Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು: ಕೊಪ್ಪಲಂಗಡಿಯ ‘ಇನಾಸನ್...

ಕಾಪು: ಕೊಪ್ಪಲಂಗಡಿಯ ‘ಇನಾಸನ್ ಆಡಿಟೋರಿಯಂ’ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ7 Sept 2025 8:22 PM IST
share
ಕಾಪು: ಕೊಪ್ಪಲಂಗಡಿಯ ‘ಇನಾಸನ್ ಆಡಿಟೋರಿಯಂ’ ಶುಭಾರಂಭ

ಉಡುಪಿ: ಕಾಪು ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲೇ ನೂತನವಾಗಿ ನಿರ್ಮಾಣಗೊಂಡಿರುವ ಸರ್ವಸುಸಜ್ಜಿತ ಹಾಗೂ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ’ ರವಿವಾರ ಶುಭಾರಂಭಗೊಂಡಿತು.

ನೂತನ ಆಡಿಟೋರಿಯಂನ್ನು ಮಂಗಳೂರು- ಉಡುಪಿ ಅಬ್ಕೋ ಸ್ಟೀಲ್‌ನ ಆಡಳಿತ ನಿರ್ದೇಶಕ ಮುಹಮ್ಮದ್ ಅಸ್ಲಂ ಖಾಜಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈ ಸಭಾಭವನ ಎಲ್ಲ ಧರ್ಮ, ಜಾತಿಯವರ ಅವಶ್ಯಕತೆ ಗಳನ್ನು ಪೂರೈಸುತ್ತದೆ. ಎಲ್ಲರ ಸಹಕಾರದೊಂದಿಗೆ ಈ ಸಭಾಭವನ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಾಮರಸ್ಯದ ಕಾಪು- ಸಮೃದ್ಧ ಕಾಪು ನಿರ್ಮಿಸುವಲ್ಲಿ ಇನಾಸನ್ ಸಭಾಭವನ ನೆರವಾಗಲಿ. ಶಾಂತಿ ಸೌಹಾರ್ದತೆ, ಸಮೃದ್ಧತೆಯ ಜೀವನಕ್ಕೆ ನಾಂದಿಯಾಗಲಿ. ಮನಸ್ಸು ಮನಸ್ಸು ಗಳನ್ನು ಬೆಸೆಯಲು ಕಾರ್ಯ ಆಗಲಿ ಎಂದು ಶುಭಹಾರೈಸಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉದ್ಯಾವರ ಹಲಿಮಾ ಸಬ್ಜು ಆಡಿಟೋರಿಯಂನ ಚೇಯರ್‌ಮೆನ್ ಅಬ್ದುಲ್ ಜಲೀಲ್ ಸಾಹೇಬ್ ಶುಭಹಾರೈಸಿದರು. ಮೂಳೂರು ಅಲ್ ಇಹ್ಸಾನ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ವ್ಯವಸ್ಥಾಪಕ ಮೌಲಾನ ಯು.ಕೆ.ಮುಸ್ತಫಾ ಸಅದಿ ದುವಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ ಮಾತನಾಡಿದರು. ಅಧ್ಯಕ್ಷತೆಯನ್ನು ಇನಾಸನ್ ಗ್ರೂಪ್‌ನ ಅಧ್ಯಕ್ಷ ಮೊಹಮ್ಮದ್ ಸಾದಿಕ್ ದೀನಾರ್ ವಹಿಸಿದ್ದರು.

ವೇದಿಕೆಯಲ್ಲಿ ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಸಮಾಜ ಸೇವಕ ಶಭೀ ಅಹ್ಮದ್ ಖಾಝಿ, ಉದ್ಯಮಿಗಳಾದ ಅಬ್ದುಲ್ ರೆಹಮಾನ್, ಶಾಬು ಸಾಹೇಬ್, ಅಬ್ದುಲ್ ಕೈಯುಮ್ ಸಾಹೇಬ್, ಶೇಖ್ ವಾಹೀದ್, ಮಕ್ಬುಲ್ ಅಹ್ಮದ್, ಕಾಪು ಮಕರ ಕನ್‌ಸ್ಟ್ರಕ್ಷನ್ಸ್‌ನ ಸುಧಾಕರ ಶೆಟ್ಟಿ ಮಲ್ಲಾರು, ಇಂಜಿನಿಯರ್ ಸುಲೇಮಾನ್, ಕಾಪು ದಿವಾಕರ ಶೆಟ್ಟಿ, ಝಾಕೀರ್ ಮೊದಿನ್ ಮೊದಲಾದವರು ಉಪಸ್ಥಿತರಿದ್ದರು.

ಇನಾಸನ್ ಗ್ರೂಪ್‌ನ ಪ್ರಧಾನ ಕಾರ್ಯದರ್ಶಿ ನಝೀರ್ ಅಹ್ಮದ್ ಸ್ವಾಗತಿಸಿದರು. ಮುಹಮ್ಮದ್ ಶರೀಫ್ ಕಾರ್ಯಕ್ರಮ ನಿರೂಪಿಸಿದರು. ಆರ್ಕಿಟೆಕ್ಚರ್ ಆದಿಲ್ ವಂದಿಸಿದರು. ಅಬ್ದುಲ್ ಖಲೀಲ್ ತಂಡದಿಂದ ನಾಥ್ ಕಾರ್ಯಕ್ರಮ ನಡೆಯಿತು.

ಸಂಪೂರ್ಣ ಹವಾನಿಯಂತ್ರಿತ ಈ ಸಭಾಂಗಣದಲ್ಲಿ 5000ಕ್ಕೂ ಅಧಿಕ ಮಂದಿ ಸೇರಬಹುದಾಗಿದೆ. ಮುಖ್ಯ ಹಾಲ್‌ನಲ್ಲಿ 1,500 ಮಂದಿಗೆ ಕುಳಿತು ಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ಬಾಲ್ಕನಿಯಲ್ಲಿ 1,500 ಆಸನ ವ್ಯವಸ್ಥೆ ಮಾಡಲಾಗಿದೆ. 4,000 ಚದರ ಅಡಿ ವಿಸ್ತ್ರೀರ್ಣದ ಭವ್ಯವಾದ ಪ್ರವೇಶ ದ್ವಾರ, 300 ಆಸನ ಸಾಮರ್ಥ್ಯದ ಮಿನಿ ಹಾಲ್, ಕಾನ್ಫರೆನ್ಸ್ ರೂಂಗಳು ಕೂಡ ಇವೆ.

ಒಟ್ಟು 30,000 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಎರಡು ಭೋಜನ ಭವನಗಳು, ಪೂರ್ಣಸಜ್ಜಿತ ಅಡುಗೆ ಮನೆಗಳು, ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ನಮಾಜ್ ಕೊಠಡಿಗಳು, ಹೈ-ಕ್ಯಾಪಾಸಿಟಿ ಲಿಫ್ಟ್‌ಗಳು ಹಾಗೂ 250 ವಾಹನಗಳಿಗೆ ಅನುಕೂಲವಾಗುವ ಪಾರ್ಕಿಂಗ್ ವ್ಯವಸ್ಥೆಗಳನ್ನು ಈ ಸಭಾಂಗಣ ಒಳಗೊಂಡಿದೆ. ಎಲ್ಲ ಧರ್ಮ, ಜಾತಿ ಮತ್ತು ಪಂಗಡಗಳ ಜನರ ಅವಶ್ಯಕತೆಗೆ ತಕ್ಕಂತೆ ಈ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
















share
ವಾರ್ತಾಭಾರತಿ
ವಾರ್ತಾಭಾರತಿ
Next Story
X