Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರಕ್ಕೆ ಕೃಷಿ ಕಾಲೇಜು...

ಬ್ರಹ್ಮಾವರಕ್ಕೆ ಕೃಷಿ ಕಾಲೇಜು ಮಂಜೂರಾತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Oct 2023 9:35 PM IST
share
ಬ್ರಹ್ಮಾವರಕ್ಕೆ ಕೃಷಿ ಕಾಲೇಜು ಮಂಜೂರಾತಿಗೆ ಆಗ್ರಹ

ಉಡುಪಿ, ಅ.1: ಬ್ರಹ್ಮಾವರದ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಕೃಷಿ ಕಾಲೇಜೊಂದನ್ನು ಪ್ರಾರಂಭಿಸು ವಂತೆ ಕರಾವಳಿ ಕೃಷಿ ಕಾಲೇಜು ಹೋರಾಟ ಸಮಿತಿಯ ಪ್ರಮೋದ್ ಮಂದಾರ್ತಿ ಶನಿವಾರ ಇಲ್ಲಿ ಕರೆದ ಪತ್ರಿಕಾಗೋಷ್ಠಿ ಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರ ಮೂರು ದಶಕಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಸಂಶೋಧನಾ ಕೇಂದ್ರವು 350 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ನ್ನೊಳಗೊಂಡ ಕರಾವಳಿ ವಲಯದಲ್ಲಿ ಯಾವುದೇ ಕೃಷಿ ಹಾಗೂ ತೋಟಗಾರಿಕಾ ಕಾಲೇಜು ಇಲ್ಲ. ಹೀಗಾಗಿ ಇಲ್ಲಿ ಕೃಷಿ ಕಾಲೇಜೊಂದನ್ನು ಪ್ರಾರಂಭಿಸಬೇಕೆಂದು ಸಮಿತಿ ಕಳೆದ 10-13 ವರ್ಷಗಳಿಂದ ಹೋರಾಟ ನಡೆಸುತ್ತಿದೆ ಎಂದರು.

ಬಹುದಿನಗಳ ಬೇಡಿಕೆಯಂತೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಗಳಾಗಿದ್ದಾಗ 2010ರಲ್ಲಿ ಕೃಷಿ ಕಾಲೇಜನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದರೂ, ತಾಂತ್ರಿಕ ಕಾರಣದಿಂದ ಅದು ಕಾರ್ಯರೂಪಕ್ಕೆ ಬರದೇ, ಕೃಷಿ ಡಿಪ್ಲೋಮ ಕಾಲೇಜನ್ನು ಪ್ರಾರಂಭಿಸಲಾಯಿತು. ಈವರ್ಷದಿಂದ ಡಿಪ್ಲೋಮ ತರಗತಿಗೂ ಪ್ರವೇಶವನ್ನು ರದ್ದುಪಡಿಸಲಾಗಿದೆ ಎಂದರು.

ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಪೂರಕವಾದ ಎಲ್ಲಾ ಸೌಲಭ್ಯಗಳೂ ಲಭ್ಯವಿದೆ.ಕೃಷಿ ಮತ್ತು ತೋಟಗಾರಿಕಾ ಕೇಂದ್ರ 350 ಎಕರೆ ವಿಸ್ತೀರ್ಣವನ್ನುದಲ್ಲಿ ಸುಸಜ್ಜಿತವಾದ ಕಾಲೇಜು ಕಟ್ಟಡವಿದೆ. ಅಲ್ಲದೇ ಇಲ್ಲಿ ಬಾಲಕ ಮತ್ತು ಬಾಲಕಿಯರ ವಸತಿ ನಿಲಯ, ಆಧುನಿಕ ಪ್ರಯೋಗಾಲಯ, ಗ್ರಂಥಾಲಯ, ಗಣಕ ಯಂತ್ರ ಪ್ರಯೋಗಾಲಯ, ಕ್ರೀಡಾಂಗಣ, ಪ್ರಾಯೋ ಗಿಕ ಕೃಷಿಗೆ ಬೇಕಾದ ಜಾಗ ಎಲ್ಲವೂ ಇಲ್ಲಿ ಲಭ್ಯವಿದೆ. ಡಿಪ್ಲೋಮಾ ಕಾಲೇಜಿನ ಈ ಎಲ್ಲಾ ಸೌಲಭ್ಯಗಳಿಂದ ಕೃಷಿ ಸಂಬಂ ಧಿತ ಬಿಎಸ್ಸಿ ಕೋರ್ಸಿನ ಕಾಲೇಜನ್ನು ತಕ್ಷಣ ಪ್ರಾರಂಭಿಸಬಹುದಾಗಿದೆ ಎಂದು ಪ್ರಮೋದ್ ಮಂದಾರ್ತಿ ತಿಳಿಸಿದರು.

ಈ ಬಗ್ಗೆ ಜಿಲ್ಲೆಯ ಎಲ್ಲಾ ಐವರು ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಶಿವಮೊಗ್ಗ ಕೃಷಿ ಮತ್ತು ತೋಟ ಗಾರಿಕಾ ವಿವಿಯ ಕುಲಪತಿಗಳಿಗೆ ಮನವಿ ಸಲ್ಲಿಸಿ ಕಾಲೇಜು ಮಂಜೂರಾತಿಗೆ ಕೋರಲಾಗಿದೆ ಎಂದರು.

ಹಿಂದಿನ ಸರಕಾರ ಮೊದಲ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶವನ್ನು ರದ್ದುಪಡಿಸಿದೆ. ಇದರಿಂದ ಕೃಷಿ ಅಧ್ಯಯನ ಬಯಸುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಸರಕಾರ ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಇಲ್ಲಿಗೆ ಕೃಷಿ ಕಾಲೇಜನ್ನು ಮಂಜೂರು ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ರವೀಂದ್ರ ಎಚ್.ಆರ್.ಹೇರೂರು, ಅಜಿತ್ ಗೋಳಿಕಟ್ಟೆ, ಪ್ರವೀಣ್ ಯಕ್ಷಿಮಠ, ಗುರುರಾಜ್ ಕಾರ್ತಿಬೈಲು ಉಪಸ್ಥಿತ ರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X