Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜ ಸುಧಾರಕರ ಹೋರಾಟದಿಂದ ಒಟ್ಟಾಗಿ ಓಣಂ...

ಸಮಾಜ ಸುಧಾರಕರ ಹೋರಾಟದಿಂದ ಒಟ್ಟಾಗಿ ಓಣಂ ಆಚರಿಸುವ ಸ್ವಾತಂತ್ರ್ಯ: ನಟ ಮುಕೇಶ್

ವಾರ್ತಾಭಾರತಿವಾರ್ತಾಭಾರತಿ31 Aug 2025 10:19 PM IST
share
ಸಮಾಜ ಸುಧಾರಕರ ಹೋರಾಟದಿಂದ ಒಟ್ಟಾಗಿ ಓಣಂ ಆಚರಿಸುವ ಸ್ವಾತಂತ್ರ್ಯ: ನಟ ಮುಕೇಶ್

ಉಡುಪಿ, ಆ.31: ಶತಮಾನಗಳ ಹಿಂದೆ ಕೇರಳದಲ್ಲಿ ಎಲ್ಲರೂ ಒಂದಾಗಿ ಓಣಂ ಆಚರಿಸುವ ಸ್ವಾತಂತ್ರ್ಯ ಇರಲಿಲ್ಲ. ಆದರೆ ಸಮಾಜ ಸುಧಾರಕರಾದ ನಾರಾಯಣ ಗುರು, ಅಯ್ಯಂಕಾಳಿ ಮೊದಲಾದವರ ಹೋರಾಟದ ಫಲವಾಗಿ ಇಂದು ನಾವೆಲ್ಲ ಜೊತೆಯಾಗಿ ಓಣಂ ಆಚರಿಸುವ ಸ್ವಾತಂತ್ರ್ಯ ದೊರೆತಿದೆ ಎಂದು ಕೇರಳದ ಕೊಲ್ಲಂನ ಶಾಸಕ ಹಾಗೂ ಚಿತ್ರನಟ ಮುಕೇಶ್ ಹೇಳಿದ್ದಾರೆ.

ಕೇರಳ ಕಲ್ಚರಲ್ ಆ್ಯಂಡ್ ಸೋಷಿಯಲ್ ಸೆಂಟರ್ ಉಡುಪಿ ವತಿಯಿಂದ ಅಂಬಲಪಾಡಿಯ ಶಾಮಿಲಿ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಓಣಂ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುವ ಹಬ್ಬ. ನಾವೆಲ್ಲರೂ ಜಾತಿ ಬೇರೆ ಬೇರೆಯಾದರೂ ಶಿಕ್ಷಣ ಪಡೆದ ಪರಿಣಾಮ ಒಂದೇ ಎಂಬ ಚಿಂತನೆಯನ್ನು ಬೆಳೆಸಿಕೊಂಡಿದ್ದೇವೆ. ಅಂದಿನಿಂದ ನಮಗೆ ಒಟ್ಟಾಗಿ ಹಬ್ಬ ಆಚರಿಸುವ ಸ್ವಾತಂತ್ರ್ಯ ಸಿಕ್ಕಿದೆ ಎಂದು ಅವರು ತಿಳಿಸಿದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಣಿಪಾಲದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ನಿರ್ದೇಶಕ ಚೆರಿಯನ್ ವರ್ಗೀಸ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಟ್ರಸ್ಟಿ ಅಭಿಲಾಷ್ ಪಿ.ವಿ., ಮಣಿಪಾಲ ಸೆಂಟರ್ ಫಾರ್ ನ್ಯಾಚುರಲ್ ಸೈನ್ಸಸ್‌ನ ನಿರ್ದೇಶಕ ಡಾ.ಶ್ರೀಕುಮಾರ್, ಕೇರಳ ಸಮಾಜಂ ಮಂಗಳೂರು ಅಧ್ಯಕ್ಷ ಟಿ.ಕೆ.ರಾಜನ್, ಉದ್ಯಮಿ ರಂಜನ್ ಕಲ್ಕೂರ ಮುಖ್ಯ ಅತಿಥಿಗಳಾಗಿದ್ದರು.

ಅಧ್ಯಕ್ಷತೆಯನ್ನು ಕೇರಳ ಕಲ್ಚರಲ್ ಆ್ಯಂಡ್ ಸೋಷಿಯಲ್ ಸೆಂಟರ್ ಅಧ್ಯಕ್ಷ ಸುಗುಣ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ವೈದ್ಯೆ ಡಾ.ಎ.ಗಿರಿಜಾ, ಮುಳುಗು ತಜ್ಞ ಈಶ್ವರ ಮಲ್ಪೆ, ಉದ್ಯಮಿ ಹಾಜಿ ಕೆ. ಅಬ್ದುಲ್ಲಾ ಪರ್ಕಳ, ಕೃಷಿಕರಾದ ವಲ್ಸ ಜಾರ್ಜ್, ನಿವೃತ್ತ ಯೋಧ ಕ್ಯಾ.ವೇಣುಗೋಪಾಲನ್ ನಾಯರ್ ಅವರನ್ನು ಪಂಚರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಓಣಂ ಸಂಭ್ರಮ ಸಮಿತಿ ಅಧ್ಯಕ್ಷ ಶಿನೋದ್ ಟಿ.ಆರ್., ಕೇರಳ ಕಲ್ಚರಲ್ ಆ್ಯಂಡ್ ಸೋಷಿಯಲ್ ಸೆಂಟರ್‌ನ ಕಾರ್ಯದರ್ಶಿ ಬಿನೀಶ್ ವಿ.ಸಿ., ಸೆಂಟರ್‌ನ ಮಹಿಳಾ ವಿಭಾಗದ ಅಧ್ಯಕ್ಷೆ ಶೈನಿ ಸತ್ಯಭಾಮ, ರಾಜನ್ ಜಿ. ಪಿಲಿಪ್ಸ್ ಉಪಸ್ಥಿತರಿದ್ದರು.

ತ್ರಿಶೂನರ್ ಜನ ನಯನ ತಂಡದಿಂದ ಕೇರಳೀಯ ವೈಭವಂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಬಳಿಕ ಎಲ್ಲರಿಗೂ ಓಣಂ ಸದ್ಯ(ಓಣಂ ಊಟ) ಏರ್ಪಡಿಸಲಾಗಿತ್ತು. ಹೂವಿನ ರಂಗೋಲಿ(ಪೂಕ್ಕಳಂ) ಸ್ಪರ್ಧೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X