Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜ.3-11: ಲಯನ್ಸ್ ಕ್ಲಬ್‌ನಿಂದ ಹಸಿವು...

ಜ.3-11: ಲಯನ್ಸ್ ಕ್ಲಬ್‌ನಿಂದ ಹಸಿವು ನಿವಾರಣಾ ಸೇವಾ ವಾರ

ವಾರ್ತಾಭಾರತಿವಾರ್ತಾಭಾರತಿ2 Jan 2026 7:52 PM IST
share
ಜ.3-11: ಲಯನ್ಸ್ ಕ್ಲಬ್‌ನಿಂದ ಹಸಿವು ನಿವಾರಣಾ ಸೇವಾ ವಾರ

ಉಡುಪಿ, ಜ.2: ಹಸಿವು ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಹಾಗೂ ಪೌಷ್ಟಿಕ ಆಹಾರ ಕುರಿತು ಜಾಗೃತಿ ಮೂಡಿ ಸುವ ಉದ್ದೇಶದಿಂದ ಲಯನ್ಸ್ ಜಿಲ್ಲೆ 317ಸಿ, ಲಯನ್ಸ್ ಕ್ಲಬ್ ಮಣಿಪಾಲದ ಸಹಯೋಗದಲ್ಲಿ ಉಡುಪಿಯಲ್ಲಿ ಜ.3ರಿಂದ 11ರವರೆಗೆ ಹಸಿವು ನಿವಾರಣಾ ಸೇವಾ ವಾರ ವನ್ನು ಆಚರಿಸುತ್ತಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಸ್ವಪ್ನಾ ಸುರೇಶ್ ತಿಳಿಸಿದ್ದಾರೆ.

ಲಯನ್ಸ್ ಇಂಟರ್‌ನೇಶನಲ್‌ನ ಸೂಚನೆಯಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಹಸಿವು ನಿವಾರಣಾ ಸಪ್ತಾಹವನ್ನು ಆಚರಿಸಲಾಗುತಿದ್ದು, ಈ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸುಮಾರು ಒಂದರಿಂದ ಒಂದೂವರೆ ಲಕ್ಷ ಜನರಿಗೆ ಪೌಷ್ಠಿಕ ಆಹಾರವನ್ನು ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಈ ಅವಧಿಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಸೇವಾ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜ.3ರಂದು ಬೆಳಗ್ಗೆ 9:30ಕ್ಕೆ ಮಣಿಪಾಲದ ಟೈಗರ್ ಸರ್ಕಲ್‌ನಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದೂ ಸ್ವಪ್ನಾ ಸುರೇಶ್ ಹೇಳಿದರು.

ನಗರಸಭೆ ಹಾಗೂ ಕಾರ್ಪೋರೇಟರ್‌ಗಳ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತಿದ್ದು, ಮಹಾ ಆಹಾರ ವಿತರಣಾ ಅಭಿಯಾನಕ್ಕೆ ಧ್ವಜಾರೋಹಣ ನೆರವೇರಿಸಿ, ಹಸಿವು ನಿವಾರಣಾ ವಾರದ ಪ್ರತಿಜ್ಞಾ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದರು.

ಪ್ರತಿದಿನವೂ ಒಂದೊಂದು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಒಂದು ದಿನ ಸಮುದಾಯ ಅಡುಗೆಮನೆ ಎಂಬ ವಿಶೇಷ ಅಭಿಯಾನದಡಿ ಪ್ರತಿಯೊಂದು ಕ್ಲಬ್ ಒಂದೊಂದು ಸಮುದಾಯ ಅಡುಗೆಮನೆ ನಡೆಸಲು ಅಥವಾ ಬೆಂಬಲಿಸಲು ಮುಂದಾಗಲಿದೆ. ಪ್ರತಿ ಕ್ಲಬ್ ಕನಿಷ್ಠ 250 ಜನರಿಗೆ ಬಿಸಿ ಊಟ ವಿತರಿಸುವ ಗುರಿ ಹೊಂದಿದೆ.

ಶಾಲಾ ಪೌಷ್ಟಿಕ ಆಹಾರ ದಿನದಂದು ಸರಕಾರಿ ಶಾಲಾ ಮಕ್ಕಳಿಗೆ ಉಪಹಾರ ಅಥವಾ ಹಣ್ಣುಗಳ ಕಿಟ್ ವಿತರಿಸಲಾಗುವುದು. ಜೊತೆಗೆ ಮಕ್ಕಳ ಪಾಲಕರಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾ ಗುತ್ತದೆ. ಹಸಿವು ರಹಿತ ಸ್ಲಂ ಅಭಿಯಾನದಡಿ ಸ್ಲಂ ಪ್ರದೇಶಗಳನ್ನು ಗುರುತಿಸಿ (ಮ್ಯಾಪಿಂಗ್), ಪ್ರತಿ ಕುಟುಂಬಕ್ಕೆ ಒಂದು ವಾರದ ರೇಷನ್ ಕಿಟ್ ವಿತರಿಸಲಾಗುತ್ತದೆ.

ಇದಲ್ಲದೆ ಆಹಾರ ವ್ಯರ್ಥದಿಂದ ಆಹಾರ ತಟ್ಟೆಗೆ ಎಂಬ ಅಭಿಯಾನದಡಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮದುವೆ ಮಂಟಪಗಳೊಂದಿಗೆ ಸಹಕರಿಸಿ, ಉಳಿದ ಆಹಾರವನ್ನು ಸಂಗ್ರಹಿಸಿ ಅಗತ್ಯವಿರುವವರಿಗೆ ವಿತರಿಸಲಾಗುತ್ತದೆ. ರೈತರು ಮತ್ತು ಲಯನ್ಸ್ ಸಂಪರ್ಕ ದಿನದಂದು ಆಶ್ರಮ ಗಳು, ಅನಾಥಾಶ್ರಮಗಳು ಹಾಗೂ ವೃದ್ಧಾಶ್ರಮಗಳಿಗೆ ನೇರ ಆಹಾರ ವಿತರಣೆ ಮಾಡಲಾಗುತ್ತದೆ ಎಂದು ಕಾರ್ಯಕ್ರಮದ ಸಂಯೋಜಕ ಡಾ.ಗಣೇಶ್ ಪೈ ವಿವರಿಸಿದರು.

ಹಿರಿಯ ನಾಗರಿಕರು ಮತ್ತು ಆಶ್ರಯ ಗೃಹ ದಿನದಂದು ವೃದ್ಧಾಶ್ರಮಗಳಲ್ಲಿ ಬಿಸಿ ಊಟ ವಿತರಣೆ, ರಾಗಿ, ಖರ್ಜೂರ, ಬಹುಧಾನ್ಯಗಳನ್ನೊಳಗೊಂಡ ವಿಶೇಷ ಪೌಷ್ಟಿಕ ಕಿಟ್‌ಗಳ ವಿತರಣೆ ಹಾಗೂ ಆಶ್ರಮವಾಸಿಗಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುತ್ತದೆ.

ಆಸ್ಪತ್ರೆ ಮತ್ತು ರೋಗಿ ಸಹಾಯಕ ದಿನದಂದು ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಬಂಧಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜೊತೆಗೆ ಆಸ್ಪತ್ರೆ ಆಡಳಿತದ ಸಹಕಾರದಲ್ಲಿ ಲಯನ್ಸ್ ಅನ್ನಪೂರ್ಣ ಕೌಂಟರ್ (ಪೈಲಟ್ ಯೋಜನೆ) ಆರಂಭಿಸಲಾಗುತ್ತದೆ ಎಂದು ಅವರು ಹೇಳಿದರು.

ಹಸಿವು ನಿವಾರಣಾ ಸೇವಾ ವಾರದ ಸಮಾರೋಪವಾಗಿ ಮಹಾ ಆಹಾರ ಸೇವಾ ಉತ್ಸವ ವನ್ನು ಹಮ್ಮಿಕೊಳ್ಳಲಾ ಗುತ್ತದೆ. ಇದು ಹಲವು ಜಿಲ್ಲೆಗಳ ಸಂಯುಕ್ತ ಸೇವಾ ದಿನವಾಗಿದ್ದು, ಸಮಾರೋಪ ರ್ಯಾಲಿಯೊಂದಿಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಕ್ಲಬ್‌ಗಳಿಗೆ ಗೌರವ ಪ್ರಮಾಣಪತ್ರ ವಿತರಿಸಲಾಗುತ್ತದೆ.

ಸಮಾಜದ ಪ್ರತಿಯೊಬ್ಬರಿಗೂ ಆಹಾರ ದೊರಕುವ ಮೂಲಕ ಹಸಿವು ಮುಕ್ತ ಸಮಾಜದ ನಿರ್ಮಾಣಗೊಳ್ಳಬೇಕೆಂಬ ಸಂಕಲ್ಪದೊಂದಿಗೆ ಹಮ್ಮಿಕೊಂಡಿರುವ ಹಸಿವು ನಿವಾರಣಾ ಸೇವಾವಾರವನ್ನು ಯಶಸ್ವಿ ಗೊಳಿಸುವಂತೆ ಡಾ.ಪೈ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎರಡನೇ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಕಾರ್ಯಕ್ರಮ ಸಂಚಾಲಕ ಕೇಶವ ಅಮೀನ್, ಲಯನ್ಸ್ ಮಣಿಪಾಲ ಅಧ್ಯಕ್ಷ ಡಾ. ನಿಶಾಂತ್ ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X