ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಸಮವಸ್ತ್ರ ವಿತರಣೆ ಹಾಗೂ ವನಮಹೋತ್ಸವ

ಕಾರ್ಕಳ: ಕಾರ್ಕಳ ತಾಲೂಕಿನ ಅಯ್ಯಪ್ಪ ನಗರ ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕುಕ್ಕುಂದೂರು ಪಂಚಾಯತ್ ಸದಸ್ಯರಾದ ಶಾಂತಿ ಕಿಣಿ ಇವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಇವರ ಸೇವೆಯನ್ನು ಪರಿಗಣಿಸಿ ಶಾಲಾ ವತಿಯಿಂದ ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿಶೈನಾ ಗಣೇಶ್ ಶೆಟ್ಟಿಯವರು ನೀಡಿದಂತಹ ಸಮವಸ್ತ್ರಗಳನ್ನು ಉದ್ಯಮಿಗಳಾದ ಪ್ರವೀಶ್ ಶೆಟ್ಟಿ ಮತ್ತು ದೀಪ ಪ್ರವೀಶ್ ಶೆಟ್ಟಿ ದಂಪತಿಗಳು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.
ಕಾರ್ಕಳ ಮೊಬೈಲ್ ರಿಟೈಲರ್ ಅಸೋಸಿಯೇಶನ್ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿ ಸಂಸ್ಥೆಗೆ 15 ಸಾವಿರ ದೇಣಿಗೆಯನ್ನು ಹಸ್ತಾಂತರಿಸಿದರು.
ಮುಖ್ಯ ಅತಿಥಿಗಳಾಗಿ ಕಾರ್ಕಳ ಮೊಬೈಲ್ ರಿಟೈಲರ್ ಅಸೋಸಿಯೇಶನ್ ಗೌರವಾಧ್ಯಕ್ಷರಾದ ಪ್ರಶಾಂತ್ ಶೆಣೈ, ಅಧ್ಯಕ್ಷರಾದ ಅಜಿತ್, ಕಾರ್ಯದರ್ಶಿ ಖಾದರ್, ಕೋಶಾಧಿಕಾರಿ ರಾಜೇಶ್, ಜನಪ್ರಿಯ ರೈಸ್ ಮಿಲ್ ಮಾಲಕರಾದ ಮಂಜುನಾಥ್, ಅಂಕಿತಾ ಕಾಮತ್, ವಿಜೇತ ವಿಶೇಷ ಶಾಲಾ ಅಧ್ಯಕ್ಷ ರತ್ನಾಕರ್ ಅಮೀನ್, ದುರ್ಗಾ ವಿದ್ಯಾ ಸಂಘ ಟ್ರಸ್ಟ್ ಅಧ್ಯಕ್ಷರಾದ ಕೆ ರಾಧಾಕೃಷ್ಣ ಶೆಟ್ಟಿ, ಸಂಸ್ಥಾಪಕಿ ಡಾ. ಕಾಂತಿ ಹರೀಶ್, ವೇದಿಕೆಯಲ್ಲಿ ಉಪಸ್ತಿತರಿದ್ದರು.
ಮ್ಯಾನೇಜಿoಗ್ ಟ್ರಸ್ಟಿ ಹರೀಶ್, ಟ್ರಸ್ಟಿ ಕಿರಣ್ ಶೆಟ್ಟಿ, ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ ಪೋಷಕರು ಶಾಲಾ ಹಿತೈಷಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕುಕ್ಕುಂದೂರು ಗ್ರಾಮ ಪಂಚಾಯತ್, ಮಂಜುನಾಥ್, ಕಾರ್ಕಳ ಮೊಬೈಲ್ ರಿಟೈಲರ್ ಅಸೋಸಿಯೇಶನ್, ಶಾಂತಿ ಕಿಣಿಯವರು ಸಿಹಿ ತಿಂಡಿ, ಗಿರೀಶ್ ಮತ್ತು ಪೂಜಾ ದಂಪತಿಗಳು ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.
ವಿಶೇಷ ಶಿಕ್ಷಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿ ಡಾ. ಕಾಂತಿ ಹರೀಶ್ ಸ್ವಾಗತಿಸಿ, ಸಿಬ್ಬಂದಿ ಹಾಗೂ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿ, ಶ್ರೀನಿಧಿ ವಂದಿಸಿದರು.







