Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರಿ ಶಾಲೆ ಉಳಿಯದಿದ್ದರೆ ದೇಶಕ್ಕೆ...

ಸರಕಾರಿ ಶಾಲೆ ಉಳಿಯದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ: ಡಾ.ನಿರಂಜನಾರಾಧ್ಯ

ವಾರ್ತಾಭಾರತಿವಾರ್ತಾಭಾರತಿ28 Aug 2023 6:02 PM IST
share
ಸರಕಾರಿ ಶಾಲೆ ಉಳಿಯದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ: ಡಾ.ನಿರಂಜನಾರಾಧ್ಯ

ಬೈಂದೂರು, ಆ.28: ಎರಡು ದಶಕಗಳ ಹಿಂದೆ ಜಾರಿಗೊಂಡ ಶಾಲಾಭಿವೃದ್ಧಿ ಸಮಿತಿಯು ಸಂವಿಧಾನಾತ್ಮಕವಾಗಿ, ಶಾಸನಬದ್ಧವಾಗಿ ಕಾರ್ಯನಿರ್ವಹಿಸಿದ ಪರಿಣಾಮ ಹಲವು ಸರಕಾರಿ ಶಾಲೆಗಳಿಗೆ ಪುನಶ್ಚೇತನ ಸಿಕ್ಕಿದೆ. ರಾಜ್ಯದಲ್ಲಿ ಶಾಲೆಗಳ ಉಳಿವಿಗೆ ಎಸ್‌ಡಿಎಂಸಿ ಕಾರಣವಾಗಿದೆ. ಹಾಗಾಗಿ ಇದರ ಪದಾಧಿಕಾರಿಗಳು ಜವಬ್ದಾರಿ ಅರಿತು ಕೆಲಸ ಮಾಡಬೇಕೆಂದು ಅಭಿವೃದ್ಧಿ ಶಿಕ್ಷಣ ತಜ್ಞ, ಸಮನ್ವಯ ವೇದಿಕೆಯ ಮಹಾಪೋಷಕ ಪ್ರೊ.ಡಾ.ನಿರಂಜನಾರಾಧ್ಯ ವಿ.ಪಿ. ಹೇಳಿದ್ದಾರೆ.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೈಂದೂರು ತಾಲೂಕು ವತಿಯಿಂದ ಉಪ್ಪುಂದದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಸಾಧಕ ಎಸ್‌ಡಿಎಂಸಿ ಅಧ್ಯಕ್ಷರು, ಹಳೆ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಎಸ್‌ಡಿಎಂಸಿ ಸದಸ್ಯರಿಗೆ ಸಾಮರ್ಥ್ಯವರ್ಧನಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸರಕಾರಿ ಶಾಲೆ ಉಳಿಯದಿದ್ದರೆ ಈ ದೇಶಕ್ಕೆ ಭವಿಷ್ಯವಿಲ್ಲ. ಹಾಗಾಗಿ ಶಾಲೆಗಳ ಬಾಗಿಲು ಮುಚ್ಚುವ ಕೆಲಸವಾಗಬಾರದು. ಸಮಾಜದಲ್ಲಿನ ಸಾಮುದಾಯಿಕ ಶಾಲೆಗಳು ಉಳಿದು ರಾಜ್ಯದ ಸಾಂಸ್ಕೃತಿಕತೆ ಬೆಳೆಯಲು ಇದು ಪೂರಕವಾಗುತ್ತದೆ. ಸರಕಾರಿ ಶಿಕ್ಷಣ ಸಂಸ್ಥೆ ಬೆಳೆಯಲು ಸರಕಾರ ಅಂತಹ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಇದಕ್ಕೆ ರಾಜಕೀಯ ಇಚ್ಚಾಶಕ್ತಿ ಜೊತೆಗೆ ಅಧಿಕಾರಿಗಳ ಕಾರ್ಯನ್ಮೋಖ ನಡೆ ಅಗತ್ಯ. ಸರಕಾರಿ ಶಾಲೆ ಹಂತಹಂತವಾಗಿ ಮುನ್ನಡೆಸುವಲ್ಲಿ ಹರೇಕಳ ಹಾಜಬ್ಬರ ಕಾರ್ಯ ಶ್ಲಾಘನೀಯವಾಗಿದ್ದು ಇದು ಎಲ್ಲರಿಗೂ ಮಾದರಿ ಎಂದರು.

ಈ ಸಂದರ್ಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಹಾಗೂ ಪ್ರೊ.ಡಾ.ನಿರಂಜನಾರಾಧ್ಯ ವಿ.ಪಿ. ಅವರನ್ನು ಗೌರವಿಸಲಾಯಿತು. ಐದು ತಾಲೂಕುಗಳ ಸಾಧಕ ಎಸ್‌ಡಿಎಂಸಿ ಅಧ್ಯಕ್ಷರು, ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸ ಲಾಯಿತು. ಉಪ್ಪುಂದ ಸರಕಾರಿ ಪದವು ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜು ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯ ರಾಜ್ಯಾಧ್ಯಕ್ಷ ಉಮೇಶ್ ಜಿ ಗಂಗವಾಡಿ, ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರ, ರಾಜ್ಯ ಕಾರ್ಯದರ್ಶಿ ಪಾರ್ವತಿ ಜಿ.ಎಸ್. ದಾವಣಗೆರೆ, ಜಿಪಂ ಮಾಜಿ ಸದಸ್ಯೆ ಗೌರಿ ದೇವಾಡಿಗ, ತಾಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಮನ್ವಯಾಧಿಕಾರಿ ರಾಮಕೃಷ್ಣ ದೇವಾಡಿಗ, ಉಪ್ಪುಂದ ಶಿಕ್ಷಣ ಪ್ರೇಮಿ ಪ್ರಕಾಶ್ ಭಟ್, ಅಮಾಸೆಬೈಲು ಸರಕಾರಿ ಶಾಲೆ ದತ್ತು ಸ್ವೀಕರಿಸಿದ ದಾನಿ ಶಂಕರ ಐತಾಳ್, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವೇದಿಕೆಯ ಬೈಂದೂರು ಕಾರ್ಯದರ್ಶಿ ಜ್ಯೋತಿ ಜಯರಾಮ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೊತೆ ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್ಯ ಸ್ವಾಗತಿಸಿದರು. ಬೈಂದೂರು ತಾಲೂಕು ಸಂಪನ್ಮೂಲ ವ್ಯಕ್ತಿಗಳಾದ ಸುಮಾ ಆಚಾರ್ಯ ಉಪ್ರಳ್ಳಿ ಸನ್ಮಾನ ಪತ್ರ ವಾಚಿಸಿದರು. ರಾಘವೇಂದ್ರ ಗಾಣಿಗ ಅರೆಶಿರೂರು ವಂದಿಸಿದರು. ದಿನೇಶ್ ಆಚಾರ್ಯ ಉಳ್ಳೂರು ಕಾರ್ಯಕ್ರಮ ನಿರೂಪಿಸಿದರು.

‘ಸರಕಾರಿ ಶಾಲೆಗಳನ್ನು ಉನ್ನತೀಕರಿಸಲು ರಾಕೇಟ್ ಸೈನ್ಸ್ ಬೇಕಿಲ್ಲ. ರಾಜಕೀಯ ಇಚ್ಚಾಶಕ್ತಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೂಡಿಕೆ ಮಾಡಿಸಬೇಕು. ಸ್ವಾತಂತ್ರ್ಯ ಪೂರ್ವ-ನಂತರದಿಂದಲೂ ಸಮಾನ ಶಿಕ್ಷಣ ಬಗ್ಗೆ ಹೋರಾಟ ನಡೆದಿದೆ. 76ವರ್ಷ ಕಳೆದರೂ ವ್ಯವಸ್ಥೆಯಲ್ಲಿ ನಿರೀಕ್ಷಿತ ಬದವಣೆಯಾಗಿಲ್ಲ. ಜಾತಿ, ಧರ್ಮ, ಲಿಂಗ, ಹುದ್ದೆ ಮೀರಿ ಶಿಕ್ಷಣವು ಪ್ರತಿಯೊಬ್ಬರಿಗೆ ಸಿಗಬೇಕೆಂಬ ಕಲ್ಪನೆಯ ಹೋರಾಟದ ನಡುವೆ ಸಚಿವರು ನೀಡಿದ ಸರಕಾರಿ ಶಾಲೆಗಳ ವಿಲೀನ ಹೇಳಿಕೆ ಸರಿಯಲ್ಲ. ಸರಕಾರಿ ಶಾಲೆಗೆ ವಿದ್ಯಾರ್ಥಿಗಳು ಬಾರದಿರಲು ಕಾರಣ ವೇನೆಂಬುದನ್ನು ಸರಕಾರ, ಅಧಿಕಾರಿಗಳು ಪರಾಮರ್ಷಿಸಬೇಕು. ವಿದ್ಯಾರ್ಥಿ ಗಳು, ಪೋಷಕರಿಗೆ ಭರವಸೆ ನೀಡಬೇಕು’

-ಪ್ರೊ.ಡಾ.ನಿರಂಜನಾರಾಧ್ಯ ವಿ.ಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X