Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಂವಿಧಾನಿಕ ಹಕ್ಕುಗಳ ನಿರಾಕರಣೆ...

ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಪ್ರಜಾಪ್ರಭುತ್ವದ ಅಧಃಪತನಕ್ಕೆ ಮುನ್ನುಡಿ: ಪಿ.ಸತೀಶ್

ವಿಮಾ ನೌಕರರ ಸಂಘಗ 65ನೇ ವಿಭಾಗೀಯ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Nov 2023 7:15 PM IST
share
ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಪ್ರಜಾಪ್ರಭುತ್ವದ ಅಧಃಪತನಕ್ಕೆ ಮುನ್ನುಡಿ: ಪಿ.ಸತೀಶ್

ಉಡುಪಿ: ಸರಕಾರದ ನೀತಿಗಳ ವಿರುದ್ಧ ಧ್ವನಿ ಎತ್ತಿದವರನ್ನು ದೇಶದ್ರೋಹಿಗಳೆಂದು ಬಿಂಬಿಸುತ್ತಿದೆ. ಸರಕಾರವು ಸಂವಿಧಾನದ ಎಲ್ಲಾ ಅಂಗ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ದೇಶದ ಜನರಿಗೆ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವ ಜೊತೆಗೆ ಸರಕಾರವು ಅಧಿಕಾರ ಕೇಂದ್ರೀಕರಣದತ್ತ ಹೆಜ್ಜೆ ಇಡುತ್ತ ಪ್ರಜಾ ಪ್ರಭುತ್ವದ ಅಧಃಪತನಕ್ಕೆ ಮುನ್ನುಡಿ ಬರೆಯುತ್ತಿದೆ ಎಂದು ದಕ್ಷಿಣ ಮಧ್ಯ ವಲಯ ವಿಮಾ ನೌಕರರ ಒಕ್ಕೂಟದ ಅಧ್ಯಕ್ಷ ಪಿ.ಸತೀಶ್ ಹೇಳಿದ್ದಾರೆ.

ಉಡುಪಿ ನಗರದ ಎಲ್‌ಐಸಿ ಎಂಪ್ಲಾಯೀಸ್ ಕೋ ಆಪರೇಟಿವ್ ಬ್ಯಾಂಕಿನ ಸಭಾಂಗಣದಲ್ಲಿ ರವಿವಾರ ನಡೆದ ವಿಮಾ ನೌಕರರ ಸಂಘ, ಉಡುಪಿ ವಿಭಾಗದ ೬೫ನೇ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸರಕಾರದ ನೀತಿಗಳಿಂದಾಗಿ ಇಂದು ಎಲ್.ಐ.ಸಿ.ಯೂ ಸೇರಿದಂತೆ ಎಲ್ಲಾ ಸಾರ್ವಜನಿಕ ರಂಗದ ಉದ್ದಿಮೆಗಳ ಭವಿಷ್ಯವು ಡೋಲಾಯಮಾನ ಸ್ಥಿತಿಯಲ್ಲಿ ಇದೆ. ಕಾರ್ಪೋರೆಟ್ ದೊರೆಗಳ ಕಪಿಮುಷ್ಟಿಯಲ್ಲಿರುವ ಸರಕಾರವು ಅವರ ಒತ್ತಾಸೆಯ ಮೇರೆಗೆ ನೀತಿಗಳನ್ನು ರೂಪಿಸಿ ಸಾರ್ವಜನಿಕ ರಂಗದ ಉದ್ದಿಮೆಗಳ ವಿನಾಶಕ್ಕೆ ನಾಂದಿ ಹಾಡುತ್ತಿದೆ ಎಂದು ಅವರು ತಿಳಿಸಿದರು.

ಸರಕಾರದ ತೆರಿಗೆ ನೀತಿಗಳಿಂದಾಗಿ ಜನಸಾಮಾನ್ಯರ ಉಳಿತಾಯ ಮತ್ತು ಹೂಡಿಕೆಯ ಪ್ರಮಾಣ ಅಗಾಧವಾಗಿ ಕುಂಠಿತವಾಗಿದ್ದು, ಇದು ಸಾರ್ವಜನಿಕ ರಂಗದ ಎಲ್.ಐ.ಸಿ.ಯ ಮೇಲೆ ಪರಿಣಾಮ ಬೀರುತ್ತಿದೆ ಎಂದ ಅವರು, ಕಳೆದ ೭೪ ವರ್ಷಗಳಿಂದ ಕಾರ್ಮಿಕರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿ ರುವ ಸಂಘದ ಹೋರಾಟಗಳಲ್ಲಿ ನಿರಂತರವಾಗಿ ಪಾಲ್ಗೊಂಡು ಸರಕಾರದ ನೀತಿಗಳ ವಿರುದ್ಧ ಹಾಗೂ ಸಾಮಾಜಿಕ ಬದಲಾವಣೆಗಾಗಿ ಶ್ರ್ರಮಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ ಉಪಾಧ್ಯಕ್ಷೆ ಎಸ್.ಕೆ.ಗೀತಾ ಮಾತನಾಡಿ, ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ಇಂದಿಗೂ ಹೋರಾಟ ನಡೆಸುವ ಜನಸಾಮಾನ್ಯರನ್ನು ಗಮನಿಸಿದಾಗ, ಸರಕಾರಗಳ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣಿಸುತ್ತಿದೆ. ದೇಶದ ಬಹುಮುಖೀ ಸಂಸ್ಕೃತಿಯನ್ನು ಕಾಪಾಡುವ ಸರಕಾರವು ಇಂದು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಏಕಮುಖಿ ಸಂಸ್ಕೃತಿಯನ್ನು ಜನತೆಯ ಮೇಲೆ ಹೇರಿ ದೇಶದ ಏಕತೆ ಮತ್ತು ಸಮಗ್ರತೆಗೆ ಭಂಗ ತರುತ್ತಿದೆ ಎಂದು ಆರೋಪಿಸಿದರು.

ಸರಕಾರಿ ರಂಗದ ಕೈಗಾರಿಕೆಗಳ ಮೇಲೆ ಪ್ರಹಾರ ನಡೆಸುವ ಸರಕಾರದ ನೀತಿಯು ಇಂದು ಸಾಲದ ಮೇಲೆ ಕಾರ್ಯನಿರ್ವಹಿಸಲ್ಪಡುತಿತ್ತಿದೆ. ಈ ವ್ಯವಸ್ಥೆಯಲ್ಲಿ ದೇಶದ ಜನಸಾಮಾನ್ಯರೂ ಕೂಡಾ ತಮ್ಮ ಅಗತ್ಯತೆಗಳಿಗಾಗಿ ಸಾಲವನ್ನು ಅವಲಂಬಿಸುವಂತಾಗಿದೆ. ಈ ಕಾಲಘಟ್ಟದಲ್ಲಿ ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮತ್ತು ವಿಮಾ ರಂಗದ ಅಗ್ರಗಣ್ಯ ಸಂಸ್ಥೆಯಾಗಿರುವ ಎಲ್.ಐ.ಸಿ.ಯನ್ನು ಉಳಿಸುವ ನಿಟ್ಟಿನಲ್ಲಿ ಪಣತೊಡಬೇಕು ಎಂದರು.

ಉಡುಪಿ ಜಿಲ್ಲಾ ಸಿಐಟಿಯು ಕೋಶಾಧಿಕಾರಿ ಶಶಿಧರ ಗೊಲ್ಲ ಮಾತನಾಡಿ ದರು. ಅಧ್ಯಕ್ಷತೆಯನ್ನು ವಿಮಾ ನೌಕರರ ಸಂಘ, ಉಡುಪಿ ವಿಭಾಗದ ಅಧ್ಯಕ್ಷ ಕೆ.ವಿಶ್ವನಾಥ್ ವಹಿಸಿದ್ದರು. ಎಲ್‌ಐಸಿ ಉಡುಪಿ ವಿಭಾಗದ ಹಿರಿಯ ವಿಭಾಗಾಧಿ ಕಾರಿ ರಾಜೇಶ್ ವಿ.ಮುಧೋಳ್ ಶುಭ ಹಾರೈಸಿದರು.

ವಿಮಾ ಪಿಂಚಣಿದಾರರ ಸಂಘದ ಕಾರ್ಯದರ್ಶಿ ವಿಠಲಮೂರ್ತಿ ಆಚಾರ್ಯ, ವಿಮಾ ಅಧಿಕಾರಿಗಳ ಸಂಘದ ಕಾರ್ಯದರ್ಶಿ ನರಸಿಂಹ ಪ್ರಭು, ವಿಮಾ ನೌಕರರ ಸಂಘದ ಮಹಿಳಾ ಉಪಸಮಿತಿಯ ಸಂಚಾಲಕಿ ನಿರ್ಮಲ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಿ.ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು. ಕವಿತಾ ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಒಟ್ಟು 250 ಮಂದಿ ಸದಸ್ಯರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ

2023-24ರ ಸಾಲಿಗೆ ಸಂಘದ ನೂತನ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೆ.ವಿಶ್ವನಾಥ್, ಉಪಾಧ್ಯಕ್ಷರುಗಳಾಗಿ ಡೆರಿಕ್ ಎ.ರೆಬೆಲ್ಲೋ ಮತ್ತು ನಿರ್ಮಲ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾಕರ ಬಿ.ಕುಂದರ್, ಜತೆ ಕಾರ್ಯದರ್ಶಿಗಳಾಗಿ ಉಮೇಶ್ ಮತ್ತು ಕವಿತಾ ಎಸ್., ಕೋಶಾಧಿಕಾರಿಯಾಗಿ ಶ್ರೀಪಾದ ಹೆರ್ಳೆ ಪಿ., ಉಪ ಕೋಶಾಧಿಕಾರಿಯಾಗಿ ಚರಣ್. ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X