Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮತೀಯ ಸಾಮರಸ್ಯಕ್ಕಾಗಿ ಎಲ್ಲ ಸಮುದಾಯಗಳ...

ಮತೀಯ ಸಾಮರಸ್ಯಕ್ಕಾಗಿ ಎಲ್ಲ ಸಮುದಾಯಗಳ ಶ್ರಮ ಅಗತ್ಯ: ಅಬ್ದುಸ್ಸಲಾಮ್ ಪುತ್ತಿಗೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಂವಾದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Sept 2024 8:09 PM IST
share
ಮತೀಯ ಸಾಮರಸ್ಯಕ್ಕಾಗಿ ಎಲ್ಲ ಸಮುದಾಯಗಳ ಶ್ರಮ ಅಗತ್ಯ: ಅಬ್ದುಸ್ಸಲಾಮ್ ಪುತ್ತಿಗೆ

ಉಡುಪಿ: ಭಾರತದ ಮಿಶ್ರ ಸಮಾಜದಲ್ಲಿ ಏಕತೆಯ ಅಗತ್ಯ ಸಾಕಷ್ಟು ಇದೆ. ಅದಕ್ಕಾಗಿ ಕೆಲಸ ಮಾಡುವುದು ಕೇವಲ ಒಂದು ಸಮಾಜದ ಜವಾಬ್ದಾರಿ ಅಲ್ಲ. ಸಮಾಜದಲ್ಲಿ ಸೌಹಾರ್ದ ಮೂಡಿಸುವುದು ಕೇವಲ ಅಲ್ಪಸಂಖ್ಯಾತರ ಕೆಲಸ ಅಲ್ಲ. ಸೌಹಾರ್ದ ಎಲ್ಲರ ಅಗತ್ಯವಾಗಿದೆ. ಸೌಹಾರ್ದ ಇಲ್ಲದೆ ಆಗುವ ನಷ್ಟವನ್ನು ಎಲ್ಲರೂ ಅನುಭವಿಸಬೇಕಾಗುತ್ತದೆ. ಆದುದ ರಿಂದ ಮತೀಯ ಸಾಮರಸ್ಯಕ್ಕಾಗಿ ಎಲ್ಲ ಸಮುದಾಯಗಳು ಜೊತೆಯಾಗಿ ಶ್ರಮಿಸಬೇಕಾಗಿದೆ ಎಂದು ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿ ಅಮೃತ ಗಾರ್ಡನ್ ನಲ್ಲಿ ರವಿವಾರ ಆಯೋಜಿಸಿದ್ದ ‘ಇಸ್ಲಾಮ್, ಮುಸ್ಲಿಮರು ಮತ್ತು ಭಾರತೀಯ ಸಮಾಜ’ ಕುರಿತು ಸ್ನೇಹ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಚಾರ ಮಂಡಿಸಿ ಮಾತನಾಡುತ್ತಿದ್ದರು.

ಸೌಹಾರ್ದ ಸಮಾಜ ಸಾಧ್ಯವಾಗಬೇಕಾದರೆ ಎಲ್ಲರಲ್ಲೂ ಭದ್ರತೆ ಭಾವನೆ ಮೂಡಿಬರಬೇಕು. ಅಭದ್ರತೆ ಭಾವನೆ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಸಂವಿಧಾನದ ಹಿರಿಮೆಯನ್ನು ಒಪ್ಪಿಕೊಂಡು ಇನ್ನೊಬ್ಬರಿಗೆ ಹಾನಿಯಾಗದ ನಂಬಿಕೆ ಯನ್ನು ಪಾಲಿಸಿ ಬದುಕು ನಡೆಸಬೇಕು ಎಂದ ಅವರು, ಇವತ್ತು ನಡೆಯುವ ಸಂಘರ್ಷದ ವಿಚಾರಕ್ಕೂ ಬದುಕಿಗೂ ಯಾವುದೇ ಸಂಬಂಧ ಇಲ್ಲ. ಬೆಲೆ ಏರಿಕೆಯಂತಹ ಸಮಸ್ಯೆಗಳ ವಿರುದ್ಧ ನಾವು ಚಳವಳಿ ಮಾಡಿ ಬೀದಿಗೆ ಇಳಿಯಬೇಕಾಗಿದೆ ಎಂದರು.

ಮುಸ್ಲಿಮರು ಹೊರಗಿನಿಂದ ಬಂದರಲ್ಲ. ಈ ನೆಲದಲ್ಲಿಯೇ ಹುಟ್ಟಿ, ದೇಶವನ್ನು ಪ್ರೀತಿಸುವವರು. ಅವರಿಗೆ ದೇಶಪ್ರೇಮವನ್ನು ಬೋಧಿಸುವ ಅಗತ್ಯ ಇಲ್ಲ. ಅದೇ ರೀತಿ ಮುಸ್ಲಿಮರು ಕೂಡ ತಮ್ಮಲ್ಲಿರುವ ದೇಶಪ್ರೇಮವನ್ನು ಸಾಬೀತುಪಡಿಸುವ ಅಗತ್ಯ ಕೂಡ ಇಲ್ಲ. ಹಿಂದಿನ ರಾಜರು ಮಾಡಿರುವ ತಪ್ಪಿಗೆ ಅವರೊಂದಿಗೆ ಯಾವುದೇ ಸಂಬಂಧ ಇಲ್ಲದ ಮುಸ್ಲಿಮರು ಈಗ ಉತ್ತರ ಕೊಡಬೇಕಾದ ಅಗತ್ಯ ಇಲ್ಲ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಭಾರತ ದೇಶದ ಆರ್ಥಿಕ, ಸಾಂಸ್ಕೃತಿಕ, ಶಿಕ್ಷಣ, ರಾಜಕೀಯ ಸೇರಿದಂತೆ ಸರ್ವತೋಮುಖ ಬೆಳವಣಿಗೆಗೆ ಇಸ್ಲಾಮ್ ಧರ್ಮ ಅಪಾರ ಕೊಡುಗೆ ನೀಡಿದೆ. ಆದುದರಿಂದ ಈ ದೇಶದ ಅಭಿವೃದ್ಧಿಗೆ ಧರ್ಮಗಳು ನೀಡಿದ ಕೊಡುಗೆಯನ್ನು ಚರ್ಚಿಸುವ ಅಗತ್ಯ ಇಂದು ಎದುರಾಗಿದೆ. ನಾವು ಶಿಕ್ಷಣ, ಅಭಿವೃದ್ಧಿಯತ್ತ ಒತ್ತು ಕೊಟ್ಟು ದೇಶವನ್ನು ಮುನ್ನಡೆಸಿದರೆ ಮಾತ್ರ ಭಾರತ ಇಡೀ ಜಗತ್ತಿನಲ್ಲೇ ನಂಬರ್ ಒನ್ ದೇಶವಾಗಲು ಸಾಧ್ಯ ಎಂದರು.

ಉಡುಪಿ ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ.ನಿಕೇತನ ಮಾತನಾಡಿ, ನಮ್ಮ ಒಳಗಿನ ವ್ಯಕ್ತಿ ಪ್ರಜ್ಞೆಯು ಸಮಾಜದ ಜೊತೆ ವಿವಿಧತೆ ಏಕತೆಯನ್ನು ಕಾಣುತ್ತ ಸೌಹಾರ್ದಲ್ಲಿ ಬದುಕಬೇಕಾದರೆ ಧರ್ಮಗಳ ವಿಚಾರದ ಕುರಿತು ಮುಕ್ತವಾಗಿ ಚರ್ಚೆ ಮಾಡಬೇಕಾಗಿದೆ. ನಮ್ಮದು ಎಲ್ಲರೊಳಗೆ ಒಂದಾಗುವ ಸಂಸ್ಕೃತಿ. ಪ್ರೀತಿ ಎಲ್ಲರನ್ನು ಜೋಡಿಸಿದರೆ, ದ್ವೇಷ ಮತ್ತು ಭಯ ಎಲ್ಲರನ್ನು ವಿಘಟನೆ ಮಾಡುತ್ತದೆ ಎಂದರು.

ನಮ್ಮನ್ನು ನಾವು ಮೊದಲು ಅರ್ಥ ಮಾಡಿಕೊಳ್ಳುವಲ್ಲಿ ಧರ್ಮಗಳ ಪಾತ್ರ ಪ್ರಮುಖವಾಗಿದೆ. ಎಲ್ಲ ಧರ್ಮಗಳ ಬೋಧನೆ ಹಿಂದೆ ಪ್ರೀತಿ, ಮಾನವೀಯತೆ ಹಂಚುವುದು ಮತ್ತು ಪ್ರತಿಯೊಬ್ಬರು ಸಹಕಾರ ಮನೋಭಾವನೆಯಿಂದ ಒಟ್ಟಾಗಿ ಬದುಕಾಗಿದೆ ಎಂದವರು ಅಭಿಪ್ರಾಯ ಪಟ್ಟರು.

ದಸಂಸ ಅಂಬೇಡ್ಕರ್ ವಾದ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಸಹಬಾಳ್ವೆ ಸಂಚಾಲಕ ಪ್ರೊ.ಫಣಿರಾಜ್, ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ.ಸುಧೀರ್ ಕುಮಾರ್, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಅಭಿಪ್ರಾಯ ಮಂಡಿಸಿದರು.

ಮೌಲಾನ ಝಮೀರ್ ಅಹ್ಮದ್ ರಶಾದಿ ಸಮಾರೋಪ ಭಾಷಣ ಮಾಡಿದರು. ಹಾಫಿಝ್ ಯೂನುಸ್ ಕಿರಾಅತ್ ಪಠಿಸಿ ದರು. ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಟ ಸ್ವಾಗತಿಸಿದರು. ಅನ್ವರ್ ಅಲಿ ಕಾಪು ವಂದಿಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X