Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ...

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jan 2026 9:40 PM IST
share
ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಮತ್ತು ಪಾರ್ಕಿಂಗ್ ನಿಷೇಧ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.

ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವ ವಾಹನ ಗಳಿಗೆ ಈ ಕೆಳಕಂಡ ಮಾರ್ಗದಲ್ಲಿ ಸಂಚರಿ ಸುವ ಬಗ್ಗೆ ಪರಿಷ್ಕರಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಸೂಚನೆ ಹೊರಡಿಸಿದ್ದಾರೆ.

ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವ ವಾಹನಗಳು: ಜ.17ರ ಸಂಜೆ 7 ಗಂಟೆಯ ತನಕ ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7ರಿಂದ ಮರುದಿನ ಬೆಳಗ್ಗೆ 7ರವರೆಗೆ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಲಕ್ಷ್ಮೀಂದ್ರ ನಗರ, ಸಗ್ರಿ ನೊಳೆ ರಸ್ತೆಯಿಂದಾಗಿ ಪೆರಂಪಳ್ಳಿ ಭಾರತೀಯ ಆಹಾರ ನಿಗಮದ ಮುಂಭಾಗದಿಂದ ಅಂಬಾಗಿಲು ಜಂಕ್ಷನ್ ಮೂಲಕ ರಾ.ಹೆ.66ನ್ನು ಸಂಪರ್ಕಿಸಿ, ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್‌ಗೆ ಆಗಮಿಸಬೇಕು.

ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ಪ್ರಯಾಣಿ ಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಪೆರಂಪಳ್ಳಿ ಮಾರ್ಗವಾಗಿ ಪೆರಂಪಳ್ಳಿ ಭಾರತೀಯ ಆಹಾರ ನಿಗಮದ ಮುಂಭಾಗದಿಂದ ಸಗ್ರಿನೊಳೆ, ಲಕ್ಷ್ಮೀಂದ್ರ ನಗರ, ಸಿಂಡಿಕೇಟ್ ಸರ್ಕಲ್ ಮೂಲಕ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಈ ಮಾರ್ಗವನ್ನು ಹೊರತುಪಡಿಸಿ ಉಳಿದ ಮಾರ್ಗಗಳ ವಾಹನ ಸಂಚಾರ ನಿಷೇಧ ಬದಲಿ ಮಾರ್ಗ ಹಾಗೂ ಪಾರ್ಕಿಂಗ್ ನಿಷೇದದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ದೇಶೀಯ ಮದ್ಯ ಮಾರಾಟ) ನಿಯಮಗಳಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಅಂಬಲಪಾಡಿ, ಕುತ್ಪಾಡಿ, ಕಡೆಕಾರು, ಕಿದಿಯೂರು, ಮೂಡುತೋನ್ಸೆ ಹಾಗೂ ಪಡು ತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ ಜನವರಿ 17ರ ಬೆಳಗ್ಗೆ 10 ರಿಂದ ಜ.18ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್,ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಮದ್ಯ ಮಾರಾಟ ವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ಈ ಅವಧಿಯನ್ನು ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X