Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ನೈತಿಕತೆಯೇ ಸ್ವಾತಂತ್ರ್ಯ’ ಅಭಿಯಾನ ಆರಂಭ

‘ನೈತಿಕತೆಯೇ ಸ್ವಾತಂತ್ರ್ಯ’ ಅಭಿಯಾನ ಆರಂಭ

ವಾರ್ತಾಭಾರತಿವಾರ್ತಾಭಾರತಿ2 Sept 2024 5:22 PM IST
share
‘ನೈತಿಕತೆಯೇ ಸ್ವಾತಂತ್ರ್ಯ’ ಅಭಿಯಾನ ಆರಂಭ

ಉಡುಪಿ: ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲು ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶದಾದ್ಯಂತ ಸೆ.1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧೈಯ ವಾಕ್ಯದಡಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಹಿಳಾ ವಿಭಾಗದ ಉಡುಪಿ ಜಿಲ್ಲಾ ಸಂಚಾಲಕಿ ಕುಲ್ಸೂಮ್ ಅಬೂಬಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಪ್ರಯುಕ್ತ ’ಧರ್ಮದಲ್ಲಿ ನೈತಿಕತೆಯ ಕಲ್ಪನೆ’ ಶೀರ್ಷಿಕೆಯಡಿ ಅಂತ ರ್ಧರ್ಮೀಯ ವಿಚಾರಗೋಷ್ಠಿ, ಮಹಿಳಾ ಸಮಾವೇಶ, ಶಾಲಾ-ಕಾಲೇಜು ಗಳಲ್ಲಿ ಉಪ ನ್ಯಾಸ, ವೈಯಕ್ತಿಕ ಭೇಟಿ, ಡಿಸಿ, ಎಸ್ಪಿ ಭೇಟಿ, ಸಮಾಜದ ಇತರ ಗಣ್ಯ ವ್ಯಕ್ತಿಗಳ ಸಂದರ್ಶನ ನಡೆಸಲಾಗುವುದು. ಅದರ ಪ್ರಮುಖ ಅಂಶಗಳನ್ನು ಆಯ್ದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಲಾಗುವುದು. ಲೇಖನ, ಭಾಷಣ ಸ್ಪರ್ಧೆ, ಪೋಸ್ಟರ್ ಡಿಸೈನಿಂಗ್, ಕಥೆ ಮುಂತಾದವುಗಳ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.

ಪ್ರಸಕ್ತ ಕಾಲದಲ್ಲಿ ನಮ್ಮ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿವೆ. ಹೆಚ್ಚುತ್ತಿರುವ ನಗ್ನತೆ, ಜೂಜು, ಮಧ್ಯಪಾನ, ಮಾದಕ ವ್ಯಸನ, ಲಿವಿಂಗ್ ರಿಲೇಶನ್ಶಿಪ್, ಸಲಿಂಗ ಕಾಮ ಹಾಗೂ ವೇಶ್ಯಾವಾಟಿಕೆಗಳಂತಹ ಕೆಡುಕುಗಳು ಒಂದೆಡೆ ಸಮಾಜದ ಹದಗೆಡುತ್ತಿರುವ ನೈತಿಕ ಮಟ್ಟಕ್ಕೆ, ಕೈಗನ್ನಡಿಯಾಗಿದ್ದರೆ ಇನ್ನೊಂದೆಡೆ ನೈತಿಕ ಸಾಮಾಜಿಕ ಮತ್ತು ಜೈವಿಕ ಮಟ್ಟದಲ್ಲಿ ಅಸಂಖ್ಯ ಸಮಸ್ಯೆಗಳನ್ನು ಹುಟ್ಟು ಹಾಕಿವೆ ಎಂದು ಅವರು ಹೇಳಿದರು.

ಬಂಡವಾಳಶಾಹಿ ಶಕ್ತಿಗಳ ಯೋಜನೆಗಳು ಸಮಾನತೆ ಮತ್ತು ಸ್ವಾತಂತ್ರ್ಯದ ಜಾಡಿನಲ್ಲಿ ಆಧುನಿಕ ಯುಗವನ್ನು ದಾರಿ ತಪ್ಪಿಸಿದೆ. ಈ ಅಭಿಯಾನದ ಮೂಲಕ ಮಾನವ ಜೀವನದ ಸುಭಿಕ್ಷೆ ಮತ್ತು ಮನೋಹರತೆಯು ನೈತಿಕ ಕಟ್ಟಳೆಗಳನ್ನು ಪಾಲಿಸುವುದರಿಂದಲೇ ಸಾಧ್ಯ ಎಂಬ ಪ್ರಜ್ಞೆಯನ್ನು ಬೆಳೆಸುವ ಸಂಕಲ್ಪವನ್ನು ತೊಟ್ಟಿದೆ. ಯುವ ಪೀಳಿಗೆಯನ್ನು ಸ್ವಾತಂತ್ರ್ಯದ ತಪ್ಪು ಕಲ್ಪನೆಯಿಂದ ಜಾಗೃತಗೊಳಿಸುವುದು ಮತ್ತು ಅದರಿಂದ ರಕ್ಷಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ವರ್ತುಲ ಸ್ಥಾನೀಯ ಸಂಚಾಲಕಿ ವಾಜಿದಾ ತಬಸ್ಸುಮ್, ಸಹ ಸಂಚಾಲಕಿಯರಾದ ಫರ‌್ಹತ್ ದಾವೂದ್, ಶಾಹಿಲ ಹನೀಫ್, ಕಾಪು ವರ್ತುಲ ಸ್ಥಾನೀಯ ಸಂಚಾಲಕಿ ಶಹನಾಝ್, ತೋನ್ಸೆ ವರ್ತುಲ ಸ್ಥಾನೀಯ ಸಂಚಾಲಕಿ ಜಮೀಲಾ ಸದೀದಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X