Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಜೆಪಿ ಸೋಲಿಸಿ ಸಂವಿಧಾನ ಉಳಿಸಲು ದಸಂಸ...

ಬಿಜೆಪಿ ಸೋಲಿಸಿ ಸಂವಿಧಾನ ಉಳಿಸಲು ದಸಂಸ ಮಹಾ ಒಕ್ಕೂಟ ಕರೆ

‘ಈ ಚುನಾವಣೆ ಶೋಷಿತ ಸಮುದಾಯದ ಅಳಿವು ಉಳಿವಿನ ಪ್ರಶ್ನೆ’

ವಾರ್ತಾಭಾರತಿವಾರ್ತಾಭಾರತಿ23 April 2024 3:51 PM IST
share
ಬಿಜೆಪಿ ಸೋಲಿಸಿ ಸಂವಿಧಾನ ಉಳಿಸಲು ದಸಂಸ ಮಹಾ ಒಕ್ಕೂಟ ಕರೆ

ಉಡುಪಿ, ಎ.23: ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿರುವ ಬಿಜೆಪಿ, ಈ ದೇಶದ ಮೀಸಲಾತಿ ವ್ಯವಸ್ಥೆಯನ್ನು ಬುಡ ಮೇಲುಗೊಳಿಸಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಯಾಗಿ, ಗುಪ್ತ ಕಾರ್ಯಸೂಚಿಯನ್ನು ಹೊಂದಿರುವ ಬಿಜೆಪಿಯನ್ನು ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಸೋಲಿಸಬೇಕಾಗಿದೆ. ಈ ಚುನಾವಣೆ ದಲಿತರು, ಶೋಷಿತ ಸಮುದಾಯ, ಬಡವರ ಹಾಗೂ ಮಹಿಳೆಯರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು ಸಮಾನ ಮನಸ್ಥ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಉಡುಪಿ ಜಿಲ್ಲಾ ಸಂಚಾಲಕ ಮಂಜುನಾಥ್ ಗಿಳಿಯಾರು ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಮಹಾ ಒಕ್ಕೂಟದ ವತಿಯಿಂದ ಮನೆ ಮನಗಳಲ್ಲಿ ಅಂಬೇಡ್ಕರ್ ಅಭಿಯಾನವನ್ನು ಎ.21ರಿಂದ ಆರಂಭಿಸಲಾಗಿದೆ. ಅದರಂತೆ ದಲಿತರ ಕಾಲನಿಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

2014ರಿಂದ ಕಳೆದ 10ವರ್ಷಗಳಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಹಲವು ಜನವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಕಳೆದ 10ವರ್ಷಗಳಿಂದ ದಲಿತರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸಿಲ್ಲ. ಈ ನೀತಿಗಳು ಸಾಮಾಜಿಕ ನ್ಯಾಯಕ್ಕೆ ಕವಡೆ ಕಾಸಿನ ಬೆಲೆ ನೀಡದೆ ತೀಲಾಂಜಲಿ ಇಡುತ್ತಿವೆ. ಸಂವಿಧಾನವನ್ನು ಒಪ್ಪದ ಇವರು ಪದೇ ಪದೇ ಸಂವಿಧಾನ ಬದಲಾಯಿಸುವ ಹೇಳಿಕೆ ನೀಡುತ್ತಿರುವುದು ಆತಂಕಕಾರಿಯಾಗಿದೆ. ಇವರ ಅವಧಿಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆದಿವೆ ಎಂದು ಅವರು ದೂರಿದರು.

ಅದೇ ರೀತಿ ಸರಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ ಪರೋಕ್ಷವಾಗಿ ಮೀಸಲಾತಿಯನ್ನು ಕಿತ್ತು ಹಾಕುತ್ತಿದೆ. ಇದು ಶೋಷಿತ ಸಮುದಾಯಕ್ಕೆ ಬಹಳ ದೊಡ್ಡ ಆಘಾತವಾಗಿದೆ. ಆ ಮೂಲಕ ದಲಿತ ಸಮುದಾಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿದ್ದ ಲಕ್ಷಾಂತರ ಸರಕಾರಿ ಉದ್ಯೋಗವನ್ನು ಕಿತ್ತುಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿ ಕೊಳ್ಳದ ಬಿಜೆಪಿ, ಮೋದಿಯನ್ನು ಸರ್ವಾಧಿಕಾರಿಯನ್ನಾಗಿ ಬಿಂಬಿಸುತ್ತಿದೆ ಎಂದು ಅವರು ಆರೋಪಿಸಿದರು.

ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿದರೆ ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಅಪಾಯ ಒದಗುವುದು ಶತಸಿದ್ಧ. ಆದ್ದರಿಂದ ಪ್ರಜ್ಞಾವಂತ ಮತದಾರರು ಈ ಬಾರಿ ಸಂವಿಧಾನ ವಿರೋಧಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಬಾರದು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಹಾ ಒಕ್ಕೂಟದ ಪ್ರಮುಖರಾದ ವಾಸುದೇವ ಮುದೂರು, ಅಣ್ಣಪ್ಪ ನಕ್ರೆ ಕಾರ್ಕಳ, ವಿಶ್ವನಾಥ ಬೆಳ್ಳಂಪಳ್ಳಿ, ಶ್ಯಾಂ ಸುಂದರ್ ತೆಕ್ಕಟ್ಟೆ, ರಾಜು ಬೆಟ್ಟಿನಮನೆ, ಕುಮಾರ್ ಕೋಟ, ಸುರೇಶ್ ಹಕ್ಲಾಡಿ, ಶಿವಾನಂದ ಮೂಡಬೆಟ್ಟು, ಮೋಹನ್, ಚಂದ್ರಶೇಖರ್ ಉಡುಪಿ, ಕೀರ್ತಿ ಕುಮಾರ್, ಸಾವಿತ್ರಿ ಕಾರ್ಕಳ, ಸುಮಿತ್ರಾ ಕಾರ್ಕಳ ಉಪಸ್ಥಿತರಿದ್ದರು.

‘ಈ ದೇಶದ ಮುಸ್ಲಿಮರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಯಾರೋ ಒಬ್ಬ ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ತಪ್ಪಿತಸ್ಥರಂತೆ ಬಿಂಬಿಸ ಲಾಗುತ್ತಿದೆ ಮತ್ತು ಅನುಮಾನದ ದೃಷ್ಠಿಯಲ್ಲಿ ನೋಡಲಾಗುತ್ತಿದೆ. ಆದುದ ರಿಂದ ಎಲ್ಲ ಧರ್ಮ, ಜಾತಿಯವರು ಸೌಹಾರ್ದತೆ ಹಾಗೂ ಶಾಂತಿಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅಭ್ಯರ್ಥಿಗೆ ಈ ಬಾರಿಯ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಬೇಕಾಗಿದೆ’

-ಮಂಜುನಾಥ್ ಗಿಳಿಯಾರು, ಸಂಚಾಲಕರು, ಮಹಾ ಒಕ್ಕೂಟ

Tags

Dasamsa Maha okkutaBJPConstitution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X