Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ನಾಶವಾದರೆ ತಳಸಮುದಾಯದ ಕನಸು...

ಸಂವಿಧಾನ ನಾಶವಾದರೆ ತಳಸಮುದಾಯದ ಕನಸು ನಾಶ: ಮೌರ್ಯ

ವಾರ್ತಾಭಾರತಿವಾರ್ತಾಭಾರತಿ20 Dec 2025 7:35 PM IST
share
ಸಂವಿಧಾನ ನಾಶವಾದರೆ ತಳಸಮುದಾಯದ ಕನಸು ನಾಶ: ಮೌರ್ಯ
ವೋಟ್ ಚೋರ್ ಹಗರಣದ ವಿರುದ್ಧ ಕಾಂಗ್ರೆಸ್ ‘ಮಾನವ ಸರಪಳಿ’

ಉಡುಪಿ, ಡಿ.20: ಕೇಂದ್ರ ಬಿಜೆಪಿ ಸರಕಾರ ಚುನಾವಣಾ ಆಯೋಗ ದೊಂದಿಗೆ ಸೇರಿಕೊಂಡು ನಡೆಸುತ್ತಿರುವ ಮತಗಳ್ಳತನ (ವೋಟ್ ಚೋರ್) ಹಗರಣದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾನವ ಸರಪಳಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾದ ವೇದಿಕೆಯಲ್ಲಿ ಸಂವಿಧಾನದ ಪೀಠಿಕೆಗಳನ್ನು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ವಾಚಿಸಿದರು. ಕಳೆದ ಎರಡು ತಿಂಗಳಲ್ಲಿ ಸಂಗ್ರಹಿಸಲಾದ ಸುಮಾರು 1.40ಲಕ್ಷ ಸಹಿಗಳನ್ನು ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಮಣಿಪಾಲದ ಸಿಂಡಿಕೇಟ್‌ವರೆಗೆ ಸುಮಾರು ನಾಲ್ಕು ಕಿ.ಮೀ. ಉದ್ದದ ಬೃಹತ್ ’ಮಾನವ ಸರಪಳಿ’ ರಚಿಸಿ ಪ್ರದರ್ಶಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಬಿಜೆಪಿ ಪಕ್ಷ ಸಂವಿಧಾನವನ್ನು ಹತ್ತಿಕ್ಕಿ ವಾಮ ಮಾರ್ಗದ ಮೂಲಕ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷ ಇದರ ವಿರುದ್ಧ ನಿರಂತರ ಹೋರಾಟ ಮಾಡಿ ಜನಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಉಪಾಧ್ಯಕ್ಷ, ಚಿಂತಕ ನಿಕೇತ್‌ರಾಜ್ ಮೌರ್ಯ ಮಾತನಾಡಿ, ಈ ದೇಶದ ತಳ ಸಮು ದಾಯದ ಪೋಷಕರು, ತಮ್ಮ ಮಕ್ಕಳು ಉದ್ಯಮಿ, ಡಾಕ್ಟರ್, ಇಂಜಿನಿಯರ್, ರಾಜಕಾರಣಿಯಾಗಬೇಕೆಂಬ ಕನಸು ಕಾಣಲು ಅವಕಾಶ ಮಾಡಿಕೊಟ್ಟಿರು ವುದು ಅಂಬೇಡ್ಕರ್ ಬರೆದ ಸಂವಿಧಾನ. ಈ ಸಂವಿಧಾನ ನಾಶವಾದರೆ ನಮ್ಮ ಕನಸು ಕೂಡ ನಾಶವಾಗುತ್ತದೆ. ಈ ಸಂವಿಧಾನ ಉಳಿದರೆ ಮಾತ್ರ ನಮ್ಮ ಕನಸು ಉಳಿಯುತ್ತದೆ. ಬಿಜೆಪಿ ಈ ಸಂವಿಧಾನವನ್ನು ನಾಶ ಮಾಡಲು ಸುಲಭ ತಂತ್ರವನ್ನು ಕಂಡುಕೊಂಡಿದೆ. ಜಾತಿಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಮಾತನಾಡಿ, ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಇಂದು ಧಕ್ಕೆ ಬರುತ್ತಿದೆ. ಕೇಂದ್ರ ಸರಕಾರ ಸಂವಿಧಾನದ ಎಲ್ಲ ಆಶಯಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಮಾಡುತ್ತಿವೆ. ಸತತವಾಗಿ ಸಂವಿಧಾನ ಬದ್ಧವಾದ ಎಲ್ಲ ಅಸ್ತ್ರಗಳನ್ನು ಶಿಥಿಲಗೊಳಿಸಲಾಗುತ್ತಿದೆ. ಈ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಹಾಕುತ್ತಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಸಂವಿಧಾನಕ್ಕೆ ಧಕ್ಕೆ ಬಂದಾಗ ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಇಳಿಯುತ್ತದೆ. ಈ ದೇಶದ ಸಂವಿಧಾನವನ್ನು ರಕ್ಷಣೆ ಮಾಡುವ ಏಕೈಕ ಪಕ್ಷ ಕಾಂಗ್ರೆಸ್. ಬಿಜೆಪಿ ಅಂಬೇಡ್ಕರ್ ಸಂವಿಧಾನದ ಮೂಲಕ ನೀಡಿದ ಮತದಾನದ ಹಕ್ಕನ್ನು ಕಸಿಯುವ ಕೆಲಸ ಮಾಡುತ್ತಿದೆ. ಇದರೊಂದಿಗೆ ಸಂವಿಧಾನದ ಆಶಯವನ್ನು ಬುಡಮೇಲು ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸುಮ್ಮನೆ ಕೂರಲು ಆಗುವುದಿಲ್ಲ. ಬೀದಿಗೆ ಬಂದು ಹೋರಾಟ ಇನ್ನಷ್ಟು ತೀವ್ರಗೊಳಿಸ ಲಾಗುವುದು. ಯಾವುದೇ ತ್ಯಾಗಕ್ಕೂ ನಾವು ಸಿದ್ಧ ಎಂದರು.

ಈ ಸಂದರ್ಭದಲ್ಲಿ ಹಿರಿಯ ಚಿಂತಕ ಪ್ರೊ.ಫಣಿರಾಜ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಉಡುಪಿ ನಗರಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ಸೋನಿಯಾ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಓಟ್ ಚೋರಿ ಅಭಿಯಾನದ ಸಂಯೋಜಕ ಹರಿಪ್ರಸಾದ್ ರೈ, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ಕೃಷ್ಣ ಶೆಟ್ಟಿ, ವರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ರಾಜು ಪೂಜಾರಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳವಳ್ಳಿ, ರಾಘವೇಂದ್ರ ಶೆಟ್ಟಿ ಕರ್ಜೆ, ವೈ.ಸುಕುಮಾರ್, ಗೋಪಿನಾಥ್ ಭಟ್, ಶುಭೋದ್ ರಾವ್, ಸಂತೋಷ್ ಕುಲಾಲು, ಪ್ರದೀಪ್ ಕುಮಾರ್, ಶೆಟ್ಟಿ, ಅರವಿಂದ ಪೂಜಾರಿ, ಶಂಕರ್ ಕುಂದರ್, ಹರಿಪ್ರಸಾದ್ ಶೆಟ್ಟಿ, ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು ಶಬ್ಬಿರ್ ಅಹ್ಮದ್ ರೊಶನಿ ಒಲಿವರಾ, ಶರ್ಪುದ್ದೀನ್ ಶೇಖ್, ಇಸ್ಮಾಯಿಲ್ ಆತ್ರಾಡಿ, ಅಝೀಝ್ ಹೆಜಮಾಡಿ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು. ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

‘ಬಿಜೆಪಿ ಈ ದೇಶದ ಪ್ರಜಾಪ್ರಭುತ್ವ ಹಾಗೂ ಸಮಾನತೆಯನ್ನು ನಾಶ ಮಾಡುಲು ಸಂವಿಧಾನ ಒಳಗಿನಿಂದಲೇ ಷಡ್ಯಂತರ ನಡೆಸುತ್ತಿದೆ. ಅದರ ಭಾಗವೇ ವೋಟು ಚೋರಿ ಮತ್ತು ಎಸ್‌ಐಆರ್ ಪ್ರಕ್ರಿಯೆ. ಈ ಹಿಂದೆ ಸಿಎಎಎ ಹಾಗೂ ಎನ್‌ಆರ್‌ಸಿ ಮೂಲಕ ಈ ದೇಶದಲ್ಲಿ ವಿಭಜನೆ ಹಾಗೂ ನಾಗರಿಕರ ಹಕ್ಕು ಕಸಿದುಕೊಳ್ಳುವ ಪ್ರಯತ್ನ ಮಾಡಿದರು. ಈಗ ಅದನ್ನು ಎಸ್‌ಐಆರ್ ಪ್ರಕ್ರಿಯೆ ಮೂಲಕ ಮತ್ತೆ ತರಲು ಪ್ರಯತ್ನಿಸುತ್ತಿದೆ. ಇದಕ್ಕೆ ನಾಗಕರಿಕರು ಪ್ರತಿರೋಧ ತೋರಬೇಕು. ಅದಕ್ಕಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ರಾಜಕೀಯ ಪಕ್ಷಗಳು ಜನರನ್ನು ಸಂಘಟಿಸಬೇಕು’

-ಪ್ರೊ.ಫಣಿರಾಜ್, ಹಿರಿಯ ಚಿಂತಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X