Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋವಿಡ್ ಬಳಿಕ ಚರ್ಮರೋಗ, ಅಲರ್ಜಿಯಲ್ಲಿ...

ಕೋವಿಡ್ ಬಳಿಕ ಚರ್ಮರೋಗ, ಅಲರ್ಜಿಯಲ್ಲಿ ಹೆಚ್ಚಳ: ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ ವೈದ್ಯರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ6 Sept 2024 9:24 PM IST
share
ಕೋವಿಡ್ ಬಳಿಕ ಚರ್ಮರೋಗ, ಅಲರ್ಜಿಯಲ್ಲಿ ಹೆಚ್ಚಳ: ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ ವೈದ್ಯರ ಅಭಿಮತ

ಉಡುಪಿ, ಸೆ.6: ವಿಶ್ವದಾದ್ಯಂತ ಜನತೆಯನ್ನು ಸುಮಾರು ಎರಡು ವರ್ಷಗಳ ಕಾಲ ವಿವಿಧ ರೀತಿಯಲ್ಲಿ ಬಾಧಿಸಿದ ಕೋವಿಡ್‌ ನಿಂದ ಚರ್ಮರೋಗ ಹಾಗೂ ವಿವಿಧ ರೀತಿಯ ಅಲರ್ಜಿಗಳಲ್ಲಿ ಹೆಚ್ಚಳ ಕಂಡು ಬಂದಿದ್ದು, ಜನರ ರೋಗ ನಿರೋಧಕ ಶಕ್ತಿಯಲ್ಲೂ ಕುಂಠಿತವಾಗಿದೆ ಎಂದು ಉಡುಪಿ ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಅಧೀಕ್ಷಕರಾದ ಡಾ.ನಾಗರಾಜ್ ಎಸ್., ಈ ಕುರಿತು ಹೆಚ್ಚಿನ ಸಂಶೋಧನೆ ನಡೆಯಬೇಕಾದ ಅಗತ್ಯವಿದೆ. ಕಳೆದೆರಡು ವರ್ಷಗಳಿಂದ ಚರ್ಮರೋಗ ಹಾಗೂ ವಿವಿಧ ರೀತಿಯ ಅಲರ್ಜಿಗಳಿಂದ ಚಿಕಿತ್ಸೆಗೆ ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ನಮಗೆ ವೇದ್ಯವಾಗುತ್ತದೆ ಎಂದರು.

ಅದೇ ರೀತಿ ಹಿಂದೆ ಒಂದು ರೋಗಕ್ಕೆ ನೀಡುವ ಔಷಧಿ, ಈಗ ರೋಗಿಯ ಮೇಲೆ ಯಾವುದೇ ಪರಿಣಾಮ ಬೀರದಿರುವುದು ನಮ್ಮ ವೈದ್ಯರ ಗಮನಕ್ಕೆ ಬರುತ್ತಿದೆ. ಹೀಗಾಗಿ ನಾವು ಆಯುರ್ವೇದದಲ್ಲಿ ಈ ಬಗ್ಗೆ ಸಂಶೋದನೆ ಮಾಡಿ ರೋಗದ ಮೇಲೆ ಪರಿಣಾಮ ಬೀರುವ ಹೊಸ ಔಷಧಿ ತಯಾರಿ ಸ ಬೇಕಾದ ಅನಿವಾರ್ಯತೆ ಇದೆ ಎಂದರು.

ಇವೆಲ್ಲವೂ ಕೋವಿಡ್ ಮಹಾಮಾರಿ ಕಾಣಿಸಿಕೊಂಡ ಬಳಿಕ ಕಳೆದೆರಡು ವರ್ಷಗಳಲ್ಲಿ ಕಂಡುಬಂದ ವಿದ್ಯಾಮಾನ. ಕೋವಿಡ್‌ಗೂ ಇದಕ್ಕೂ ಯಾವ ಸಂಬಂಧ, ಕೋವಿಡ್ ಸೋಂಕು ಕಾಣಿಸಿಕೊಂಡವರಲ್ಲೋ ಅಥವಾ ಲಸಿಕೆ ಪಡೆದವರಲ್ಲಿ ಇದು ಕಾಣಿಸಿಕೊಳ್ಳುತಿದ್ದೆಯೋ ಎಂಬ ಬಗ್ಗೆ ಆಳವಾದ ಸಂಶೋಧನೆ ನಡೆಯಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ತಪಾಸಣಾ ಶಿಬಿರ: ಎಸ್‌ಡಿಎಂ ಆಸ್ಪತ್ರೆಯ ಆಗಮತಂತ್ರ ವಿಭಾಗದ ನೇತೃತ್ವದಲ್ಲಿ ಸೆ.9ರಿಂದ 14ರವರೆಗೆ ಆರು ದಿನಗಳ ಕಾಲ ಆಸ್ಪತ್ರೆಯ ಚರ್ಮರೋಗ ಮತ್ತು ಸೌಂದರ್ಯ ಚಿಕಿತ್ಸಾ ಘಟಕಗಳಲ್ಲಿ ಬೃಹತ್ ಚರ್ಮ ಮತ್ತು ಕೇಶರೋಗಳ ತಪಾ ಸಣಾ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಮತಾ ಕೆ.ವಿ.ತಿಳಿಸಿದರು.

ಜನರನ್ನು ಪ್ರತಿನಿತ್ಯ ಬಾಧಿಸುವ ವಿವಿಧ ರೀತಿಯ ಚರ್ಮ ವ್ಯಾದಿಗಳಾದ ಸೋರಿಯಾಸಿಸ್, ತೊನ್ನು, ಕಜ್ಜಿ, ಚರ್ಮದ ಅಲರ್ಜಿ, ಇಸುಬು, ಸರ್ಪಸುತ್ತು, ಗಜಕರ್ಣ, ಮೊಡವೆ, ತಲೆಹೊಟ್ಟು, ಹೇನಿನ ಉಪದ್ರ, ಕೂದಲು ಉದುರುವಿಕೆ, ವಿಷಜಂತುಗಳ ಕಡಿತದಿಂದ ಬರುವ ಚರ್ಮರೋಗ ಗಳಿಗೆ ಉಚಿತ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು ಎಂದರು.

ಆಸ್ಪತ್ರೆಯ ತಜ್ಞ ವೈದ್ಯರು ಚರ್ಮ ಹಾಗೂ ಕೇಶಕ್ಕೆ ಸಂಬಂಧಿಸಿದ ವ್ಯಾದಿಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಿದ್ದು, ಅರಿವು ಮೂಡಿಸುವರು. ಇದೇ ರೀತಿಯಲ್ಲಿ ಮುಂಬರುವ ದಿನಗಳಲಿಲ ವಿವಿಧ ರೋಗಗಳನ್ನು ಕೇಂದ್ರೀಕರಿಸಿ ಬೃಹತ್ ಶಿಬಿರಗಳನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿಬಿರದ ಮುಖ್ಯ ಸಂಯೋಜಕಿ ಡಾ.ಚೈತ್ರಾ ಹೆಬ್ಬಾರ್ ಹಾಗೂ ಸಹ ಸಂಯೋಜಕ ಡಾ.ಶ್ರೀನಿಧಿ ಬಲ್ಲಾಳ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X