Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೂರು ವರ್ಷಗಳಲ್ಲಿ ಉಡುಪಿ ಜಿಲ್ಲೆಗೆ...

ಮೂರು ವರ್ಷಗಳಲ್ಲಿ ಉಡುಪಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ: ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ17 Feb 2025 7:07 PM IST
share
ಮೂರು ವರ್ಷಗಳಲ್ಲಿ ಉಡುಪಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ: ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ

ಉಡುಪಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಾಲುಸಂಕ ನಿರ್ಮಾಣಕ್ಕೆ ಆದ್ಯತೆ ನೀಡಿ, ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಚಿವರಾದ ಬಳಿಕ ಮೊದಲ ಬಾರಿ ಉಡುಪಿ ಜಿಲ್ಲೆಗೆ ಆಗಮಿಸಿರುವ ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಲೆನಾಡು ಭಾಗಗಳಲ್ಲಿ, ಕರಾವಳಿಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಹಳ್ಳ-ಕೊಳ್ಳ, ತೊರೆಗಳನ್ನು ದಾಟಲು ಜನರು ಕಾಲುಸಂಕ ಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಸುಭದ್ರ ಕಾಲುಸಂಕಗಳಿಲ್ಲದೇ ಮಳೆಗಾಲದ ಸಂದರ್ಭದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಈ ಹಿಂದೆ ಅನೇಕ ಅವಘಡಗಳು ನಡೆದಿವೆ ಎಂದು ಅವರು ಹೇಳಿದರು.

ಅನಧಿಕೃತ ಕಟ್ಟಡ ತೆರವಿಗೆ ಸೂಚನೆ: ಹೆದ್ದಾರಿಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಪ್ರಥಮ ಹಂತದಲ್ಲಿ ಟೆಂಟ್‌ಗಳನ್ನು ಹಾಕಿ ಹೋಟೆಲ್ ಅಥವಾ ಅಂಗಡಿ ಮುಂಗಟ್ಟುಗಳನ್ನು ಜನರು ತೆರೆಯುತ್ತಾರೆ. ನಂತರದ ದಿನಗಳಲ್ಲಿ ಶಾಶ್ವತವಾಗಿ ಕಟ್ಟಡ ನಿರ್ಮಾಣ ಮಾಡಿ, ವಾಣಿಜ್ಯ ವಹಿವಾಟು ನಡೆಸುವುದರಿಂದ ವಾಹನಗಳನ್ನು ರಸ್ತೆಯ ಮೇಲೆ ನಿಲ್ಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಹೊಸದಾಗಿ ಇಂಥ ಅನಧಿಕೃತ ಕಟ್ಟಡ ನಿರ್ಮಾಣವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ನಿರ್ಮಾಣ ಗೊಂಡಿರುವುಗಳನ್ನು ಹಂತಹಂತವಾಗಿ ತೆರವುಗೊಳಿಸಲು ಮುಂದಾಗಬೇಕು ಎಂದು ಸಚಿವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚು ರಸ್ತೆ ಅಪಘಾತ ಉಂಟಾದ ಕಪ್ಪುಚುಕ್ಕೆ ಸ್ಥಳಗಳನ್ನು ಪೊಲೀಸರ ಸಹಯೋಗದೊಂದಿಗೆ ಗುರುತಿಸಲಾಗಿದೆ. ಇಲ್ಲಿ ವೈಜ್ಞಾನಿಕ ಕಾಮಗಾರಿಗಳನ್ನು ಕೈಗೊಂಡು ರಸ್ತೆ ಅಪಘಾತಗಳು ಆಗದಂತೆ ನೋಡಿಕೊಳ್ಳಲು ಅವಶ್ಯವಿರುವ ಅನುದಾನವನ್ನು ಆದ್ಯತೆಯ ಮೇಲೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಆಗಿರುವ ಅನುದಾನ ವನ್ನು ಪೂರ್ಣಪ್ರಮಾಣದಲ್ಲಿ ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣ ಗೊಳಿಸಬೇಕು ಎಂದು ಅವರು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಕರಾವಳಿ ಭಾಗದಲ್ಲಿ ಹೆಚ್ಚು ಪ್ರಮಾಣದ ಮಳೆ ಬೀಳುತ್ತದೆ. ಇಲ್ಲಿ ಯಾವುದೇ ಕಟ್ಟಡ ಅಥವಾ ಸೇತುವೆ ನಿರ್ಮಾಣ ಮಾಡುವಾಗ ಇಲ್ಲಿನ ಪ್ರಾಕೃತಿಕ ಹವಾಮಾನಕ್ಕೆ ಅನುಗುಣವಾಗಿ ಕಟ್ಟಡ, ಸೇತುವೆ ಸೇರಿದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳು ವಾಗ ಇಲ್ಲಿನ ವಾತಾವರಣಕ್ಕೆ ತಕ್ಕಂತೆ ವಿನ್ಯಾಸ ರಚಿಸಿ ಕೈಗೊಳ್ಳಬೇಕು. ನದಿಗಳಿಗೆ ನಿರ್ಮಾಣ ಮಾಡಿರುವ ಸೇತುವೆ ಬಳಿ ಮರಳು ಗಣಿಗಾರಿಕೆ ಕೈಗೊಳ್ಳುವುದರಿಂದ ಸೇತುವೆಗೆ ಹಾನಿಉಂಟಾಗುತ್ತದೆ ಎಂದವರು ಸಚಿವರ ಗಮನಕ್ಕೆ ತಂದರು.

ಶಾಸಕ ಸುನಿಲ್ ಕುಮಾರ್ ಮಾತನಾಡಿ, ಹೆಬ್ರಿ ತಾಲೂಕಿನ ಮತ್ತಾವಿನಲ್ಲಿ ಅಧಿಕ ಸಂಖ್ಯೆಯ ಮಲೆಕುಡಿಯ ಜನಾಂಗದವರು ವಾಸಿಸುತ್ತಿರುವ ಹಿನ್ನೆಲೆಯಲ್ಲಿ ಅವರುಗಳ ಸಂಚಾರಕ್ಕೆ ಅನುಕೂಲವಾಗುವಂತೆ ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ, ರಸ್ತೆ ಪಕ್ಕದಲ್ಲಿ ಅನಧಿಕೃತ ಅಂಗಡಿ ನಿರ್ಮಾಣವಾಗದಂತೆ ಎಚ್ಚರವಹಿಸಲು, ಜಿಲ್ಲಾ ಹೆದ್ದಾರಿ ಅಕ್ಕಪಕ್ಕದಲ್ಲಿ 25 ಮೀಟರ್ ವ್ಯಾಪ್ತಿಯೊಳಗೆ ಕಟ್ಟಡ ನಿರ್ಮಾಣ ಮಾಡಬಾರದು ಎಂಬ ನಿಯಮದಿಂದ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಚಿವರ ಗಮನ ಸೆಳೆದರು.

ಜಿಲ್ಲೆಯಲ್ಲಿ ಮಳೆಯಿಂದ ಹಾಳಾದ ರಸ್ತೆಗಳ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ಮಾಡಿದ ಸುನಿಲ್‌ಕುಮಾರ್, ಜಿಲ್ಲೆಯಲ್ಲಿ ಕಿಂಡಿ ಆಣೆಕಟ್ಟುಗಳನ್ನು ನಿರ್ಮಿಸುವ ವೇಳೆ ಮೇಲ್ಸೇತುವೆ ಒಳಗೊಂಡಂತೆ ನಿರ್ಮಾಣ ಮಾಡುವಂತೆಯೂ ಅವರು ಸಲಹೆ ನೀಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಬೈಂದೂರು ತಾಲೂಕಿನಲ್ಲಿ ಕಾಲುಸಂಕಗಳಿಗೆ ಬಹುದೊಡ್ಡ ಬೇಡಿಕೆ ಇದ್ದು, ಆದ್ಯತೆಯ ಮೇಲೆ ಕಾಲುಸಂಕ ನಿರ್ಮಾಣ ಕಾರ್ಯ ಕೈಗೊಳ್ಳುವುದರಿಂದ ಕೃಷಿ ಚಟುವಟಿಕೆಗಳಿಗೆ, ದ್ವಿಚಕ್ರ ವಾಹನ ಸವಾರರಿಗೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದರು.

ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ಜಿಲ್ಲೆಯಲ್ಲಿ ಅಧಿಕ ಮಳೆಯಾಗುವ ಕಾರಣ ರಸ್ತೆಯ ನಿರ್ವಹಣೆಗೆ ಅಗತ್ಯ ಕ್ರಮ ವಹಿಸುವಂತೆ ಹಾಗೂ ಎಂ.ಡಿ.ಆರ್ ಅಪ್‌ಗ್ರೇಡೇಶನ್ ಆಗಿರುವುದರಿಂದ ರಸ್ತೆ ದುರಸ್ಥಿ ನಿರ್ವಹಣೆ ಕಾಮಗಾರಿಯನ್ನು ಸಮರ್ಪಕವಾಗಿ ಮಾಡುವಂತೆ ಸಚಿವರ ಗಮನಕ್ಕೆ ತಂದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಬಂಕರಕಟ್ಟೆಯಲ್ಲಿ ಸೇತುವೆಯ ನಿರ್ಮಾಣವನ್ನು ಕೆಳಭಾಗದಲ್ಲಿ ನಿರ್ಮಾಣ ಮಾಡಿರುವ ಕಾರಣ ಮಳೆಗಾಲದಲ್ಲಿ ನೀರು ಸೇತುವೆಯ ಮೇಲ್ಭಾಗದಲ್ಲಿ ಹರಿಯು ತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ.ಶಾಂತಲಾ, ಗುತ್ತಿಗೆದಾರರು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

413 ಹೊಸ ಕಾಲುಸಂಕಗಳ ನಿರ್ಮಾಣಕ್ಕೆ ಪ್ರಸ್ತಾಪ

ಉಡುಪಿ ಜಿಲ್ಲೆಯಲ್ಲಿ 51.77 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಒಟ್ಟು 413 ಹೊಸಕಾಲು ಸಂಕಗಳ ನಿಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಈ ಹಿಂದೆ ಕಾಲುಸಂಕಗಳ ನಿರ್ಮಾಣಕ್ಕಾಗಿ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬಾಕಿ ಉಳಿದ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಿ, ಮುಂಬರುವ ಮೂರು ವರ್ಷಗಳ ಒಳಗೆ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ 29.62 ಕೋಟಿ ರೂ.ವೆಚ್ಚದಲ್ಲಿ 179, ಕಾರ್ಕಳ ತಾಲೂಕಿನಲ್ಲಿ 10.04 ಕೋಟಿ ರೂ.ವೆಚ್ಚದಲ್ಲಿ 100, ಕುಂದಾಪುರ ತಾಲೂಕಿನಲ್ಲಿ 6.64 ಕೋಟಿ ರೂ.ವೆಚ್ಚದಲ್ಲಿ 73, ಕಾಪು ತಾಲೂಕಿನಲ್ಲಿ 3.79 ಕೋಟಿ ರೂ.ವೆಚ್ಚದಲ್ಲಿ 45 ಹಾಗೂ ಉಡುಪಿ ತಾಲೂಕಿನಲ್ಲಿ 1.67 ಕೋಟಿ ರೂ.ವೆಚ್ಚದಲ್ಲಿ 16 ಕಾಲುಸಂಕಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X