Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾವಳಕಟ್ಟೆ | ಹಿದಾಯ ವಿಶೇಷ ಚೇತನ ಮಕ್ಕಳ...

ಕಾವಳಕಟ್ಟೆ | ಹಿದಾಯ ವಿಶೇಷ ಚೇತನ ಮಕ್ಕಳ ವಸತಿಯುತ ಶಾಲಾ ದಶಮಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ16 Nov 2025 5:45 PM IST
share
ಕಾವಳಕಟ್ಟೆ | ಹಿದಾಯ ವಿಶೇಷ ಚೇತನ ಮಕ್ಕಳ ವಸತಿಯುತ ಶಾಲಾ ದಶಮಾನೋತ್ಸವ

ಬಂಟ್ವಾಳ : ಕಾವಳಕಟ್ಟೆ- ಗುರಿಮಜಲು ಹಿದಾಯ ವಿಶೇಷ ಮಕ್ಕಳ ವಸತಿಯುತ ಶಾಲೆಯ ದಶಮಾನೋತ್ಸವ ಸಮಾರಂಭವು ಇಲ್ಲಿನ ಹಿದಾಯ ಶೇರ್ ಮತ್ತು ಕೇರ್ ಕಾಲೊನಿಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಪೂರ್ವಭಾವಿಯಾಗಿ ಕಾವಳಕಟ್ಟೆ ಶಾಲಾ ಬಳಿಯಿಂದ ವಿಶೇಷ ಶಾಲೆಯ ಆವರಣದವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರ ಮೆರವಣಿಗೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿದಾಯ ವಿಶೇಷ ಶಾಲೆ ಆರಂಭವಾಗಿ ಹಾಗೂ ಹತ್ತು ವರ್ಷಗಳು ಪೂರ್ಣಗೊಂಡ ನೆನಪಿನಲ್ಲಿ ಜಿಲ್ಲೆಯ ಇಬ್ಬರು ಸಾಧಕ ವಿಶೇಷ ಮಕ್ಕಳಿಗೆ ಸನ್ಮಾನ, ವಿಶೇಷ ಮಕ್ಕಳ ಶಿಕ್ಷಕಿಯವರಿಗೆ ಗೌರವಾರ್ಪಣೆ, ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿದಾಯ ಫೌಂಡೇಶನ್ ಚೇರ್ಮೆನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯಾ ಜೋಕಟ್ಟೆ ವಹಿಸಿದ್ದರು. ದಶಮಾನೋತ್ಸವ ಸಮಾರಂಭವನ್ನು ಫಲಕ ಅನಾವರಣಗೊಳಿಸುವ ಮೂಲಕ ದುಬಾಯಿಯ ಗಡಿಯಾರ್ ಗ್ರೂಪ್ ಆಫ್ ಕಂಪೆನಿ ಚೇರ್ಮೆನ್ ಇಬ್ರಾಹಿಂ ಗಡಿಯಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಮಾತನಾಡಿ, ಸಮಾಜದ ಒಳಿತಿಗಾಗಿ ನಡೆಸಲ್ಪಡುವ ಎಲ್ಲಾ ಕಾರ್ಯಗಳು ದೇವರು ಮೆಚ್ಚುವ ಕಾರ್ಯಗಳಾಗಿವೆ. ಇಂತವುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕಾಗಿದೆ ಎಂದರು.

ಬಂಟ್ವಾಳ ತೌಹೀದ್ ಶಿಕ್ಷಣ ಸಂಸ್ಥೆಗಳ ಆಧ್ಯಕ್ಷ ರಿಯಾಝ್ ಬಂಟ್ವಾಳ, ಹಿದಾಯ ಫೌಂಡೇಶನ್ ನ ವೈಸ್ ಚೇರ್ಮೆನ್ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಸಂಸ್ಥೆಯ ಆಡಳಿತಾಧಿಕಾರಿ‌ ಆಬಿದ್ ಅಸ್ಗರ್ ಅತಿಥಿಗಳಾಗಿ ಭಾಗವಹಿಸಿದ್ದರು .

ಹಿದಾಯ ಫೌಂಡೇಶನ್ ನ ಎಫ್.ಎಂ.ಬಶೀರ್, ಆಸಿಫ್ ಇಕ್ಬಾಲ್, ಮಕ್ಬೂಲ್ ಅಹ್ಮದ್, ಕೆ.ಎಸ್ ಅಬೂಬಕ್ಕರ್, ಹಂಝ ಆನಿಯಾ ದರ್ಬಾರ್ ಬಸ್ತಿಕೋಡಿ,‌ ಇದ್ದಿನ್ ಕುಂಞಿ, ಬಶೀರ್ ವಗ್ಗ , ಹಕೀಂ ಸುನ್ನತ್ ಕೆರೆ,‌ ಆಶಿಕ್ ಕುಕ್ಕಾಜೆ, ಇಲ್ಯಾಸ್ ಕಕ್ಕಿಂಜೆ, ಪಿ.ಮುಹಮ್ಮದ್,‌ ಸಾದಿಕ್ ಹಸನ್, ಅಬೂಬಕ್ಕರ್ ಸಿದ್ದೀಕ್, ಇಫ್ತಿಕಾರ್ ಅಹಮದ್, ರಶೀದ್ ಕಕ್ಕಿಂಜೆ, ಶರೀಫ್ ಮುಕ್ರಂಪಾಡಿ‌,‌ ಇಬ್ರಾಹೀಂ‌ ಖಲೀಲ್ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯೆಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯಾ ಜೋಕಟ್ಟೆ ಅವರನ್ನು ಹಿದಾಯ ವಿಶೇಷ ಚೇತನ ವಿದ್ಯಾರ್ಥಿಗಳು ಅಭಿನಂದಿಸಿದರು.

ಸಾಧಕ ವಿದ್ಯಾರ್ಥಿಗಳಾದ ಫಾತಿಮಾ ಸುಝ್ನ, ಮಾಸ್ಟರ್‌ ಮೋಕ್ಷಿತ್ ಸಿ. ಮಾರ್ಧಾಳ, ಶಯಾನ್, ಮುಹಮ್ಮದ್ ನಝೀಂ ಅವರನ್ನು ಸನ್ಮಾನಿಸಲಾಯಿತು. ಡಾ.ಫಾತಿಮಾ‌ ಸುಹಾನ ವಿಶೇಷ ಮಕ್ಕಳ ಪಾಲನೆ‌ ಮತ್ತು ಪೋಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮ‌ ನಡೆಸಿಕೊಟ್ಟರು

ಕಾರ್ಯಕ್ರಮದಲ್ಲಿ ಸದಸ್ಯ ಬಿ.ಎಂ. ತುಂಬೆ ಸ್ವಾಗತಿಸಿದರು, ಮುಖ್ಯ ಶಿಕ್ಷಕಿ ಆಶಾಲತಾ ಶಾಲಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿ ಮುಹಮ್ಮದ್ ಅಲಿ ಖಿರಾತ್ ಪಠಿಸಿದರು. ಹಕೀಂ ಕಲಾಯಿ ವಂದಿಸಿ, ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X