Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರ್ತವ್ಯನಿಷ್ಠ, ನಿರ್ಭಯ, ವಿವೇಕಶೀಲ,...

ಕರ್ತವ್ಯನಿಷ್ಠ, ನಿರ್ಭಯ, ವಿವೇಕಶೀಲ, ಕರ್ಮಯೋಗಿಗಳಾಗಿ: ಯುವಜನತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

ಪರ್ಯಾಯ ಮಠದ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 July 2025 8:43 PM IST
share
ಕರ್ತವ್ಯನಿಷ್ಠ, ನಿರ್ಭಯ, ವಿವೇಕಶೀಲ, ಕರ್ಮಯೋಗಿಗಳಾಗಿ: ಯುವಜನತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

ಉಡುಪಿ, ಜು.25: ಸಮಾಜದಲ್ಲಿ ಇಂದು ಅಸಹಿಷ್ಣುತೆ, ಆತ್ಮವಿಸ್ಮತಿ ಭಾವನೆ ಹೆಚ್ಚುತ್ತಿದೆ. ಆದರೆ ನಮ್ಮ ಯುವಜನತೆ ಕರ್ತವ್ಯನಿಷ್ಠ, ನಿರ್ಭಯ, ವಿವೇಕಶೀಲ, ಕರ್ಮಯೋಗಿಗಳಾಗುವಂತೆ ಪ್ರೇರೇಪಿಸಬೇಕಿದೆ ಎಂದು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಪರ್ಯಾಯ ಪುತ್ತಿಗೆ ಮಠ, ಉಡುಪಿ ಶ್ರೀಕೃಷ್ಣಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.1ರಿಂದ ಸೆ.17ರವರೆಗೆ ನಡೆಯುವ ಶ್ರೀಕೃಷ್ಣ ಮಂಡಲೋತ್ಸವವನ್ನು ಶುಕ್ರವಾರ ಸಂಜೆ ರಾಜಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಬೋಧಿಸಿದಂತೆ ಜ್ಞಾನ, ಕರ್ಮ, ಭಕ್ತಿಯೋಗ ದಿಂದ ನಿಷ್ಕಾಮ ಭಾವ ಹೊಂದಿ ಫಲ ರಹಿತ ಚಿಂತನೆಯೊಂದಿಗೆ ಯಾವುದೇ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ, ಆತ್ಮೋನ್ನತಿಗಾಗಿ ಜೀವನದ ಉದ್ದೇಶ ಅರಿತು ಧರ್ಮ ಪಾಲನೆ ಮಾಡುವಂತೆ ಅವರು ಜನತೆಗೆ ಕರೆ ನೀಡಿದರು.

ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಚರಿಸಲ್ಪಡುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸು ವುದು ನನಗೆ ಅತೀವ ಸಂತಸ ತಂದಿದೆ. ಇದು ಧಾರ್ಮಿಕ ಆಚರಣೆಯ ಜೊತೆಗೆ ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಆಧ್ಯಾತ್ಮಿಕ ಸ್ಪೂರ್ತಿ ಹಾಗೂ ಸಾಮಾಜಿಕ ಏಕತೆಯ ಪವಿತ್ರ ಹಬ್ಬವಾಗಿದೆ ಎಂದರು.

ಧರ್ಮ, ಭಕ್ತಿ, ಸತ್ಕರ್ಮದಲ್ಲಿ ಬದುಕಿನ ಸಾಫಲ್ಯವಿದೆ. ಧಾರ್ಮಿಕ ಅನುಷ್ಠಾನ, ಸಾಂಸ್ಕೃತಿಕ ಚೈತನ್ಯ, ಆಧ್ಯಾತ್ಮಿಕ ಪ್ರೇರಣೆ, ಸಾಮಾಜಿಕ ಏಕತೆಯಿಂದ ಪ್ರತಿಯೊಬ್ಬರ ಬದುಕು ಸಾರ್ಥಕ್ಯ ಹೊಂದಲು ಸಾಧ್ಯವಿದೆ. ಆಧುನಿಕ ವಿಶ್ವದಲ್ಲಿ ವೇದಾಂತ ಪರಂಪರೆಯ ಪ್ರತಿಷ್ಠಾಪನೆಯಾಗಬೇಕು ಎಂದರು.

ಜಗತ್ತಿನ ಮೂಲಭಾಷೆ ಸಂಸ್ಕೃತ: ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು, ಸಂಸ್ಕೃತ ವಿಶ್ವಭಾಷೆ. ಜಗತ್ತಿನ ಎಲ್ಲಾ ಭಾಷೆಗಳ ಮೂಲವೇ ಸಂಸ್ಕೃತ. ಸರ್ವ ಭಾಷೆಗಳ ಜನನಿಯಾದ ಸಂಸ್ಕೃತ ಅಂತರ್ಲೋಕೀಯ ದೇವ ಭಾಷೆ ಎಂದರು.

ಕನ್ನಡ ಪ್ರಾದೇಶಿಕ ಭಾಷೆಯಾದರೆ, ಹಿಂದಿ ನಮ್ಮ ರಾಷ್ಟ್ರಭಾಷೆ. ಇಂಗ್ಲೀಷ್ ಅಂತಾರಾಷ್ಟ್ರೀಯ ಭಾಷೆ. ಈ ಎಲ್ಲಾ ಭಾಷೆಗಳಿಗೆ ತಾಯಿ ಸಂಸ್ಕೃತವಾಗಿದ್ದು, ಅದು ದೇವ ಭಾಷೆ, ಭಗವಂತ ಪ್ರಿಯ ಭಾಷೆಯಾಗಿದೆ ಎಂದು ಬಣ್ಣಿಸಿದರು.

ರಾಜ್ಯಪಾಲರನ್ನು ಕಡಗೋಲು ಸಹಿತವಾಗಿ ಗೌರವಿಸಿದ ಪುತ್ತಿಗೆ ಶ್ರೀಗಳು, ಉದ್ಘಾಟನೆ ಸಂದರ್ಭದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆಗೆ ಸಂಕೇತವಾಗಿ ಹೂವುಗಳಿಂದ ತುಂಬಿದ ಮಡಿಕೆಯನ್ನು ರಾಜ್ಯಪಾಲರಿಂದ ಒಡೆಸಿದರು.

ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರು ಮಾತನಾಡಿದರು. ಮಾಹೆ ವಿವಿ ಸಹಕುಲಾಪತಿ ಡಾ.ಎಚ್. ಎಸ್. ಬಲ್ಲಾಳ್, ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

ಉದ್ಯಮಿಗಳಾದ ಸನಾತನ ಫೌಂಡೇಶನ್ ಮುಖ್ಯಸ್ಥ ಡಾ. ಎಚ್. ಎಸ್. ರಾಘವೇಂದ್ರ ರಾವ್, ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯರನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆ.ವಿ.ರಮಣ ಆಚಾರ್ಯ ಸ್ವಾಗತಿಸಿದರು. ಡಾ. ಬಿ.ಗೋಪಾಲ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X