Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಣ್ಣಪುಟ್ಟ ಭಾಷೆಗಳಿಗೆ ಇಂಗ್ಲಿಷ್,...

ಸಣ್ಣಪುಟ್ಟ ಭಾಷೆಗಳಿಗೆ ಇಂಗ್ಲಿಷ್, ಹಿಂದಿಯಿಂದ ಆತಂಕ: ಬಿ.ಎಂ.ಬಶೀರ್ ಕಳವಳ

ವಾರ್ತಾಭಾರತಿವಾರ್ತಾಭಾರತಿ28 Dec 2025 7:34 PM IST
share
ಸಣ್ಣಪುಟ್ಟ ಭಾಷೆಗಳಿಗೆ ಇಂಗ್ಲಿಷ್, ಹಿಂದಿಯಿಂದ ಆತಂಕ: ಬಿ.ಎಂ.ಬಶೀರ್ ಕಳವಳ
ಕುಂದಾಪುರದಲ್ಲಿ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ಉದ್ಘಾಟನೆ

ಕುಂದಾಪುರ: ಭಾರತ ದೇಶವು ವಿಶ್ವದಲ್ಲಿಯೇ ಅತ್ಯಧಿಕ ಭಾಷಿಕರನ್ನು ಹೊಂದಿರುವ ದೇಶವಾಗಿದ್ದು ಒಂದು ಕಾಲದಲ್ಲಿ ನಮ್ಮಲ್ಲಿ 1,600ಕ್ಕೂ ಮಿಕ್ಕಿ ಭಾಷೆಗಳಿದ್ದವು. ಭಾಷೆ ಪರಸ್ಪರ ಮನುಷ್ಯರನ್ನು ಬೆಸೆಯುತ್ತದೆ. ಆದರೆ ಇಂದು ಇಂಗ್ಲಿಷ್ ಪ್ರಾದೇಶಿಕ ಭಾಷಿಗರ ಮಧ್ಯೆ ಗೋಡೆ ನಿರ್ಮಿಸಿದೆ. ಸೃಜನಶೀಲ, ಕ್ರೀಯಾಶೀಲ ಗ್ರಾಮೀಣರನ್ನು ಇಂಗ್ಲಿಷ್ ಮಂಕಾಗಿಸಿದೆ. ಸಣ್ಣ ಪುಟ್ಟ ಭಾಷೆಗಳಿಗೆ ಇಂಗ್ಲಿಷ್, ಹಿಂದಿಯಿಂದ ಆತಂಕ ಎದುರಾಗಿದೆ ಎಂದು ಕವಿ, ಕಥೆಗಾರ, ಪತ್ರಕರ್ತ ಬಿ.ಎಂ.ಬಶೀರ್ ಕಳವಳ ವ್ಯಕ್ತಪಡಿಸಿದ್ದಾರೆ.

ಕುಂದಾಪುರ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಐವತ್ತರ ಅಂಗವಾಗಿ ́ಮನುಷ್ಯತ್ವದೆಡೆಗೆ ಸಮುದಾಯದ ಜಾಥಾ’ದ ಭಾಗವಾಗಿ ಕುಂದಾಪುರದ ನಾನಾಸಾಹೇಬ ರಸ್ತೆ ಹೆಂಚು ಕಾರ್ಮಿಕರ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ರವಿವಾರ ನಡೆದ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿಯನ್ನು ತನ್ನ ಅಮ್ಮ ತಟ್ಟಿದ ರೊಟ್ಟಿ ಎಂಬ ಕವನ ವಾಚಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಬಹುಭಾಷೆ, ಬಹು ಸಂಸ್ಕೃತಿಯ ಅರಿವು ನಮ್ಮನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿಸುತ್ತದೆ. ಇಂದು ಭಾಷೆಗಳನ್ನೇ ಗೋಡೆಗಳಾಗಿ ಪರಿವರ್ತಿಸಿದ್ದು, ಮನುಷ್ಯರನ್ನು ವಿಭಾಗಿಸುವುದಕ್ಕೆ, ಪ್ರತ್ಯೇಕಿಸುವುದಕ್ಕೆ ಭಾಷೆಯನ್ನು ಬಳಸುತ್ತಿದ್ದೇವೆ. ಭಾಷೆಯಿದ್ದು, ಭಾಷಾ ಹೀನರಾಗಬಾರದು. ಸಮುದಾಯದ ಕಾರ್ಯ ಭಾಷೆಯನ್ನು ಮೀರಿದ್ದು ಎಂದವರು ಶ್ಲಾಘಿಸಿದರು.

ಸ್ವಾಗತ ಸಮಿತಿ ಕಾರ್ಯದರ್ಶಿ ಗುಂಡಣ್ಣ ಸಿ.ಕೆ. ಮಾತನಾಡಿ, ಕಾವ್ಯ ಅರ್ಥೈಸಲು ಭಾಷೆಯೇ ಬೇಕು ಅಂತ ಇಲ್ಲ. ಭಾವನೆಯಿಂದಲೂ ಅರ್ಥೈಸಬಹುದು. ಆದರೆ ಈಗಿನ ಕೆಲ ಕವನಗಳಲ್ಲಿ ಸಾಮಾಜಿಕ ಮೌಲ್ಯ, ಸಮಾಜಕ್ಕೆ ಪೂರಕವಾಗುವಂತಹ ಅಂಶಗಳು ಕಡಿಮೆಯಾಗಿವೆ. ಕವನಗಳ ಅಂತಃಸತ್ವ ಅರಿಯಲು ಇಂತಹ ಬಹುಭಾಷಾ ಕವಿಗೋಷ್ಠಿಗಳು ಸಹಕಾರಿ. ವರ್ಷವೀಡಿ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ಜನವರಿಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೀದಿ ನಾಟಕ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಸಮುದಾಯ ಕರ್ನಾಟಕದ ಅಧ್ಯಕ್ಷ ಶಶಿಧರ್ ಜೆ.ಸಿ.ವಹಿಸಿದ್ದರು. ಜನವಾದಿ ಪ್ರಕಾಶನ ಗುಂಡ್ಮಿಯ ಕೆ.ಕಮಲಾ ಮಯ್ಯ, ಸಮುದಾಯ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಮನೋಜ್‌ ವಾಮಂಜೂರು, ಬಹುಭಾಷಾ ಕವಿಗೋಷ್ಠಿ ಸಿದ್ಧತಾ ಸಮಿತಿ ಅಧ್ಯಕ್ಷ ರಾಮಚಂದ್ರ ನಾವುಡ, ಸಮುದಾಯ ಕುಂದಾಪುರದ ಹಿರಿಯರಾದ ಜಿ.ವಿ. ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

ಸಮುದಾಯ ಕುಂದಾಪುರದ ಅಧ್ಯಕ್ಷ ಡಾ.ಸದಾನಂದ ಬೈಂದೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ವಾಸುದೇವ ಗಂಗೇರ ನಿರೂಪಿಸಿದರು.

ಆರಿಫ್ ರಾಜಾ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಿತು. ಮೊದಲ ಗೋಷ್ಠಿಯಲ್ಲಿ ಬಾಬು ಪಾಂಗಾಳ(ಕೊರಗ), ರೊನಿ ಕ್ರಾಸ್ತಾ ಕೆಲರೈ (ಕೊಂಕಣಿ), ರೇಣುಕಾ ರಮಾನಂದ (ಕನ್ನಡ), ಅಮೃತಾ ಶೆಟ್ಟಿ ಆತ್ರಾಡಿ (ತುಳು), ವಿಲ್ಸನ್ ಕಟೀಲ್ (ಕನ್ನಡ), ಎರಡನೇ ಗೋಷ್ಠಿಯಲ್ಲಿ ರವೀಂದ್ರನ್ ಪಾಡಿ (ಮಲಯಾಳಂ), ಫಾತಿಮಾ ರಲಿಯಾ (ಕನ್ನಡ), ಸುಮಿತ್ ಮೇತ್ರಿ (ಕನ್ನಡ), ಜೋಸೆಫ್ ಮಲ್ಲಾಡಿ (ಧಾರವಾಡ ಕನ್ನಡ), ಕವಿ ಮುಅದ್ ಜಿ.ಎಂ.(ಬ್ಯಾರಿ) ಕವನಗಳನ್ನು ವಾಚಿಸಿದರು.

ರಮೇಶ್ ಗುಲ್ವಾಡಿ, ಗಣೇಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಉದಯ ಗಾಂವ್ಕರ್ ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X