Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗೋಪಾಡಿ: ಉಪಯೋಗಕ್ಕಿಲ್ಲದೆ ಪಾಳುಬಿದ್ದಿದೆ...

ಗೋಪಾಡಿ: ಉಪಯೋಗಕ್ಕಿಲ್ಲದೆ ಪಾಳುಬಿದ್ದಿದೆ ಅಂಬೇಡ್ಕರ್ ಭವನ

► 2016-17ರಲ್ಲಿ ನಿರ್ಮಾಣದ ಬಳಿಕ ಬಾಗಿಲು ತೆರೆಯದ ಆರೋಪ ► ಎಸ್ಸಿ-ಎಸ್ಟಿ ಮನೆಯೇ ಇಲ್ಲದ ಕಡೆ ಭವನ ಯಾಕೆ? ► ಸೂಕ್ತ ತನಿಖೆಗೆ ದಸಂಸ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Sept 2023 8:53 PM IST
share
ಗೋಪಾಡಿ: ಉಪಯೋಗಕ್ಕಿಲ್ಲದೆ ಪಾಳುಬಿದ್ದಿದೆ ಅಂಬೇಡ್ಕರ್ ಭವನ

ವರದಿ: ಯೋಗೀಶ್ ಕುಂಭಾಸಿ

ಕುಂದಾಪುರ, ಸೆ.13: ಆರು ವರ್ಷಗಳ ಹಿಂದೆ ನಿರ್ಮಾಣಗೊಂಡ ಗೋಪಾಡಿಯ ಅಂಬೇಡ್ಕರ್ ಭವನದ ಬಾಗಿಲು ಇಂದಿನವರೆಗೆ ತೆರೆದಿಲ್ಲ. ಕಟ್ಟಡದೊಳಕ್ಕೆ ಜೇಡರ ಬಲೆ ಕಟ್ಟಿದ್ದು, ಹೊರಭಾಗ ಗಿಡಗಂಟಿ, ಪೊದೆಗಳಿಂದ ಆವೃತವಾಗಿದೆ. ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಡುಚಾವಡಿಬೆಟ್ಟು ಎಂಬಲ್ಲಿ ನಿರ್ಮಿಸಿದ ಅಂಬೇಡ್ಕರ್ ಭವನದ ಇಂದಿನ ಚಿತ್ರಣ ಇದು.

ಅಂಬೇಡ್ಕರ್ ಭವನವನ್ನು ಇಲ್ಲಿ ನಿರ್ಮಿಸಿರುವುದರ ನೈಜ್ಯ ಉದ್ದೇಶವೇನು ಎಂಬುದು ಈಗ ಪ್ರಶ್ನೆಯಾಗಿದೆ. ಪರಿಶಿಷ್ಟ ಜಾತಿ-ಪಂಗಡಗಳ ಮನೆಯೇ ಇಲ್ಲದ ಪಡುಚಾವಡಿಬೆಟ್ಟು ಪ್ರದೇಶಲ್ಲಿ 2016-17ರಲ್ಲಿ ಕೆಆರ್‌ಐಎಲ್ ನಿಂದ 12 ಲಕ್ಷ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಗೊಂಡಿತ್ತು.

ಈ ಭವನದಿಂದ ಪರಿಶಿಷ್ಟ ಜಾತಿ-ಪಂಗಡಗಳಿಗೆ ಇದುವರೆಗೆ ಯಾವುದೇ ಉಪಯೋಗವಾಗಿಲ್ಲ. ಈ ಭವನ ನಿರ್ಮಾಣ ಮಾಡಲು ಕನಿಷ್ಟ 20 ಸೆಂಟ್ಸ್ ಜಾಗವಿರಬೇಕಿದ್ದು,ಇಲ್ಲಿ ಕೇವಲ 8-9ಸೆಂಟ್ಸ್ ಸ್ಥಳದಲ್ಲಿ ನಿರ್ಮಾಣಗೊಂಡಿದೆ. ಸುತ್ತಮುತ್ತ ದಲಿತೇತರ ಸಮುದಾಯದ ಮನೆಗಳಿದ್ದು, ಸಂಪರ್ಕ ರಸ್ತೆ ಕೂಡಾ ಖಾಸಗಿಯವರದ್ದಾಗಿದೆ.

ದಲಿತ ಸಮುದಾಯದವರೇ ಹೆಚ್ಚಾಗಿ ಇರುವ ಕಡೆಯಲ್ಲಿ ಅವರ ವಿವಿಧ ಚಟುವಟಿಕೆ ನಡೆಸಲು ಅನುಕೂಲ ಕಲ್ಪಿಸುವುದು ಅಂಬೇಡ್ಕರ್ ಭವನ ನಿರ್ಮಾಣದ ಉದ್ದೇಶವಾಗಿದೆ. ಆದರೆ ಈ ಪ್ರದೇಶದಲ್ಲಿ ಸಮುದಾಯದ ಒಂದು ಮನೆಯೂ ಇಲ್ಲದೆ ಭವನ ನಿರ್ಮಿಸಿದ್ದು ಉಪಯೋಗಕ್ಕಿಲ್ಲದಂತಾಗಿದೆ.

ಸೂಕ್ತ ತನಿಖೆಗೆ ಒತ್ತಾಯ

ಪಡುಚಾವಡಿಬೆಟ್ಟು ಪ್ರದೇಶದಲ್ಲಿ ಅಂಬೇಡ್ಕರ್ ಭವನ ನಿರ್ಮಾಣದ ವೇಳೆ ದಲಿತ ಮುಖಂಡರ ಅಭಿಪ್ರಾಯ ಪಡೆಯದೇ ಭವನವನ್ನು ನಿರ್ಮಿಸಲಾಗಿದೆ. ದಲಿತ ಸಮುದಾಯದ ಯಾವುದೇ ಸಭೆ ಸಮಾರಂಭ ಮಾಡಲು ಪ್ರಸ್ತುತ ಇರುವ ಸ್ಥಳ ಯೋಗ್ಯವಿಲ್ಲ ಎಂಬುದು ಸಂಘಟನೆಯವರ ಆರೋಪ.

ಪರಿಶಿಷ್ಟ ಜಾತಿ ಪಂಗಡಗಳ ಶೇಕಡಾವಾರು ನಿಧಿಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿದ್ದರ ಬಗ್ಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿ ಕುಂದಾಪುರ ತಾಲೂಕು ಸಂಚಾಲಕ ಕೆ.ಸಿ ರಾಜು ಬೆಟ್ಟಿನಮನೆ, ತಾಲೂಕು ಸಂಘಟನಾ ಸಂಚಾಲಕರಾದ ಸುರೇಶ್ ಹಕ್ಲಾಡಿ, ನಾಗರಾಜ್ ಸಟ್ವಾಡಿ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

"2018-19ರ ಉಡುಪಿ ಜಿಲ್ಲಾ ದಲಿತ ಕುಂದು ಕೊರತೆಗಳ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸಂಘಟನೆಯಿಂದ ಲಿಖಿತ ದೂರು ಜಿಲ್ಲಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ತೆಗೆದು ಕೊಂಡಿಲ್ಲ. ಇಷ್ಟು ದೊಡ್ಡ ಪ್ರಮಾಣದ ಪರಿಶಿಷ್ಟ ಜಾತಿ ಪಂಗಡಗಳ ಶೇಕಡಾವಾರು ನಿಧಿಯನ್ನು ದುರ್ಬಳಕೆ ಮಾಡಿಕೊಂಡ ಸಂಬಂಧಿತ ಇಲಾಖೆ, ಇಂಜಿನಿಯರ್, ಗುತ್ತಿಗೆದಾರರು ಮತ್ತು ಅಂದಿನ ಕುಂದಾಪುರ ತಾಲೂಕು ಸಮಾಜ ಕಲ್ಯಾಣಾ ಧಿಕಾರಿಗಳ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಮತ್ತು ಸಮಾಜ ಕಲ್ಯಾಣಾಧಿಕಾರಿಗಳು ಕ್ರಮವಹಿಸಬೇಕಿದೆ. ಸೂಕ್ತ ಕ್ರಮಕೈಗೊಳ್ಳಲು ಮೂರು ತಿಂಗಳು ಗಡುವು ನೀಡಲಾಗುತ್ತದೆ. ಇಲ್ಲವಾದಲ್ಲಿ ದಲಿತರ ಸರ್ವಾಂಗೀಣ ಏಳಿಗೆಗಾಗಿ ಮೀಸಲಿಟ್ಟ ಹಣವನ್ನು ಬೇಕಾಬಿಟ್ಟಿ ವಿನಿಯೋಗಿಸಿ ದಲಿತರ ಹಕ್ಕನ್ನು ಕಸಿದುಕೊಂಡವರ ವಿರುದ್ಧ ದಲಿತ ದೌರ್ಜನ್ಯ ದೂರು ದಾಖಲಿಸಿ ಕಾನೂನು ಹೋರಾಟ ನಡೆಸಲಾಗುತ್ತದೆ".

- ರಾಜು ಬೆಟ್ಟಿನಮನೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಂಚಾಲಕ

"ಈ ಹಿಂದೆ ಗೋಪಾಡಿ ಗ್ರಾಪಂ ವ್ಯಾಪ್ತಿ ಪಡುಚಾವಡಿಬೆಟ್ಟು ಅಂಬೇಡ್ಕರ್ ಭವನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಮುದಾಯದವರಿಗೆ ಉಪಯೋಗವಾಗದಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ. ಸಮಿತಿ ಕಾರ್ಯ ಚಟುವಟಿಕೆಗಳಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೇ ಅಧ್ಯಕ್ಷರಾಗಿದ್ದು ಪ.ಜಾತಿ-ಪ.ಪಂಗಡದ ಹೆಚ್ಚಿನ ಜನರು ಈ ಭವನ ಸದುಪಯೋಗ ಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಪಿಡಿಒ ಅವರಿಗೆ ಸೂಚಿಸಲಾಗಿದೆ".

-ರಾಘವೇಂದ್ರ ವರ್ಣೇಕರ್, ಸಹಾಯಕ ನಿರ್ದೆಶಕರು ಕುಂದಾಪುರ ಸಮಾಜ ಕಲ್ಯಾಣ ಇಲಾಖೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X