Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್ಟಿಗಳಲ್ಲದ ’ಮೇರಾ’, ’ಮನ್ಸ’ ಜಾತಿಗಳ...

ಎಸ್ಟಿಗಳಲ್ಲದ ’ಮೇರಾ’, ’ಮನ್ಸ’ ಜಾತಿಗಳ ಒಳಮೀಸಲಾತಿ ಸಮೀಕ್ಷೆೆ: ಪರಿಶಿಷ್ಟರ ಮಹಾಒಕ್ಕೂಟ ಆರೋಪ

ವಾರ್ತಾಭಾರತಿವಾರ್ತಾಭಾರತಿ22 May 2025 12:05 AM IST
share
ಎಸ್ಟಿಗಳಲ್ಲದ ’ಮೇರಾ’, ’ಮನ್ಸ’ ಜಾತಿಗಳ ಒಳಮೀಸಲಾತಿ ಸಮೀಕ್ಷೆೆ: ಪರಿಶಿಷ್ಟರ ಮಹಾಒಕ್ಕೂಟ ಆರೋಪ

ಉಡುಪಿ: ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ ’ಮೇರಾ’ ಮತ್ತು ’ಮನ್ಸ’ ಹೆಸರಿನ ಜಾತಿಗಳನ್ನು ಅಧಿಕಾರಿಗಳು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ವ್ಯವಸ್ಥಿತವಾಗಿ ಸೇರಿಸುತ್ತಿದ್ದಾರೆ. ಇದು ಕೂಡ ದೌರ್ಜನ್ಯ ಹಾಗೂ ಅಕ್ರಮಣವಾಗಿದೆ. ಆದುದರಿಂದ ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದು ಕೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇರಾ ಮತ್ತು ಮನ್ಸ ಪರಿಶಿಷ್ಟ ಜಾತಿಗೆ ಸೇರಿದ ಜಾತಿಗಳಲ್ಲ. ಆದರೂ ಸಮೀಕ್ಷೆ ಯಲ್ಲಿ ಅವರಿಗೆ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿರುವ ಉಡುಪಿ ಜಿಲ್ಲಾಧಿಕಾರಿಗಳ ಕ್ರಮ ’ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ’ವಾಗಿದೆ ಎಂದು ಆರೋಪಿಸಿದರು.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಮಹಾ ಒಕ್ಕೂಟದ ನಿಯೋಗವು ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ದೂರು ಸಲ್ಲಿಸಿದೆ. ರಾಷ್ಟ್ರಪತಿ ಗಳಿಂದ ಅಧಿಸೂಚಿತ ಪಟ್ಟಿಯಲ್ಲಿರುವ 101 ಜಾತಿಗಳನ್ನು ಹೊರತು ಪಡಿಸಿ, ಬೇರೆ ಯಾವುದೇ ಜಾತಿಗಳನ್ನು ಈ ಪಟ್ಟಿಗೆ ಸೇರಿಸುವ ಅಥವಾ ಕಡಿತಗೊಳಿಸುವ ಅಧಿಕಾರ ಕೇವಲ ಭಾರತದ ಸಂಸತ್ತಿಗೆ ಮಾತ್ರ ಇದೆ. ಇದರ ಯಾವುದೇ ರೀತಿಯ ಉಲ್ಲಂಘನೆ ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರ ಕೃತ್ಯ ಎನಿಸಿಕೊಳ್ಳುತ್ತದೆ ಎಂದರು.

ಜಿಲ್ಲಾಧಿಕಾರಿಗಳ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಸಂವಿಧಾನ ವಿರೋಧಿ ಮತ್ತು ಕಾನೂನು ಬಾಹಿರ ವಿಧಾನದ ಮೂಲಕ ನಡೆಸಲಾದ ಒಳಮೀಸಲಾತಿ ಕುರಿತ ಸಮೀಕ್ಷೆಗೆ ಕಾನೂನಿನ ಮಾನ್ಯತೆ ಇರಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ರಾಜ್ಯ ಸರಕಾರ ಮತ್ತು ನ್ಯಾ.ಎಚ್.ಎನ್.ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗ ಮಾನ್ಯ ಮಾಡಬಾರದು. ಈ ನಿಟ್ಟಿನಲ್ಲಿ ಅಗತ್ಯವಾದ ಎಲ್ಲ ಕ್ರಮಗಳನ್ನು ಸಂಬಂಧ ಪಟ್ಟ ಎಲ್ಲರೂ ತುರ್ತಾಗಿ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಹಾಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ್ ಕೊಂಚಾಡಿ, ರಾಜ್ಯ ಮುಖಂಡ ಸುಂದರ್ ಮೇರಾ, ಜಿಲ್ಲಾಧ್ಯಕ್ಷ ಅಪ್ಪು ಮರ್ಣೆ, ಆದಿದ್ರಾವಿಡ ಸಮಾಜದ ರಾಜ್ಯ ಮುಖಂಡ ಅನಿಲ್ ಕಂಕನಾಡಿ, ಉಡುಪಿಯ ಮುಂಡಾಲ ಸಮಾಜದ ಮುಖಂಡ ಬಿ.ಕೆ.ರಾಜು, ಅಶೋಕ್ ಕೊಂಚಾಡಿ, ಪದ್ಮನಾಭ ಮೂಡಬಿದ್ರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X