Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಷಾಡದಲ್ಲಿ ಆರೋಗ್ಯ, ಆಹಾರ ಮಾಹಿತಿ...

ಆಷಾಡದಲ್ಲಿ ಆರೋಗ್ಯ, ಆಹಾರ ಮಾಹಿತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Aug 2023 6:17 PM IST
share
ಆಷಾಡದಲ್ಲಿ ಆರೋಗ್ಯ, ಆಹಾರ ಮಾಹಿತಿ ಕಾರ್ಯಕ್ರಮ

ಉಡುಪಿ, ಆ.1: ಪ್ರಸ್ತುತ ಕಾಲಘಟ್ಟದಲ್ಲಿ ಇಂದಿನ ಯುವ ಪೀಳಿಗೆ ಅತ್ಯಾಧುನಿಕ ಸವಲತ್ತು, ಆರ್ಥಿಕ ಸಬಲತೆ ಹೊಂದಿರುವ ಕಾರಣ ತಮ್ಮ ಹಿರಿಯರು ಅನುಭವಿಸಿದ ಸಂಕಷ್ಟಗಳ ಬಗ್ಗೆ ಅರಿತು ಕೊಂಡಿಲ್ಲ. ಆಟಿ (ಆಷಾಢ) ತಿಂಗಳ ಬವಣೆ ಇಂದು ರೂಢಿಯಲ್ಲಿಲ್ಲದ ಕಾರಣ, ಅವುಗಳನ್ನು ಆಚರಣೆಯ ಮೂಲಕ ತಿಳಿಸುವ ಪ್ರಯತ್ನ ಇಂದು ಸಂಘ ಸಂಸ್ಥೆಗಳ ಕಾರ್ಯ ಕ್ರಮಗಳ ಮೂಲಕ ನಡೆಯುತ್ತಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಡಾ.ಅನು ಆಯುರ್ವೇದ, ಚೈತನ್ಯ ಫೌಂಡೇಶನ್ ಹಾಗೂ ರೋಟರಿ ಕ್ಲಬ್ ಅಂಬಲಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂಬಲಪಾಡಿಯ ಅನು ಡೆಂಟಲ್ ಮತ್ತು ಆಯುರ್ವೇದ ಸಂಸ್ಥೆಯ ಮೆಂಡನ್ಸ್ ಗಿರಿಜಾ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾದ ಆಷಾಢದಲ್ಲಿ ಆರೋಗ್ಯ ಮತ್ತು ಆಹಾರ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗತಿಸಿ ಹೋದ ಕಾಲದ ದಾಖಲೀಕರಣ ನಡೆಸಲು ಅಸಾಧ್ಯವಾದರೂ, ಅಂದಿನ ಬದುಕಿನ ಸಂಕಷ್ಟಗಳನ್ನು ಅನುಭವಿಸಿದ ಅದೆಷ್ಟೋ ಹಿರಿಯ ಜೀವಗಳು ನಮ್ಮೊಂದಿಗೆ ಇದ್ದಾರೆ. ಅಂದು ನಿರಂತರ ಸುರಿಯುವ ಮಳೆ, ಕೃಷಿ ಚಟುವಟಿಕೆ ಗಳು ಒಂದೆಡೆಯಾದರೆ ಶೀತ, ಜ್ವರ ಮೊದಲಾದ ಕಾಯಿಲೆ ಕಸಾಲೆಗಳ ನಡುವೆ ಹೊಯ್ದಾಟ ನಡೆಸಬೇಕಿತ್ತು. ಇಂದಿನಂತೆ ಬೀದಿಗೊಂದು ಚಿಕಿತ್ಸಾಲಯಗಳು ಇಲ್ಲದ ಆ ದಿನಗಳಲ್ಲಿ ಪ್ರಕೃತಿಯಲ್ಲಿಯೇ ಸಿಗುವ ಗೆಡ್ಡೆಗೆಣಸುಗಳು, ಸೊಪ್ಪು, ಗಿಡ ಮೂಲಿಕೆಗಳೇ ಜೀವವುಳಿಸುವ ಸಾಧನಗಳಾಗಿದ್ದವು. ಅಂತಹ ಸಂಕಷ್ಟದ ಬದುಕನ್ನು ಬಾಳಿದ ನಮ್ಮ ಹಿರಿಯರು, ಅವರ ಆಹಾರ ಕ್ರಮಗಳ ಬಗ್ಗೆ ಇಂತಹ ಕಾರ್ಯಕ್ರಮ ಗಳಿಂದ ಬೆಳಕು ಚೆಲ್ಲಲು ಸಾಧ್ಯ ಎಂದರು.

ಅನು ಆಯುರ್ವೇದದ ವೈದ್ಯೆ ಡಾ.ಸೌಮ್ಯ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತೆ ಅಶ್ವಿನಿ ಆರ್.ಶೆಟ್ಟಿ ಅವರು ಆಷಾಢದ ಆಚರಣೆ ಮತ್ತು ಆಹಾರ ಕ್ರಮದ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಂಬಲಪಾಡಿ ಅಧ್ಯಕ್ಷ ಅಶೋಕ್ ಶೆಟ್ಟಿ, ಮೋಹನದಾಸ್ ಪೈ, ಮಧುಮೇಹ ತಜ್ಞೆ ಡಾ.ಶ್ರತಿ ಬಲ್ಲಾಳ್, ಜೋಸೆಫ್ ರೆಬೆಲ್ಲೊ ಮತ್ತಿತರರು ಉಪಸ್ಥಿತರಿದ್ದರು. ಲೀಲಾ ಭಟ್ ಸ್ವಾಗತಿಸಿ, ನೀಲಾವತಿ ಎ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X