Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದ.ಕ.-ಉಡುಪಿ ರಸ್ತೆಗಳ ದುಸ್ಥಿತಿ: ...

ದ.ಕ.-ಉಡುಪಿ ರಸ್ತೆಗಳ ದುಸ್ಥಿತಿ: ತಕ್ಷಣದ ದುರಸ್ತಿ ಕಾರ್ಯಕ್ಕೆ ಸಿಎಂ ಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ವಾರ್ತಾಭಾರತಿವಾರ್ತಾಭಾರತಿ20 Sept 2025 1:11 PM IST
share
ದ.ಕ.-ಉಡುಪಿ ರಸ್ತೆಗಳ ದುಸ್ಥಿತಿ:  ತಕ್ಷಣದ ದುರಸ್ತಿ ಕಾರ್ಯಕ್ಕೆ ಸಿಎಂ ಗೆ ಶಾಸಕ ಮಂಜುನಾಥ ಭಂಡಾರಿ ಮನವಿ
ಒಂದು ವರ್ಷದಲ್ಲಿ 702 ಅಪಘಾತ, 122 ಮಂದಿ ಸಾವು!

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಹಾಗೂ ವಾಹನ ಸಂಚಾರದ ದಟ್ಟಣೆಯಿಂದಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಹುತೇಕ ರಸ್ತೆಗಳಿಗೆ ಗಂಭೀರ ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಮತ್ತು ಸರ್ವಿಸ್ ರಸ್ತೆಗಳ ದುಸ್ಥಿತಿಯಿಂದ ರಸ್ತೆ ಅಪಘಾತಗಳು ಗಣನೀಯವಾಗಿ ಏರಿಕೆಯಾಗಿದ್ದು, ಸಾರ್ವಜನಿಕರ ಜೀವ ಭದ್ರತೆಗೆ ದೊಡ್ಡ ಸವಾಲುಂಟಾಗಿದೆ. ಈಗಾಗಲೇ ನೂರಾರು ಮಂದಿ ಸಾವನ್ನಪ್ಪಿರುವುದು ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸುತ್ತದೆ. ಅಪಘಾತ, ಸಾವು-ನೋವುಗಳ ಸಂಖ್ಯೆ ಗಣನೀಯ ಏರಿಕೆಯಾಗಿದ್ದು 2025ರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 702 ರಸ್ತೆ ಅಪಘಾತಗಳು ದಾಖಲಾಗಿದ್ದು, ಇದರಲ್ಲಿ 122 ಮಂದಿ ಮೃತಪಟ್ಟರೆ 815 ಮಂದಿ ಗಾಯಗೊಂಡಿದ್ದಾರೆ. ಆದ್ದರಿಂದ ರಸ್ತೆಯನ್ನು ಶೀಘ್ರ ದುರಸ್ತಿಪಡಿಸುವಂತೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವರದಿಯಾದ ಒಟ್ಟು ಅಪಘಾತಗಳು: 702, ಮಾರಣಾಂತಿಕ ಪ್ರಕರಣಗಳು: 119, ಮಾರಣಾಂತಿಕವಲ್ಲದ ಅಪಘಾತಗಳು: 583, ಒಟ್ಟು ಸಾವುಗಳು: 122, ಒಟ್ಟು ಗಾಯಾಳುಗಳು: 815,ಪಾದಚಾರಿ ಸಾವುಗಳು: 44, ಪಾದಚಾರಿಗಳು ಗಾಯಗೊಂಡವರು: 149, ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಸಾವುಗಳು: 63, ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಗಾಯಾಳುಗಳು: 416 ಈ ಅಂಕಿಅಂಶಗಳು ರಸ್ತೆ ಸುರಕ್ಷತೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುವುದಕ್ಕೆ ಸಾಕ್ಷಿಯಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಅತ್ಯಂತ ದುಸ್ಥಿತಿಯಲ್ಲಿದೆ ರಾಜ್ಯ ಹೆದ್ದಾರಿ- 52!

ಕುಂದಾಪುರ–ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52, 93 ಕಿ.ಮೀ ಉದ್ದವಿದ್ದು, ಕುಂದಾಪುರ, ಬಸ್ರೂರ್, ಸಿದ್ದಾಪುರ, ಹೊಸಂಗಡಿ, ಬಾಳೆಬರೆ ಘಾಟ್, ಮಾಸ್ತಿಕಟ್ಟೆ, ಕೈಮರ, ತೀರ್ಥಹಳ್ಳಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಈ ರಸ್ತೆ ಕಳೆದ 40 ವರ್ಷಗಳಿಂದ ಅಗಲವಾಗದ ಕಾರಣ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಕಂಡ್ಲೂರು ಸೇತುವೆ, 1960ರಲ್ಲಿ ವಾರಾಹಿ ನದಿಗೆ ನಿರ್ಮಿಸಲ್ಪಟ್ಟಿದ್ದು, ಈಗ ಕುಸಿಯುವ ಅಂಚಿನಲ್ಲಿದೆ.

ಹಾಗಾಗಿ ಇದರ ಪುನರ್‌ ನಿರ್ಮಾಣ ಅಗತ್ಯವಿದೆ. ಅನುಪಾತದ ಪ್ರಕಾರ ರಸ್ತೆಯ ಅಗಲವಿಲ್ಲದ ಹಾಗೂ ರಸ್ತೆ ಬದಿ ಸ್ಥಳಾವಕಾಶ ಇಲ್ಲದ ಕಾರಣ ಅಪಘಾತಗಳ ಪ್ರಮಾಣ ಹೆಚ್ಚಾಗಿದೆ. ಈ ಹೆದ್ದಾರಿಯನ್ನು 4 ಲೇನ್ ಮಾಡುವುದು ಅಥವಾ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವುದು ಅವಶ್ಯಕವಾಗಿದೆ.

ಘಾಟ್ ಪ್ರದೇಶಗಳ ಸಮಸ್ಯೆಗಳು:

ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ಪ್ರಮುಖ ಘಾಟ್‌ ರಸ್ತೆಗಳನ್ನು (ಅಗುಂಬೆ, ಶಿರಾಡಿ, ಚಾರ್ಮಾಡಿ, ಬಾಳೆಬರೆ, ಸಂಪೇಕಟ್ಟೆ, ನಾಗೋಡಿ) ಸಂಚಾರಕ್ಕೆ ಬಳಸಲಾಗುತ್ತಿದ್ದು, ಇವು ಅತ್ಯಂತ ಕಿರಿದಾಗಿವೆ. ಇವುಗಳಲ್ಲಿ ವರ್ಷಪೂರ್ತಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ಆಂಬ್ಯುಲೆನ್ಸ್‌ಗಳಿಗೂ ಅಡೆತಡೆ ಉಂಟಾಗುತ್ತಿದೆ. ಪ್ರವಾಸೋದ್ಯಮ ಮತ್ತು ಸ್ಥಳೀಯ ವ್ಯಾಪಾರಕ್ಕೆ ತೀವ್ರ ಹಾನಿಯುಂಟು ಮಾಡುತ್ತದೆ.

ಈ ರಸ್ತೆ ಬೆಂಗಳೂರು, ಮಂತ್ರಾಲಯ, ಬಳ್ಳಾರಿ, ರಾಯಚೂರು, ಹೈದರಾಬಾದ್‌ನಂತಹ ಇತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಿ ದಕ್ಷಿಣ ಪ್ರದೇಶಕ್ಕೆ ಪ್ರವಾಸೋದ್ಯಮವು ಉತ್ತೇಜನ ನೀಡುವ ಅವಕಾಶ ಹೊಂದಿದೆ. ಹಾಗಾಗಿ ಈ ರಸ್ತೆಗಳನ್ನು ಸುಧಾರಿಸಿದಲ್ಲಿ ದಕ್ಷಿಣ ಕನ್ನಡ ಅದರಲ್ಲೂ ವಿಶೇಷವಾಗಿ ಕುಂದಾಪುರ ಮತ್ತು ಬೈಂದೂರು ಕಡಲತೀರ ಪ್ರದೇಶ ಮತ್ತು ದೇವಾಲಯಗಳಿರುವ ಈ ಪ್ರದೇಶದಲ್ಲಿ ಪ್ರವಾಸೋದ್ಯಮವು ಉತ್ತೇಜನ ಪಡೆಯಲಿದೆ.

ಅಭಿವೃದ್ಧಿ ಯೋಜನೆಗಳಲ್ಲಿ ನಿರ್ಲಕ್ಷ್ಯ!

ಕರ್ಣಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆ ಅಡಿಯಲ್ಲಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ADB) ನೆರವಿನಿಂದ ಅನೇಕ ಹೆದ್ದಾರಿಗಳನ್ನು 4 ಲೇನ್ ಮಾಡಲಾಗಿದೆಯಾದರೂ, ರಾಜ್ಯ ಹೆದ್ದಾರಿ- 52 ಮಾತ್ರ ಇದರಿಂದ ಹೊರಗಿಟ್ಟಿರುವುದು ತಾರತಮ್ಯ ಧೋರಣೆಯಾಗಿದ್ದು, ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಏಷಿಯನ್ ಅಭಿವೃದ್ಧಿ ಬ್ಯಾಂಕ್, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ ರಾಜ್ಯ ಹೆದ್ದಾರಿ 52 ಅನ್ನು ಸುಧಾರಿಸಲು BOT (Annuity) road projet ವಿಧಾನದ ಮೂಲಕ ಹಣಕಾಸು ಒದಗಿಸಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಪರಿಹಾರ ಕ್ರಮಗಳಿಗೆ ಸಾರ್ವಜನಿಕರ ಆಗ್ರಹ!

ಸ್ಥಳೀಯರು ಹಾಗೂ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕಂಡ್ಲೂರು ಸೇತುವೆಯನ್ನು ಪುನರ್‌ ನಿರ್ಮಿಸಬೇಕು. ರಾಜ್ಯ ಹೆದ್ದಾರಿ 52 ಅನ್ನು 4 ಲೇನ್ ಮಾಡಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು. ಘಾಟ್ ಪ್ರದೇಶಗಳಲ್ಲಿ ಸುರಂಗಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಏಷ್ಯನ್ ಅಭಿವೃದ್ಧಿ ಬ್ಯಾಂಕ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ BOT (Annuity) ಮಾದರಿಯ ಮೂಲಕ ಹಣಕಾಸು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಸ್ತೆಗಳ ದುಸ್ಥಿತಿ ಸಾರ್ವಜನಿಕರ ಜೀವಿತಕ್ಕೂ ಆರ್ಥಿಕತೆಗೆ ದೊಡ್ಡ ಹಾನಿ ಉಂಟುಮಾಡುತ್ತಿದೆ. 2025ರಲ್ಲಿ ದಕ್ಷಿಣ ಕನ್ನಡದಲ್ಲಿ ಮಾತ್ರವೇ 122 ಸಾವುಗಳು ಸಂಭವಿಸಿರುವುದು ಗಂಭೀರ ಎಚ್ಚರಿಕೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಕ್ರಮ ಕೈಗೊಂಡು ರಸ್ತೆಗಳನ್ನು ಸುಧಾರಿಸುವುದು ಅವಶ್ಯಕ. ಜನರ ಸುರಕ್ಷತೆ ಹಾಗೂ ಪ್ರಾದೇಶಿಕ ಅಭಿವೃದ್ಧಿಗಾಗಿ ಇದು ತುರ್ತು ಅವಶ್ಯಕತೆಯಾಗಿದೆ ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X