Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದ ಬಸ್ ನಿಲ್ದಾಣಗಳಲ್ಲಿ ಕುಡುಕರ...

ಉಡುಪಿ ನಗರದ ಬಸ್ ನಿಲ್ದಾಣಗಳಲ್ಲಿ ಕುಡುಕರ ಹಾವಳಿ!

ವಾರ್ತಾಭಾರತಿವಾರ್ತಾಭಾರತಿ3 Jan 2025 7:37 PM IST
share
ಉಡುಪಿ ನಗರದ ಬಸ್ ನಿಲ್ದಾಣಗಳಲ್ಲಿ ಕುಡುಕರ ಹಾವಳಿ!

ಉಡುಪಿ, ಜ.3: ವಲಸೆ ಕಾರ್ಮಿಕರು ವಿಪರೀತ ಪಾನಮತ್ತರಾಗಿ ನಗರದ ವಿವಿಧ ಬಸ್ ನಿಲ್ದಾಣಗಳಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀರಾ ತೊಂದರೆ ಎದುರಿಸುವಂತಾಗುತ್ತಿದೆ.

ಸಂಜೆಯಾಗುತ್ತಲೇ ಉಡುಪಿ ಸಿಟಿ ಬಸ್ ನಿಲ್ದಾಣ, ನರ್ಮ್ ಬಸ್ ನಿಲ್ದಾಣ ಸೇರಿದಂತೆ ಸುತ್ತಮತ್ತಲು ಮದ್ಯ ವಸನಿ ಕಾರ್ಮಿಕರು ಪಾನಮತ್ತರಾಗಿ ಪರಸ್ಪರ ಗಲಾಟೆ ಮಾಡುವುದು, ಕಚ್ಚಾಡಿಕೊಳ್ಳುವುದು, ಹೊಡೆದಾಡಿಕೊಳ್ಳುತ್ತಿದ್ದಾರೆ. ಇದೀಗ ಇವರು ಸ್ಥಳೀಯರ ಮೇಲೂ ಕಿರಿಕ್ ಮಾಡಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ತಗಾದೆ ಮಾಡುವ ಮದ್ಯ ವ್ಯಸನಿಗಳಿಗೆ ಸ್ಥಳೀಯರು ಎದುರು ಮಾತನಾಡಲು ಕೂಡ ಮುಂದಾಗುತ್ತಿಲ್ಲ. ಯಾಕೆಂದರೆ ಅವರೆಲ್ಲ ಮದ್ಯದ ಅಮಲಿನಲ್ಲಿ ಆಯುಧ ಅಥವಾ ಕಲ್ಲುಗಳಿಂದ ಹೊಡೆಯಬಹುದೆಂಬ ಭಯ ಸ್ಥಳೀಯರದ್ದಾಗಿದೆ. ಕೆಲವು ಮದ್ಯ ವ್ಯಸನಿಗಳು ತಂಡಗಳನ್ನು ಕಟ್ಟಿಕೊಂಡು ಸಾರ್ವಜನಿಕರಿಗೆ ಕಿರಿಕ್ ಮಾಡುತ್ತ ಮೊಬೈಲ್ ಎಳೆದುಕೊಳ್ಳುವುದು, ಹಲ್ಲೆ ಮಾಡುವುದು ಇಲ್ಲಿ ಸಾಮಾನ್ಯವಾಗಿದೆ.

ರಾತ್ರಿ ಆಗುತ್ತಲೇ ಕಾರ್ಮಿಕರು ಅಲ್ಲಲ್ಲಿ ಮದ್ಯ ಸೇವನೆ ಮಾಡಿ, ಬಸ್ ನಿಲ್ದಾಣದಲ್ಲೇ ಊಟ ಬಹಿರ್ದೆಸೆ ಮುಗಿಸಿ, ಎಲ್ಲ ಜಾಗವನ್ನು ಮಲೀನ ಮಾಡುತ್ತಿದ್ದಾರೆ. ನರ್ಮ್ ಬಸ್ ನಿಲ್ದಾಣದಲ್ಲಿ ಸಂಜೆ ಏಳು ಗಂಟೆ ನಂತರ ಬಸ್ ಸಂಚಾರ ಇಲ್ಲದೆ ಇರುವುದರಿಂದ ನಿಲ್ದಾಣ ಖಾಲಿ ಆಗಿರುತ್ತದೆ. ಇದು ಕುಡುಕರಿಗೆ ವರದಾನವಾಗಿದೆ. ಇಡೀ ನಿಲ್ದಾಣದ ಪಾನಮತ್ತರ ತಾಣವಾಗಿ ಪರಿಣಮಿಸಿದೆ.

ಅಲ್ಲೇ ಮಲಗುವುದು, ಅಲ್ಲೇ ಊಟ, ಅಲ್ಲೇ ಮದ್ಯ ಸೇವನೆ, ಅಲ್ಲಿಯೇ ಜೂಜಾಡುತ್ತಾರೆ. ಮತ್ತೆ ವಿನಾಕಾರಣ ಗಲಾಟೆ ಮಾಡಿಕೊಳ್ಳುತ್ತಾರೆ. ಇವರು ಕುಡಿದ ಮದ್ಯದ ಬಾಟಲಿ, ತಿಂದ ವಸ್ತುಗಳನ್ನು ಅಲ್ಲಿಯೇ ಎಸೆದು ಗಲೀಜು ಮಾಡುತ್ತಿದ್ದಾರೆ. ಒಟ್ಟಾರೆ ರಾತ್ರಿಯಾಗುತ್ತಿದ್ದಂತೆ ಈ ಸ್ಥಳಗಳು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಕೂಡಲೇ ಪೊಲೀಸ್ ಇಲಾಖೆ ಹಾಗೂ ನಗರಸಭೆ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂಜೆ ಪೊಲೀಸರು ಇಲ್ಲಿ ಗಸ್ತು ತಿರುಗಾಡಬೇಕು. ಬಸ್ ನಿಲ್ದಾಣಗಳಿಗೆ ಸೆಕ್ಯುರಿಟಿ ಗಾರ್ಡ್‌ಗಳನ್ನು ನೇಮಕ ಮಾಡಬೇಕು. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಬಸ್ ನಿಲ್ದಾಣದಲ್ಲಿ ಕುಡಿದು ಮಲಗಿ ಅಸಹ್ಯವಾಗಿ ವರ್ತಿಸಿರುವವರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್ ಸರಳೇಬೆಟ್ಟು ಆಗ್ರಹಿಸಿದ್ದಾರೆ.

‘ಸಿಟಿಬಸ್ ನಿಲ್ದಾಣದ ಹಾಗೂ ಅಕ್ಕಪಕ್ಕ ಹಗಲು ರಾತ್ರಿ ಈ ಕುಡುಕರ ಕಾಟದಿಂದ ಮುಕ್ತಿಗೊಳಿಸಬೇಕು. ಇಲ್ಲಿ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಸಂಚಾರ ಮಾಡುವುದರಿಂದ ಇದೊಂದು ಉಡುಪಿಗೆ ಕೆಟ್ಟ ಹೆಸರು ತರಲು ಕಾರಣವಾಗ ಬಹುದು. ಆದುದರಿಂದ ನಗರದ ಬಸ್ ತಂಗುದಾಣ ಕುಡುಕರ ತಾಣವಾಗಬಾರದು. ಅಲ್ಲಲ್ಲಿ ಮಲಗಿ ಕುಡಿದು ಗಲಾಟೆ ಮಾಡಿ, ಅಶಾಂತಿ ಸೃಷ್ಠಿಸಿ, ಗಲೀಜು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಬೇಕು. ನಗರ ಸಭೆ ಹಾಗೂ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳಬೇಕು’

- ಗಣೇಶ್‌‌ ರಾಜ್ ಸರಳೇಬೆಟ್ಟು, ಸಾಮಾಜಿಕ ಕಾರ್ಯಕರ್ತ



share
ವಾರ್ತಾಭಾರತಿ
ವಾರ್ತಾಭಾರತಿ
Next Story
X