Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನುಗಾರಿಕೆ, ಒಳನಾಡು ಮೀನುಗಾರಿಕೆಗೆ...

ಮೀನುಗಾರಿಕೆ, ಒಳನಾಡು ಮೀನುಗಾರಿಕೆಗೆ ಸರಕಾರದ ನೆರವು ಅಗತ್ಯ: ರಾಜ್ಯ ಮೀನುಗಾರರ ಮಹಾಮಂಡಲ ಅಧ್ಯಕ್ಷ ಮಂಜಪ್ಪ

ವಾರ್ತಾಭಾರತಿವಾರ್ತಾಭಾರತಿ16 Feb 2024 9:27 PM IST
share
ಮೀನುಗಾರಿಕೆ, ಒಳನಾಡು ಮೀನುಗಾರಿಕೆಗೆ ಸರಕಾರದ ನೆರವು ಅಗತ್ಯ: ರಾಜ್ಯ ಮೀನುಗಾರರ ಮಹಾಮಂಡಲ ಅಧ್ಯಕ್ಷ ಮಂಜಪ್ಪ

ಉಡುಪಿ: ಸರಕಾರದ ಅನುದಾನ, ಸಹಕಾರ ಸಿಗದೆ ಸಹಕಾರಿ ಕ್ಷೇತ್ರ ಕುಂಠಿತಗೊಂಡಿದೆ. ಮೀನುಗಾರಿಕೆ, ಒಳನಾಡು ಮೀನುಗಾರಿಕೆಲ ಅಭಿವೃದ್ಧಿ, ಭವಿಷ್ಯದ ಉದ್ಯೋಗ ಸೃಷ್ಟಿಗೆ ಸರಕಾರದ ಬೆಂಬಲದ ಅಗತ್ಯವಿದೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ ಅಧ್ಯಕ್ಷ ಹೆಚ್.ಜಿ.ಮಂಜಪ್ಪ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ ಮೈಸೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆ ಗಳ ಸಹಯೋಗದಲ್ಲಿ ರಾಜ್ಯ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯದಕ್ಷತೆ ಕುರಿತು ಉಡುಪಿಯ ಹೊಟೇಲ್ ಒಷಿಯನ್ ಪರ್ಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

೧೯೫೬ರಲ್ಲಿ ಮೀನುಗಾರಿಕಾ ಕ್ಷೇತ್ರದಲ್ಲಿ ಒಂದು ಲಕ್ಷ ಮೆಟ್ರಿಕ್ ಟನ್ ಮೀನು ಉತ್ಪಾದನೆಯಾಗುತಿದ್ದರೆ, ಆರು ದಶಕಗಳಲ್ಲಿ ಅದು ೧೨.೨೫ಲಕ್ಷ ಮೆಟ್ರಿಕ್ ಟನ್‌ಗಳಿಗೇರಿದೆ. ಆದರೂ ಮೀನುಗಾರಿಕಾ ಕ್ಷೇತ್ರಕ್ಕೆ, ಮೀನುಗಾರರಿಗೆ ಸರಕಾರದ ಬೆಂಬಲ ದೊರೆಯಬೇಕಿದೆ ಎಂದರು.

ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಕಾರ್ಯದರ್ಶಿ ಲಕ್ಷ್ಮೀಪತಯ್ಯ ಮಾತನಾಡಿ, ಕರಾವಳಿಯಲ್ಲಿ ಸಹಕಾರಿ ವ್ಯವಸ್ಥೆ ವ್ಯವಸ್ಥಿತ ವಾಗಿದ್ದು ಪೈಪೋಟಿ ಎದುರಿಸುತ್ತಿದೆ. ವಿಧಾನಪರಿಷತ್ತಿನಲ್ಲಿ ಸಹಕಾರಿ ಕ್ಷೇತ್ರ ಕ್ಕೊಂದು ಪ್ರಾತಿನಿಧ್ಯದ ಜತೆಗೆ ಸಹಕಾರಿ ವಿವಿ ಸ್ಥಾಪನೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ವಿ. ಮಹೇಶ್ವರಪ್ಪ ಮಾತನಾಡಿ, ಕರಾವಳಿ ಸಹಕಾರಿ ಕ್ಷೇತ್ರದಲ್ಲಿ ವರ್ಕ್ ಕಲ್ಚರ್ ವಿಭಿನ್ನವಾಗಿದ್ದು ಬದ್ಧತೆ, ಕಾರ್ಯದಕ್ಷತೆ ಶೇ. ೯೦ಕ್ಕಿಂತ ಅಧಿಕವಿದೆ. ಹೀಗಾಗಿ ಇಲ್ಲಿ ಸಹಕಾರ ಕ್ಷೇತ್ರ ಉಳಿದೆಡೆಗಿಂತ ಸದೃಢವಾಗಿದೆ ಎಂದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಜ್ಞಾನದ ಬೀಜ ಬಿತ್ತಿದರೆ ನಿರಂತರ ಫಲ ಸಿಗುತ್ತದೆ. ಕಾನೂನು ಬದಲಾವಣೆಗೆ ಅನುಗುಣವಾಗಿ ಆಡಳಿತ ಧರ್ಮ ಪಾಲಿಸಬೇಕು. ಸದಸ್ಯರು, ಸಾರ್ವಜನಿಕರಿ ಗಾಗಿ ಹೋರಾಟ ನಡೆಸಲಾಗುತ್ತಿದ್ದು ಸಹಕಾರಿ ಕ್ಷೇತ್ರದ ಆರೋಗ್ಯಕರ ಬೆಳವಣಿಗೆ, ಜನೋಪಯೋಗಿ ಆಗಬೇಕು. ಸಹಕಾರಿ ಸಂಸ್ಥೆಗಳಿಗೆ ವಿಧಿಸಲಾಗುವ ಜಿಎಸ್‌ಟಿ ದರ ಕನಿಷ್ಠಕ್ಕಿಳಿಸಬೇಕು. ಈ ವಿಷಯದಲ್ಲಿ ಯಾರಿಗೇ ತೊಂದರೆಯಾದರೆ ಹೋರಾಟಕ್ಕೆ ಬದ್ಧ ಎಂದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಸಿಇಒ ಹಾಲಪ್ಪ ಕೋಡಿಹಳ್ಳಿ, ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ ನಿರ್ದೇಶಕ ಅಂಜು ಬಾಬು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಮಂಜಯ್ಯ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಮನೋಜ್ ಕರ್ಕೇರ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ವ್ಯವಸ್ಥಾಪಕ ನಿರ್ದೇಶಕ ಡಾ. ಗುರುಸ್ವಾಮಿ ಉಪಸ್ಥಿತರಿದ್ದರು.

ಕವಿತಾ, ಪ್ರಮೀಳಾ ಸುರೇಶ್ ಪ್ರಾರ್ಥಿಸಿ, ಪಿ.ಶ್ರೀಧರ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X