Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯದಾದ್ಯಂತ 569 ಸನ್ನದುಗಳನ್ನು...

ರಾಜ್ಯದಾದ್ಯಂತ 569 ಸನ್ನದುಗಳನ್ನು ಇ-ಹರಾಜು: ಬಾಲಕೃಷ್ಣ ಸಿ.ಎಚ್.

ವಾರ್ತಾಭಾರತಿವಾರ್ತಾಭಾರತಿ6 Jan 2026 7:06 PM IST
share
ರಾಜ್ಯದಾದ್ಯಂತ 569 ಸನ್ನದುಗಳನ್ನು ಇ-ಹರಾಜು: ಬಾಲಕೃಷ್ಣ ಸಿ.ಎಚ್.

ಉಡುಪಿ, ಜ.6: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಸಿರುವಂತೆ ಹೆಚ್ಚುವರಿ ಸಂಪನ್ಮೂಲ ಕ್ರೋಢೀಕರಿಸುವ ಭಾಗವಾಗಿ ಸ್ಥಗಿತಗೊಂಡಿರುವ ಹಾಗೂ ಮಂಜೂರಾಗದೇ ಬಾಕಿ ಇರುವ ಸನ್ನದುಗಳನ್ನು ಇ-ಹರಾಜು ಮೂಲಕ ಹರಾಜು ಮಾಡಿ ರಾಜಸ್ವ ಸಂಗ್ರಹಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಇರುವ ಒಟ್ಟು 569 ಸನ್ನದುಗಳನ್ನು ಇ-ಹರಾಜು ಮಾಡಿ ಸಂಭಾವ್ಯ ಬಿಡ್‌ದಾರರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಹೇಳಿದ್ದಾರೆ.

ಅಬಕಾರಿ ಇಲಾಖೆ ವತಿಯಿಂದ ಐದು ವರ್ಷಗಳ ಮದ್ಯದ ಸನ್ನದುಗಳನ್ನು ಪಡೆಯಲು ಸಂಭಾವ್ಯ ಬಿಡ್‌ದಾರರರಿಗೆ ಮಂಗಳವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಬಕಾರಿ ಇಲಾಖೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಸಿಎಲ್-2ಎ ಮತ್ತು ಸಿಎಲ್-9ಎ ಸ್ಥಗಿತಗೊಂಡಿರುವ ಹಾಗೂ ಮಂಜೂರಾಗದೇ ಬಾಕಿ ಇರುವ ಸನ್ನದುಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಕೇಂದ್ರ ಸರಕಾರದ ಎಂ.ಎಸ್.ಟಿ.ಸಿ ಲಿಮಿಟೆಡ್‌ನ ಪೋರ್ಟಲ್‌ನಲ್ಲಿ ಇ-ಹರಾಜು ಪ್ರಕ್ರಿಯೆ ನಡೆಸಲಾಗುವುದು. ತರಬೇತಿ ಕಾರ್ಯಕ್ರಮದಲ್ಲಿ ಬಿಡ್‌ದಾರರಿಗೆ ಅಬಕಾರಿ ಇಲಾಖೆಯ ನಿಯಮಗಳು, ಇ-ಹರಾಜು ಪ್ರಕ್ರಿಯೆ, ಟೆಂಡರ್ ನಿರ್ವಹಣೆ, ಆನ್‌ಲೈನ್ ವ್ಯವಸ್ಥೆ ಬಳಕೆ, ಬಿಡ್ ಸಲ್ಲಿಸುವ ವಿಧಾನ, ಲೈಸೆನ್ಸ್ ಪಡೆಯುವ ಬಗ್ಗೆ ಸೇರಿದಂತೆ ಮತ್ತಿತರೆ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.

ಉಡುಪಿ ಜಿಲ್ಲೆಯಲ್ಲಿ 8 ಸಿಎಲ್-2ಎ ಸನ್ನದುಗಳನ್ನು ಸಾಮಾನ್ಯ ವರ್ಗಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಲ್-9ಎ ನ 1 ಹಾಗೂ ಸಿಎಲ್-2ಎ ನ 29 ಸೇರಿದಂತೆ ಒಟ್ಟು 30 ಸನ್ನದುಗಳನ್ನು ಸಾಮಾನ್ಯ ಹಾಗೂ ಎಸ್.ಸಿ/ಎಸ್.ಟಿ ವರ್ಗಕ್ಕೆ ಹಂಚಿಕೆ ಮಾಡಲಾಗಿದೆ. ಯಶಸ್ವಿ ಬಿಡ್‌ದಾರರಾಗಿ ಹೊರಹೊಮ್ಮಲು 21 ವಷರ್ ಮೇಲ್ಪಟ್ಟ, ಕರ್ನಾಟಕದ ನಿವಾಸಿಗಳಾಗಿರುವ, ಯಾವುದೇ ಅಪರಾಧ ಹಿನ್ನೆಲೆ ಹೊಂದಿಲ್ಲದ ನೋಂದಣಿಯಾದ ಬಿಡ್ ದಾರರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆಂದು ಅವರು ತಿಳಿಸಿದರು.

ಇ-ಹರಾಜಿನಲ್ಲಿ ಭಾಗವಸಲು ಈಗಾಗಲೇ ನೋಂದಣಿ ಪ್ರಕ್ರಿಯೆಗಳು ಆರಂಭವಾಗಿದ್ದು, ಜನವರಿ 13 ರಿಂದ 20 ರ ವರೆಗೆ ನೇರ ಹರಾಜು ನಡೆಯಲಿದೆ. ಉಡುಪಿಯಲ್ಲಿ ಜ.20ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಹರಾಜು ನಡೆಯಲಿದ್ದು, ಬಿಡ್‌ದಾರರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಯಾವುದೇ ಭಾಗದಲ್ಲಿಯೂ ಸಹ ಹರಾಜು ಪ್ರಕ್ರಿಯೆಯಲ್ಲಿ ಭಾಗವಸಬಹುದಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಇ-ಹರಾಜು ಕುರಿತು ವಿಸತ್ತತ ಮಾಹಿತಿ ನೀಡಿದರು. ಉಡುಪಿಯ ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ್, ಎಂ.ಎಸ್.ಟಿ.ಸಿ ಲಿಮಿಟೆಡ್‌ನ ಬ್ರಿಜೇಶ್ ಹಾಗೂ ಸತ್ಯಸಾಯಿ, ಅಬಕಾರಿ ಅಧೀಕ್ಷಕರುಗಳು, ಇಲಾಖೆಯ ಅಧಿಕಾರಿಗಳು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಿಡ್‌ದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಪ್ರಭು ಗೌಡ ಪಾಟೀಲ್ ಸ್ವಾಗತಿಸಿದರು. ಮಂಗಳೂರು ಅಬಕಾರಿ ಉಪ ನಿರೀಕ್ಷಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags

E-auction
share
ವಾರ್ತಾಭಾರತಿ
ವಾರ್ತಾಭಾರತಿ
Next Story
X