Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ...

ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಗ್ರಾಪಂ ತಡೆ

ವಾರ್ತಾಭಾರತಿವಾರ್ತಾಭಾರತಿ4 July 2025 10:03 AM IST
share
ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಗ್ರಾಪಂ ತಡೆ

ಪಡುಬಿದ್ರೆ: ಹೆಜಮಾಡಿ ಒಳ ರಸ್ತೆಯ ಟೋಲ್ ಪ್ಲಾಝಾದ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವ ಟೋಲ್ ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೆಜಮಾಡಿ ಗ್ರಾಪಂ, ಸ್ಥಳಕ್ಕೆ ಆಗಮಿಸಿ ಸೊತ್ತುಗಳನ್ನು ವಶಪಡಿಸಿಕೊಂಡು ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ಗುರುವಾರ ನಡೆದಿದೆ.

ಈ ಹಿಂದೆ ಜಿಲ್ಲಾಡಳಿತ ನಿರ್ದೇಶಿಸಿದಂತೆ ಹೆಜಮಾಡಿ ಒಳ ರಸ್ತೆಯ ಪ್ರತ್ಯೇಕ ಟೋಲ್ ನಲ್ಲಿ ಶಾಲಾ ವಾಹನ ಸಹಿತ ಹೆಜಮಾಡಿ ಗ್ರಾಮಸ್ಥರ ವಾಹನಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗುತ್ತಿತ್ತು. ಇತ್ತೀಚೆಗೆ ಕೆಲವೊಂದು ಸ್ಥಳೀಯ ವಾಹನಗಳಿಗೆ ಮತ್ತು ಶಾಲಾ ವಾಹನಗಳಿಂದಲೂ ಟೋಲ್ ಸಂಗ್ರಹಕ್ಕೆ ಗುತ್ತಿಗೆ ಕಂಪೆನಿ ಮುಂದಾಗಿತ್ತು. ಈ ಬಗ್ಗೆ ದೂರು ಪಡೆದ ಹೆಜಮಾಡಿ ಗ್ರಾಪಂ ಸೋಮವಾರ ಟೋಲ್ನ ಎರಡೂ ಬದಿಗಳಲ್ಲಿ ಪ್ರತ್ಯೇಕ ರಸ್ತೆ ನಿರ್ಮಾಣಕ್ಕೆ ಮುಂದಾಗಿತ್ತು. ಒಂದು ಬದಿಯಲ್ಲಿ ಪ್ರತ್ಯೇಕ ರಸ್ತೆಯನ್ನೂ ನಿರ್ಮಿಸಲಾಗಿತ್ತು. ಪೋಲಿಸರ ಮಧ್ಯಪ್ರವೇಶದ ಬಳಿಕ ಸದಸ್ಯರು ಹಿಂದಿರುಗಿ, ತುರ್ತು ಸಭೆ ಕರೆದು ಪರವಾನಿಗೆರಹಿತ ಒಳ ರಸ್ತೆಯ ಟೋಲ್ ಸ್ಥಗಿತಕ್ಕೆ ನಿರ್ಣಯಿಸಿ ಟೋಲ್ ಪ್ಲಾಝಾ ಗೋಡೆಗೆ ಅಂಟಿಸಿದ್ದರು.

ಜಿಲ್ಲಾಧಿಕಾರಿ ಆದೇಶದ ಕಡೆಗಣನೆ

ಸೋಮವಾರ ನಡೆದ ಘಟನೆಯ ಮಾಹಿತಿ ಅರಿತ ಜಿಲ್ಲಾಡಳಿತ ಎರಡೂ ಕಡೆಯವರನ್ನು ಬುಧವಾರ ಕರೆಸಿ ಚರ್ಚೆ ಬಳಿಕ ಸದ್ಯ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಲಾಗಿತ್ತು. ಉಡುಪಿ ಜಿಲ್ಲಾಧಿಕಾರಿ ಸಮ್ಮುಖ ನಡೆದ ಸಭೆಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿರ್ದೇಶನ ನೀಡಿದ್ದರೂ, ಕೆಕೆಆರ್ ಟೋಲ್ ಕಂಪೆನಿಯು ಗುರುವಾರ ಬೆಳಗ್ಗೆ ಒಳ ರಸ್ತೆಯ ಟೋಲ್ ನ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುರುವಾರ ಬೆಳಗ್ಗೆ ಟೋಲ್ ಕಂಪೆನಿಯು ಪ್ರತ್ಯೇಕವಾಗಿ ನಿರ್ಮಿಸಿದ ಜಾಗದಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಟೋಲ್ ಕಂಪೆನಿ ಮುಂದಾಗಿತ್ತು. ವಿಷಯ ತಿಳಿದ ಹೆಜಮಾಡಿ ಗ್ರಾಮ ಪಂಚಾಯತ್ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಕಾಮಗಾರಿ ಸ್ಥಗಿತಗೊಳಿಸಿ ಪಂಚಾಯತ್ ವತಿಯಿಂದ ಅವರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂದರ್ಭ ಆಗಮಿಸಿದ ಅಧಿಕಾರಿಗಳ ಹಾಗೂ ಪಂಚಾಯತ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಟೋಲ್ ಮ್ಯಾನೇಜರ್ ತಿಮ್ಮಯ್ಯ ಟೋಲ್ ಕಾಮಗಾರಿ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಪಡುಬಿದ್ರೆ ಠಾಣಾಧಿಕಾರಿ ಸಕ್ತಿವೇಲು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಜಿಲ್ಲಾಡಳಿತದ ಆದೆಶ ಪಾಲಿಸುವಂತೆ ನಿರ್ದೇಶನ ನೀಡಿದರು. ಹೆಜಮಾಡಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಎ. ಮೆಂಡನ್, ಉಪಾಧ್ಯಕ್ಷ ಮೋಹನ್ ಸುವರ್ಣ, ಸದಸ್ಯರಾದ ಶರಣ್ ಕುಮಾರ್ ಮಟ್ಟು, ಪ್ರಾಣೇಶ್ ಹೆಜ್ಮಾಡಿ, ಕಬೀರ್, ಜನಾರ್ದನ ಕೋಟ್ಯಾನ್, ಪವಿತ್ರಾ ಗಿರೀಶ್, ಹೆಜಮಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸುಧಾಕರ ಕರ್ಕೇರ, ಲೋಕೇಶ್ ಅಮೀನ್, ಎಚ್. ರವಿ ಕುಂದರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X