Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ರಕ್ಷಣಾ ನೀತಿ ಕಾರ್ಯಕ್ರಮಗಳನ್ನು...

ಮಕ್ಕಳ ರಕ್ಷಣಾ ನೀತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ನ್ಯಾ.ಕಿರಣ್ ಎಸ್ ಗಂಗಣ್ಣವರ್

ವಾರ್ತಾಭಾರತಿವಾರ್ತಾಭಾರತಿ10 Sept 2024 7:18 PM IST
share
ಮಕ್ಕಳ ರಕ್ಷಣಾ ನೀತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ನ್ಯಾ.ಕಿರಣ್ ಎಸ್ ಗಂಗಣ್ಣವರ್

ಉಡುಪಿ, ಸೆ.10: ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ, ಮಕ್ಕಳ ರಕ್ಷಣೆಗೆ ಹಲವು ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಹೇಳಿದ್ದಾರೆ.

ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ನೀತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ನಡೆದ ಒಂದು ದಿನದ ತರಬೇತುದಾರರ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವ್ಯಕ್ತಿಯ ವ್ಯಕ್ತಿತ್ವದ ನಿರ್ಮಾಣದಲ್ಲಿ ಬಾಲ್ಯದ ಜೀವನಾನುಭವ ಪ್ರಮುಖ ಪಾತ್ರ ವಹಿಸುತ್ತದೆ. ಬಾಲ್ಯ ಜೀವನವನ್ನು ಕಳೆದು ಕೊಂಡ ವ್ಯಕ್ತಿಯ ವ್ಯಕ್ತಿತ್ವಕ್ಕಿಂತ ಸಮಾಜದ ಕಟ್ಟುಪಾಡುಗಳನ್ನು ಅರಿತು ಬೆಳೆದ ವ್ಯಕ್ತಿ ಸಾಮಾಜಿಕ ಜೀವನದಲ್ಲಿ ಹೆಚ್ಚು ಯಶಸ್ಸು ಕಂಡುಕೊಂಡಿದ್ದನ್ನು ನೋಡಿದ್ದೇವೆ. ಆದ್ದರಿಂದ ಬಾಲ್ಯದ ಜೀವನಕ್ಕೆ ಪೂರಕವಾದ ವಾತಾವರಣ ಕಲ್ಪಿಸಿದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ತರಬೇತಿಯಲ್ಲಿ ಮಕ್ಕಳ ರಕ್ಷಣೆ ಹಾಗೂ ಪಾಲನೆಗೆ ಇರುವ ಸೌಲಭ್ಯ ಹಾಗೂ ಸೌಕರ್ಯಗಳ ಮಾಹಿತಿಗಳನ್ನು ಪಡೆಯುವ ಮೂಲಕ ತರಬೇತುದಾರರು ಕರ್ತವ್ಯದ ವೇಳೆಯಲ್ಲಿ ಎದುರಿಸುವ ಸವಾಲುಗಳನ್ನು ಮುಕ್ತವಾಗಿ ಹಂಚಿ ಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದ ಅವರು, ಸೇವೆಯ ಉತ್ಕೃಷ್ಟತೆ ಯನ್ನು ಹೆಚ್ಚಿಸಿಕೊಳ್ಳುವಲ್ಲಿ ಇದೊಂದು ಉತ್ತಮ ವೇದಿಕೆಯಾ ಗಿದೆ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಮಕ್ಕಳ ರಕ್ಷಣಾ ನೀತಿಯಲ್ಲಿ ಮಕ್ಕಳ ಆರೈಕೆ ಮತ್ತು ಪುನರ್ವ ಸತಿಗೆ ಒತ್ತು ನೀಡಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಇವುಗಳಲ್ಲಿ ಹಲವು ನಿಬಂಧನೆಗಳು ಇವೆ. ಮಕ್ಕಳ ಪುನರ್ವಸತಿ ಕೇಂದ್ರದಲ್ಲಿರುವ ಸೌಲಭ್ಯ ಹಾಗೂ ಕರ್ತವ್ಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಸಮಗ್ರ ಮಾಹಿತಿ ನೀಡಲಿದ್ದು, ತರಬೇತು ದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಮಗುವಿನ ಬೆಳವಣಿಗೆಯಲ್ಲಿ ಸಮಾಜದ ಪ್ರಕ್ರಿಯೆ ಮಹತ್ವದ ಪಾತ್ರ ವಹಿಸುತ್ತದೆ. ಅದು ಮಗುವನ್ನು ಉತ್ತಮ ವ್ಯಕ್ತಿಯಾಗಿ ಅಥವಾ ಸಮಾಜ ಘಾತುಕ ವ್ಯಕ್ತಿಯಾಗಿ ರೂಪಿಸುವ ಸಾಧ್ಯತೆಗಳಿದ್ದು, ಅಂತಹ ಯಾವುದೇ ಅಹಿತಕರ ಘಟನೆಗಳು / ಬೆಳವಣಿಗೆ ನಡೆಯದಂತೆ ಪೋಷಕರು ಹಾಗೂ ಸಮಾಜ ಜವಾಬ್ದಾರಿ ವಹಿಸಬೇಕು ಎಂದರು.

ಮಕ್ಕಳ ರಕ್ಷಣೆಗೆ ಸರಕಾರವು ಸಾಕಷ್ಟು ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಅನುಷ್ಠಾನ ಮಾಡುವಾಗ ಅತ್ಯಂತ ಎಚ್ಚರ ವಹಿಸಬೇಕು. ವಿವಿಧ ಹಂತಗಳಲ್ಲಿ ಮಕ್ಕಳ ಜೊತೆಯಲ್ಲಿ ಕಾರ್ಯ ನಿರ್ವಹಿಸುವ ಸಂದರ್ಭ ದಲ್ಲಿ ಸೂಕ್ಷ್ಮ ರೀತಿಯಲ್ಲಿ ವರ್ತಿಸಬೇಕು. ತರಬೇತುದಾರರು ಕಾನೂನಿನ ಅಂಶಗಳನ್ನು ತಿಳಿಯುವುದರೊಂದಿಗೆ ಮಕ್ಕಳ ಮನಸ್ಥಿತಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಜಿಲ್ಲಾ ಬಾಲನ್ಯಾಯ ಮಂಡಳಿಯ ಪ್ರಧಾನ ನ್ಯಾಯಾಧೀಶ ಮನು ಪಟೇಲ್ ಬಿ.ವೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಪೊಲೀಸ್ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಚೈಲ್ಡ್‌ಲೈನ್‌ನ ಯೋಜನಾ ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸಮಗ್ರ ಮಾಹಿತಿ

ಕಾರ್ಯಾಗಾರದಲ್ಲಿ ಜಿಲ್ಲೆ, ತಾಲೂಕು ಹಾಗೂ ಗ್ರಾಮಪಂಚಾಯತ್ ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಮಿಷನ್ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021, ದತ್ತು ಅಧಿನಿಯಮ -2022, ಪೋಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ರಕ್ಷಣಾ ಸಮಿತಿ ರಚನೆ ಹಾಗೂ ಅದರ ಕಾರ್ಯವೈಖರಿ ಕುರಿತು ಸಮಗ್ರ ಮಾಹಿತಿಗಳನ್ನು ನೀಡಲಾಯಿತು.

ಯುನಿಸೆಫ್ ಕೊಪ್ಪಳ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ. ರಾಘವೇಂದ್ರ ಭಟ್ ಮತ್ತು ಬೆಂಗಳೂರು ಕ್ರೈಸ್ಟ್ ಯುನಿವರ್ಸಿಟಿಯ ಮನಶಾಸ್ತ್ರ ವಿಭಾಗದ ಸಹಾಯಕ ಬೋಧಕಿ ಡಾ. ವೀಣಾಶ್ರೀ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಕ್ಕಳ ರಕ್ಷಣೆಯ ಕಾನೂನು, ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X