆ ಬೆಂಬಲ ನೀಡುತ್ತದೆ ಮತ್ತು ಈ ಬಗ್ಗೆ ಮುಖ್ಯಮಂತ್ರಿಯವರಿಗೆ ನಾವು ಸಹ ಮನವಿ ನಿಡುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವೇದಿಕೆಯ ಕಾರ್ಯದರ್ಶಿ ಝಫರುಲ್ಲಾ ಟಿ.ಎಂ. ಹೂಡೆ, ನಿಕಟಪೂರ್ವ ಅಧ್ಯಕ್ಷ ಇಸ್ಮಾಯಿಲ್ ಹುಸೈನ್ ಕಟಪಾಡಿ, ಮಾಜಿ ಅಧ್ಯಕ್ಷ ಡಾ.ಜೆರಾಲ್ಡ್ ಪಿಂಟೊ, ಉಪಾಧ್ಯಕ್ಷೆ ಶಾಂತಿ ಪಿರೇರಾ, ಮೇರಿ ಡಿಸೋಜ, ಗ್ಲಾಡ್ನನ್ ಕರ್ಕಡ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X