ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಕಳ ತಾಲೂಕು ಪುರಸಭಾ ವ್ಯಾಪ್ತಿಯ ಬಾಲಕರ ಕಬಡ್ಡಿ ಪಂದ್ಯಾಟ

ಕಾರ್ಕಳ : ಕ್ರೀಡಾ ಭಾರತಿ ಕಾರ್ಕಳ ತಾಲೂಕು ಹಾಗೂ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಗಳ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಕಳ ತಾಲೂಕು ಪುರಸಭಾ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕ್ರೀಡಾ ಭಾರತಿ ಅಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶ್ರೀಮದ್ ಭುವನೇಂದ್ರ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ್ ಹೆಗ್ಡೆ ಸಂಚಾಲಕ ನರೇಂದ್ರ ಕಾಮತ್ ಕೆ., ಆಡಳಿತ ಮಂಡಳಿ ನಿರ್ದೇಶಕ ಎಸ್ ನಿತ್ಯಾನಂದ ಪೈ, ಕ್ರೀಡಾ ಭಾರತಿ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಕಾಮತ್ , ಶ್ರೀಮದ್ ಭುವನೇಂದ್ರ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿಣಿ, ಕ್ರೀಡಾ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಪ್ರಸನ್ನ ಶೆಣೈ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು .
ಇದೇ ಸಂದರ್ಭದಲ್ಲಿ ಕ್ರೀಡಾ ಭಾರತಿ ಮೈಸೂರು ಮಹಾನಗರ ವಿಶ್ವ ಯೋಗ ದಿನದ ನಿಮಿತ್ತ ಆಯೋಜಿಸಿದ ರಾಜ್ಯಮಟ್ಟದ ಆನ್ಲೈನ್ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ಭುವನೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳನ್ನು ಮತ್ತು ವಲಯ ಮಟ್ಟದ ಕಬ್ಬಡಿ ಪಂದ್ಯಾಟದಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ದೈಹಿಕ ಶಿಕ್ಷಣ ಶಿಕ್ಷಕ ಚೇತನ್, ತರಬೇತುದಾರ ಶಶಿಧರ ಶೆಟ್ಟಿ ಇವರನ್ನು ಸಮ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಕ್ರೀಡಾ ಭಾರತಿ ಕಾರ್ಕಳ ತಾಲೂಕು ಕಾರ್ಯದರ್ಶಿ ಸಂಜಯ ಕುಮಾರ್ ನಿರೂಪಿಸಿದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ಸ್ವಾಗತಿಸಿದರು. ಶಿಕ್ಷಕಿ ವೀಣಾರವರು ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಧಾರಿಣಿ ಉಪಾಧ್ಯರವರು ವಂದೇ ಮಾತರಂ ಹಾಡಿದರು.
ಬಳಿಕ ಆಗಮಿಸಿದ ಹದಿನೇಳು ತಂಡಗಳ ನಡುವೆ ಕಬ್ಬಡಿ ಪಂದ್ಯಾಟ ಮುಂದುವರಿಯಿತು. ಪಂದ್ಯಾಕೂಟಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ಕ್ರೀಡಾ ಭಾರತಿ ಕಬಡ್ಡಿ ಆಯೋಜನಾ ಸಮಿತಿ ಅಧ್ಯಕ್ಷ, ಉಡುಪಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಆಗಮಿಸಿ ತಂಡಗಳ ವಿದ್ಯಾರ್ಥಿಗಳನ್ನು ಹಸ್ತಲಾಘನ ಮಾಡಿ ಶುಭ ಹಾರೈಸಿದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ಉದ್ಯಮಿ ಕಾರ್ಕಳ ಟೈಗರ್ಸ್ ಸಂಸ್ಥಾಪಕ ಬೋಳ ಪ್ರಶಾಂತ್ ಕಾಮತ್ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕ್ರೀಡಾ ಭಾರತಿ ಜಿಲ್ಲಾ ಅಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕ ನರೇಂದ್ರ ಕಾಮತ್ ಕೆ , ಆಡಳಿತ ಮಂಡಳಿ ನಿರ್ದೇಶಕರಾದ ಎಸ್ ನಿತ್ಯಾನಂದ ಪೈ , ಉಡುಪಿ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ , ಕ್ರೀಡಾ ಭಾರತಿ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಕಾಮತ್ ಕ್ರೀಡಾ ಭಾರತಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಪ್ರಸನ್ನ ಶೆಣೈ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾ ಕಿಣಿ ಉಪಸ್ಥಿತರಿದ್ದರು.
ಶಿಕ್ಷಕರಾದ ಗಣೇಶ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು. ದಿವ್ಯಕುಮಾರ್ ಸ್ವಾಗತಿಸಿದರು. ಇಂದಿರಾ. ಪಿ.ನಾಯಕ್ ಪಂದ್ಯ ವಿಜೇತ ವಿದ್ಯಾರ್ಥಿಗಳ ತಂಡಗಳ ಪಟ್ಟಿ ವಾಚಿಸಿದರು. ಕ್ರೀಡಾ ಭಾರತಿ ತಾಲೂಕು ಕಾರ್ಯದರ್ಶಿ ಸಂಜಯ ಕುಮಾರ ರವರು ಧನ್ಯವಾದವಿತ್ತರು.
ಕಬ್ಬಡಿ ಪಂದ್ಯಕೂಟದಲ್ಲಿ ಕಾರ್ಕಳ ಪುರಸಭಾ ವ್ಯಾಪ್ತಿಯ 13 ಶಾಲೆಗಳಿಂದ 17 ಬಾಲಕರ ತಂಡಗಳು ಭಾಗವಹಿಸಿದ್ದವು. ಪ್ರಾಥಮಿಕ ಶಾಲಾ ಬಾಲಕರ 14 ರ ವಯೋಮಿತಿಯಲ್ಲಿ ನಡೆದ ಪಂದ್ಯದಲ್ಲಿ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ಪ್ರಥಮ ಸ್ಥಾನ, ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ ದ್ವಿತೀಯ ಸ್ಥಾನವನ್ನು ಪಡೆಯಿತು.
ಪ್ರೌಢ ಶಾಲಾ ಬಾಲಕರ 17 ರ ವಯೋಮಾನದ ವಿಭಾಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಪ್ರಥಮ ಸ್ಥಾನ ಹಾಗೂ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ದ್ವಿತೀಯ ಸ್ಥಾನವನ್ನು ಪಡೆಯಿತು. ವಿಜೇತ ತಂಡಗಳಿಗೆ ಪ್ರಶಸ್ತಿ ಫಲಕ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಪಂದ್ಯಾಟಕ್ಕೆ ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ಚೇತನ್ , ಶಶಿಧರ್ ಶೆಟ್ಟಿ , ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ , ರಾಜ್ಯ ಮಟ್ಟದ ಕಬಡ್ಡಿ ಆಟಗಾರರಾದ ಅನ್ವಿತ, ಪ್ರೇಕ್ಷಾ, ಜ್ಯೋತಿ, ಸಾಕ್ಷಿ ಹಾಗೂ ಭುವನೇಂದ್ರ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ತಾರಾನಾಥ್ ಶೆಟ್ಟಿ ಹಾಗೂ ಕ್ರೀಡಾ ಭಾರತಿ ತಾಲೂಕು ಕಾರ್ಯದರ್ಶಿ ಸಂಜಯ್ ಕುಮಾರ ಹಾಗೂ ವಿದ್ಯಾ ಸಂಸ್ಥೆಯ ಶಿಕ್ಷಕ ಹಾಗೂ ಶಿಕ್ಷಕೇತರ ಬಂಧುಗಳು ಸಂಪೂರ್ಣ ಸಹಕರಿಸಿದರು.






