Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ತೀರದ ಭದ್ರತೆ ನಿಶ್ಚಿತವಾಗಿದ್ದರೆ...

ಕರಾವಳಿ ತೀರದ ಭದ್ರತೆ ನಿಶ್ಚಿತವಾಗಿದ್ದರೆ ದೇಶದ ಸಮೃದ್ಧಿ: ವಿಭು ಸಿಂಗ್

‘ಕರಾವಳಿ ಸೈಕ್ಲೋಥಾನ್’ ಸೈಕಲ್ ಜಾಥಕ್ಕೆ ಕುಂದಾಪುರದಲ್ಲಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ26 March 2025 7:03 PM IST
share
ಕರಾವಳಿ ತೀರದ ಭದ್ರತೆ ನಿಶ್ಚಿತವಾಗಿದ್ದರೆ ದೇಶದ ಸಮೃದ್ಧಿ: ವಿಭು ಸಿಂಗ್

ಕುಂದಾಪುರ: ಸಮುದ್ರ ತೀರದಿಂದ ಬರುವ ಉಗ್ರರ ಚಟುವಟಿಕೆ ಸಹಿತ ವಿವಿಧ ಅಪಾಯಗಳ ಬಗ್ಗೆ ಜಾಗೃತಿಗೊಳಿಸುವುದು ನಮ್ಮ ಕರ್ತವ್ಯವಾಗಿದೆ. ಶೇ.95ರಷ್ಟು ವ್ಯಾಪಾರ ವಹಿವಾಟು ಸಮುದ್ರ ಮಾರ್ಗದ ಮೂಲಕವೇ ನಡೆಯುತ್ತದೆ. ಹೀಗಾಗಿ ಸಮುದ್ರತೀರದ ಭದ್ರತೆ ನಿಶ್ಚಿತವಾಗಿದ್ದರೆ ದೇಶದ ಸಮೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಕರಾವಳಿ ತೀರ ಭದ್ರತೆಯನ್ನು ಶಾಶ್ವತವಾಗಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಐಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ವಿಭು ಸಿಂಗ್ ಪ್ರತಿಹಾರ್ ಹೇಳಿದ್ದಾರೆ.

ಸಿಐಎಸ್‌ಎಫ್ ನೇತೃತ್ವದಲ್ಲಿ ‘ಸುರಕ್ಷಿತ ತಟ, ಸಮೃದ್ಧ ಭಾರತ’ ಪರಿಕಲ್ಪನೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುಜರಾತ್‌ನಿಂದ ಕನ್ಯಾಕುಮಾರಿ ತನಕ ಆರಂಭಗೊಂಡಿರುವ ಸೈಕಲ್ ಜಾಥ ’ಕರಾವಳಿ ಸೈಕ್ಲೋಥಾನ್’ ಬುಧವಾರ ಕುಂದಾಪುರಕ್ಕೆ ಆಗಮಿಸಿದ ಬಳಿಕ ಸೇನಾಭಿಮಾನಿ ಬಳಗ ಕುಂದಾಪುರದ ವತಿಯಿಂದ ಇಲ್ಲಿನ ಮೊಗವೀರ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಕರಾವಳಿ ಮಾತ್ರವಲ್ಲದೇ ಇತರೆ ಭಾಗಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದ ಕೂಡಲೇ ತಕ್ಷಣವೇ ಪೋಷಕರು ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ಮುಟ್ಟಿಸಬೇಕು. ಯುವ ಜನತೆ ಯಾವುದೇ ಕಾರಣಕ್ಕೂ ಮಾದಕ ವ್ಯಸನಗಳಿಗೆ ಬಲಿಯಾಗಬಾರದು. ಮಾದಕ ವ್ಯಸನಗಳು ದೇಶದ ಭವಿಷ್ಯವನ್ನೇ ಹಾಳು ಮಾಡುವ ಪಿಡುಗಾಗಿದ್ದು, ದೇಶದ ಭವಿಷ್ಯವಾಗಿರುವ ನೀವೆಲ್ಲರೂ ವ್ಯಸನಗಳ ಹಿಂದೆ ಬೀಳದೆ ಉತ್ತಮ ಸಾಧನೆಗಳನ್ನು ಮಾಡಿದರೆ ಮಾತ್ರ ನಮ್ಮ ದೇಶ ಯಶಸ್ಸಿನ ದೇಶವಾಗಿ ಹೊರಹೊಮ್ಮಲಿದೆ ಎಂದರು.

ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿದರು. ಸಹಾಯಕ ಕಮಾಂಡೆಂಟ್‌ಗಳಾದ ರಾಮಮೂರ್ತಿ ಕೌಂಡಲ್, ಸಾಯಿ ನಾಯಕ್, ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ಚಂದ್ರ, ಡಿವೈಎಸ್ಪಿಎಚ್.ಡಿ.ಕುಲಕರ್ಣಿ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಪುರಸಭೆಯ ಅಧ್ಯಕ್ಷ ಮೋಹನ್‌ದಾಸ್ ಶೆಣೈ, ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಪುರಸಭೆಯ ಮುಖ್ಯಾಧಿಕಾರಿ ಆನಂದ್ ಜೆ, ಮೊಗವೀರ ಯುವ ಸಂಘಟನೆಯ ಉದಯ್ ಕುಮಾರ್ ಹಟ್ಟಿಯಂಗಡಿ ಉಪಸ್ಥಿತರಿದ್ದರು.

ಸೈಕಲ್ ರ್ಯಾಲಿಯ ಮೂಲಕ ಕುಂದಾಪುರಕ್ಕೆ ಆಗಮಿಸಿದ ಯೋಧರನ್ನು ಕುಂದಾಪುರದ ಸಂಗಮ್ ಜಂಕ್ಷನ್‌ನಲ್ಲಿ ಸ್ವಾಗತಿಸಿಕೊಂಡ ಬಳಿಕ, ಭಂಡಾರ್ಕಾರ್ಸ್‌ ಹಾಗೂ ಬಿ.ಬಿ.ಹೆಗ್ಡೆ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳು ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತಾ ಚಂಡೆವಾದ್ಯಗಳ ಭವ್ಯ ಮೆರವಣಿಗೆಯೊಂದಿಗೆ ಚಿಕನ್‌ಸಾಲ್ ರಸ್ತೆಯ ಮಾರ್ಗವಾಗಿ ಮೊಗವೀರ ಭವನಕ್ಕೆ ಬರಮಾಡಿಕೊಂಡರು. ಸೇನಾಭಿಮಾನಿ ಬಳಗದ ರಾಜೇಶ್ ಕಾವೇರಿ ಪ್ರಸ್ತಾಪಿಸಿ ಸ್ವಾಗತಿಸಿದರು. ಭಂಡಾರ್ಕಾರ್ಸ್‌ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿನಿ ಸಿಂಧು ನಿರೂಪಿಸಿದರು.

‘ರ್ಯಾಲಿಯಲ್ಲಿ ಸುಮಾರು 125 ಸೈಕ್ಲಿಸ್ಟ್‌ಗಳು ಭಾಗಿಯಾಗಿದ್ದು, ಪಶ್ಚಿಮ ಭಾರತವನ್ನು ಕೇಂದ್ರೀಕರಿಸಿಕೊಂಡು ಗುಜರಾತ್, ದೀಯುದಾಮನ್, ಮಹಾರಾಷ್ಟ್ರ, ಗೋವಾ ಸಂಚರಿಸಿ ಇದೀಗ ಕರ್ನಾಟಕಕ್ಕೆ ಬಂದಿದ್ದೇವೆ. ಇಲ್ಲಿಂದ ಕೇರಳ ಮಾರ್ಗವಾಗಿ ಮಾ.31ರೊಳಗೆ ಕನ್ಯಾಕುಮಾರಿ ತಲುಪಲಿದ್ದೇವೆ. ನಮ್ಮ ಇನ್ನೊಂದು ತಂಡ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ, ಪುದುಚೇರಿ ಮಾರ್ಗವಾಗಿ ಕನ್ಯಾಕುಮಾರಿಗೆ ಮಾ.31ರಂದು ತಲುಪಲಿದೆ’

-ವಿಭು ಸಿಂಗ್ ಪ್ರತಿಹಾರ್, ಡೆಪ್ಯೂಟಿ ಕಮಾಂಡೆಂಟ್, ಸಿಐಎಸ್‌ಎಫ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X