Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ | ಮುಂದಿನ ಪೀಳಿಗೆ ಒಟ್ಟಿಗೆ...

ಕಾರ್ಕಳ | ಮುಂದಿನ ಪೀಳಿಗೆ ಒಟ್ಟಿಗೆ ಬದುಕಲು ಎಲ್ಲ ಭಾಷೆಗಳು ಮುಖ್ಯ : ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ9 Dec 2025 9:35 PM IST
share
ಕಾರ್ಕಳ | ಮುಂದಿನ ಪೀಳಿಗೆ ಒಟ್ಟಿಗೆ ಬದುಕಲು ಎಲ್ಲ ಭಾಷೆಗಳು ಮುಖ್ಯ : ಜಯಪ್ರಕಾಶ್ ಹೆಗ್ಡೆ
ಕನ್ನಡ ನಾಡು ನುಡಿ ಕಾರ್ಯಕ್ರಮ ಉದ್ಘಾಟನೆ

ಕಾರ್ಕಳ, ಡಿ.9: ಮಾತೃಭಾಷೆ ಯಾವುದಾದರೂ ಕನ್ನಡ ಭಾಷೆ ಸದಾ ನಮಗೆ ಮುಖ್ಯವಾಗಬೇಕು. ಮುಂದಿನ ಪೀಳಿಗೆಯವರೆಲ್ಲ ಒಟ್ಟಿಗೆ ಬದುಕಬೇಕಾದರೆ, ಎಲ್ಲ ಭಾಷೆಗಳು ಬಹಳ ಮುಖ್ಯವಾಗುತ್ತದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಕಾರ್ಕಳ ಭುವನೇಂದ್ರ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ ಹಾಗೂ ಸಾಹಿತ್ಯ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಎವಿ ಸಭಾಂಗಣದಲ್ಲಿ ಆಯೋಜಿಸಲಾದ ಕನ್ನಡ ನಾಡು ನುಡಿ, ಚಿಂತನೆ, ಸಂವಾದ ‘ಕನ್ನಡ ಭಾವಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕನ್ನಡ ಭಾಷೆಯು ಬೇರೆಬೇರೆ ಪ್ರದೇಶಗಳಿಗೆ ವಿಸ್ತರಿಸಿದಾಗ ಅದರ ಸ್ವರೂಪ ಬದಲಾಗುತ್ತದೆ. ಭಾಷೆಯಲ್ಲಿ ಏಕವಚನ, ಬಹುವಚನ ಪದಪ್ರಯೋಗ ಇದ್ದರೂ ಭಾವ ಬದಲಾಗುವುದಿಲ್ಲ. ನಾನು ಹುಟ್ಟಿದ್ದು, ಬೆಳೆದಿದ್ದು, ಕೆಲಸ ಕಾರ್ಯಗಳೆಲ್ಲವೂ ಬೇರೆ ಬೇರೆ ಪ್ರದೇಶಗಳನ್ನು ಒಳಗೊಂಡಿರುವುದರಿಂದ ಅದರೊಳಗಿನ ಎಲ್ಲ ಭಾವಗಳೂ ನನಗೆ ಅರಿವಾಗುತ್ತವೆ ಎಂದರು.

ನಮ್ಮ ಹಿರಿಯರನ್ನು ಮಾತನಾಡಿಸಿದಾಗ ಅನೇಕ ಹೊಸ ಶಬ್ದಗಳು ನಮಗೆ ದೊರೆತು ನಮ್ಮ ಜ್ಞಾನ ವಿಸ್ತಾರವಾಗುತ್ತದೆ. ಬರಹಗಾರರ ಭಾಷಣಗಳನ್ನು ಕೇಳುವಾಗ ಬೇಕಾದ ಎಲ್ಲ ಮಾಹಿತಿಗಳು ಸಿಗುತ್ತವೆ. ಅದನ್ನು ನಾವು ಆಲಿಸಬೇಕು. ಎರಡು ಮೂರು ಭಾಷೆಗಳನ್ನು ಮಿಶ್ರ ಗೊಳಿಸಿ ಮಾತನಾಡಿದರೆ ಅದು ಅಪಾರ್ಥ ಎನಿಸುತ್ತದೆ. ಇದು ಪ್ರತಿಯೊಂದು ಭಾಷೆಗೂ ಅಪಾಯ ಉಂಟು ಮಾಡುತ್ತದೆ. ಈ ಬಗ್ಗೆ ಎಲ್ಲ ತಲೆಮಾರಿನಲ್ಲೂ ಎಚ್ಚರ ಇರಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಎ.ಕೋಟ್ಯಾನ್ ಮಾತನಾಡಿ, ಸಂಘರ್ಷವಾಗದ ಅನುಸಂಧಾನ ಪದ ಬಳಕೆ, ಆಲೋಚನಾ ಕ್ರಮ, ಓದು, ಭಾಷೆ ಕಟ್ಟಿಕೊಡುವ ರೀತಿಯ ಚಿಂತನಾ ಕ್ರಮಗಳು ಕನ್ನಡ ಭಾಷೆಯಲ್ಲಿ ಇರಬೇಕು. ಬಹುತ್ವದ ಕನ್ನಡದ ಬಗ್ಗೆ ಚರ್ಚೆ, ಪ್ರಾದೇಶಿಕ ಭಾಷೆಗಳ ಮಹತ್ವ ಮತ್ತು ಅದರ ಬಳಕೆ ಬಗ್ಗೆ ಪ್ರಾಮುಖ್ಯತೆ ನೀಡಬೇಕು ಎಂದರು.

ಎಲ್ಲ ವಿಚಾರಗಳಲ್ಲೂ ವೈರುಧ್ಯಗಳು ಇರುತ್ತವೆ. ವೈರುಧ್ಯಗಳ ಹಿಂದಿನ ವಿವೇಕಪ್ರಜ್ಞೆಯನ್ನು ನಾವು ಅರಿತಿರಬೇಕು. ಆಗ ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡುಗೆ ನೀಡಲು ಸಾಧ್ಯ. ಭಾಷೆಯನ್ನು ವಿವೇಕದಿಂದ ಬಳಸಿದಾಗ ಅದು ಮುಂದಿನ ಕಾಲಕ್ಕೂ ಪ್ರಸಾರ ಆಗುತ್ತಿರುತ್ತದೆ. ಈ ಪ್ರಸರಣವೇ ಭಾಷೆಯ ಗೆಲುವು ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಈಶ್ವರ ಭಟ್, ಐಕ್ಯೂಎಸಿ ಸಂಯೋಜಕ ಪ್ರೊ.ಲಕ್ಷ್ಮೀನಾರಾಯಣ ಕೆ.ಎಸ್., ಸಾಹಿತ್ಯ ಸಂಘದ ಪ್ರತಿನಿಧಿಗಳಾದ ಪ್ರಾರ್ಥನಾ ಹಾಗೂ ಶ್ರೀನಿಧಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ಹಾಗೂ ವಿಭಾಗ ಮುಖ್ಯಸ್ಥೆ ವನಿತಾ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕರಾದ ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು. ಸುಲೋಚನಾ ಪಚ್ಚಿನಡ್ಕ ವಂದಿಸಿದರು. ಬಳಿಕ ವಿದ್ಯಾರ್ಥಿಗಳಾದ ರಕ್ಷಿತಾ, ಸನ್ನಿಧಿ ಮತ್ತು ಬಳಗದಿಂದ ಕನ್ನಡ ಭಾವಗಾಯನ ನಡೆಯಿತು. ಕೆ.ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ನಡೆದ ಸಂವಾದದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X