ಕಾರ್ಕಳ: ಬೈಲೂರು ಸರಕಾರಿ ಕಾಲೇಜಿನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ

ಕಾರ್ಕಳ: ರಾಜ್ಯದಲ್ಲಿ ಸೈಬರ್ ಅಪರಾಧ ಗಳ ಸಂಖ್ಯೆ ಹೆಚ್ಚುತ್ತಿದ್ದು ವಿದ್ಯಾವಂತ ನಿರುದ್ಯೋಗಿಗಳೇ ಇದರ ಟಾರ್ಗೆಟ್ ಆಗುತಿದ್ದಾರೆ ಎಂದು ಉಡುಪಿ ಜಿಲ್ಲಾ ಎಎಸ್ಪಿ ಸಿದ್ದಲಿಂಗಪ್ಪ ಅವರು ಹೇಳಿದರು
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಸಹಯೋಗದೊಂದಿಗೆ ನ.4 ರಂದು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹಾಲ್ಡಿನ್ ಗ್ಲಾಸ್ ಹಾಲ್ ನಲ್ಲಿ ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಸಾಂಪ್ರದಾಯಿಕ ಶೈಲಿಯ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತಿದ್ದು ತಾಂತ್ರಿಕ ಶೈಲಿಯ ಅಪರಾಧ ಗಳು ಹ್ಯಾಕರ್ಸ್ ಗಳ ಮೂಲಕ ತಮ್ಮ ಖಾಸಗಿ ಮಾಹಿತಿ ಗಳು ಕದಿಯಲಾಗುತ್ತಿದೆ.ಸೈಬರ್ ಪ್ರಕರಣಗಳಲ್ಲಿ ನೈಜೀರಿಯಾ ಪ್ರಜೆಗಳೆ ಹೆಚ್ಚು ಭಾಗಿಯಾಗುತಿದ್ದಾರೆ ಎಂದರು.
ಪೋಲಿಸ್ ಇಲಾಖೆಗಳು ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ ಸೈಬರ್ ಕ್ರೈಮ್ ಗಳು ರಾಷ್ಟ್ರೀಯ ಮಟ್ಟಗಳಲ್ಲಿ ಹರಡಿಕೊಂಡಿರುವುದರಿಂದ ಪತ್ತೆಮಾಡಲು ತುಂಬಾ ಸಮಯ ಹಿಡಿಯುತ್ತಿದೆ. ಅದಕ್ಕಾಗಿ ಅಪರಾಧ ತಡೆಯಲು ಅರಿವು ಮೂಡಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಸೈಬರ್ ಕ್ರೈಮ್ ಮಾಹಿತಿ ಶಿಬಿರದ ಹಮ್ಮಿಕೊಂಡ ತಾಲೂಕು ಪತ್ರಕರ್ತರ ಸಂಘ ಕ್ಕೆ ಧನ್ಯವಾದ ತಿಳಿಸಿದರು.
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ನಮ್ಮ ದೌರ್ಬಲ್ಯ ಗಳನ್ನು ಸೈಬರ್ ಕ್ರೈಮ್ ಅಪರಾಧಿಗಳು ಬಳಸಿಕೊಂಡು ವಂಚನೆ ಮಾಡುತಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಮಾತನಾಡಿ ರಾಜ್ಯದಲ್ಲಿ ಶಾಲಾ ಕಾಲೇಜು ವಿಧ್ಯಾರ್ಥಿಗಳು ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತ್ತಿದ್ದಾರೆ. ಕಾರ್ಕಳ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಸೈಬರ್ ಕ್ರೈಮ್ ಮಾಹಿತಿ ಹಾಗೂ ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರಗಳು ನಡೆಸಲಿದ್ದೇವೆ ಎಂದರು.
ಲಯನ್ಸ್ ಗವರ್ನರ್ ಲ| ಡಾ. ನೇರಿ ಕರ್ನಾಲಿಯೋ ಬೆಳಕು ಸಂಯೋಜಕರ ಸಂಘಟನೆ ಜಿಲ್ಲಾಧ್ಯಕ್ಷ ಕೆ. ಧರ್ಮರಾಜ್ ಮಾತನಾಡಿದರು.
ಜೆ. ಸುಧೀರ್ ಹೆಗ್ಡೆ ಬೈಲೂರು , ಸಂತೋಷ್ ವಾಗ್ಳೆ, ಲಯನ್ಸ್ ಕ್ಲಬ್ ನೀರೆ-ಬೈಲೂರು ಅಧ್ಯಕ್ಷ ಲ| ಕೆ. ಸುಜಯ್ ಜತ್ತನ್ನ, ಸ.ಪ.ಪೂ ಕಾಲೇಜು ಪ್ರಾಂಶುಪಾಲ ಗುರುಮೂರ್ತಿ ಟಿ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಕಳ ನಗರ ಠಾಣೆಯ ಪೋಲೀಸ್ ಉಪ ನಿರೀಕ್ಷಕ ಸಂದೀಪ್ ಶೆಟ್ಟಿ, ಮಣಿಪಾಲ ಪೋಲೀಸ್ ಠಾಣಾಧಿಕಾರಿ ದೇವರಾಜ್ ಟಿ.ವಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು.
ಪತ್ರಕರ್ತ ವಾಸಸುದೇವ ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು ಹರೀಶ್ ಸಚ್ಚರಿಪೇಟೆ ಧನ್ಯವಾದ ವಿತ್ತರು.







