ಕಾರ್ಕಳ | ವಿಶ್ವ ಏಡ್ಸ್ ದಿನಾಚರಣೆ–2025 : ಜನಜಾಗೃತಿ ಜಾಥಾ ಕಾರ್ಯಕ್ರಮ

ಕಾರ್ಕಳ : ಕರ್ಣಾಟಕ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಕಾರ್ಕಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ – 2025ರ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಕಳದಲ್ಲಿ ಜರುಗಿತು.
ಕಾರ್ಯಕ್ರಮದ ಭಾಗವಾಗಿ, ಜಾಥಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳದಿಂದ ಪ್ರಾರಂಭವಾಗಿ ಬಸ್ ಸ್ಟ್ಯಾಂಡ್ ಸರ್ಕಲ್, ನಂತರ ಅನಂತಶಯನ ಸರ್ಕಲ್ ಮೂಲಕ ಸಾಗುತ್ತಾ ಪುನಃ ಆಸ್ಪತ್ರೆ ಆವರಣಕ್ಕೆ ತಲುಪಿತು. ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು.
ಜಾಗೃತಿಯೇ ಏಡ್ಸ್ ನಿಯಂತ್ರಣದ ಪ್ರಮುಖ ಆಯುಧ ಎಂಬ ಸಂದೇಶದೊಂದಿಗೆ ಜಾಥಾ ಯಶಸ್ವಿಯಾಗಿ ನೆರವೇರಿತು
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಜಡ್ಜ್ ಮತ್ತು ACJM ನ್ಯಾಯಾಧೀಶೆ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಶರ್ಮಿಳಾ ಸಿ.ಎಸ್. ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕಾರ್ಕಳ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ ಎಂ ಎಫ್ ನ್ಯಾಯಾಧೀಶೆ ಕೋಮಲ ಆರ್.ಸಿ, ಹೆಚ್ಚುವರಿ ಸಿವಿಲ್ ಜಡ್ಜ್ &JMFC ನ್ಯಾಯಾಧೀಶೆ ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಅಧ್ಯಕ್ಷ ಡಾ.ಕೆ.ಆರ್.ಜೋಶಿ, ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ಕೆ.ನವೀನ್ ಚಂದ್ರ ಶೆಟ್ಟಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಲಾ, ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಚಾರ್ಯೆ, ಸಜನಿ ಸುಬ್ರಮಣ್ಯ, ಉಪನ್ಯಾಸಕ ಶ್ರೀಧರ್ ಪ್ರಭು, ಪುರಸಭೆ ಆರೋಗ್ಯ ನಿರೀಕ್ಷಣಾಧಿ ಕಾರಿ ಲೈಲಾ ಥಾಮಸ್ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕಾರ್ಕಳ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಕೆ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







