ಜು.29ಕ್ಕೆ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ, ಜು.27: ನಗರದ ನೂತನ ಸಹಕಾರಿ ಸಂಸ್ಥೆ ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಜು.29ರ ಬುಧವಾರ ಅಪರಾಹ್ನ 3:30ಕ್ಕೆ ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗಿನ ಎರಡನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೊಸೈಟಿಯನ್ನು ಉದ್ಘಾಟಿಸಲಿದ್ದಾರೆ ಎಂದರು. ಶ್ಯಾಮಿಲಿ ಸಮೂಹ ಸಂಸ್ಥೆ ಗಳ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಬೆಂಗಳೂರಿನ ಉದ್ಯಮಿ ಡಾ.ಕೆ. ಪ್ರಕಾಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ ಎಂದರು.
ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ ಕಟೀಲು, ಉಡುಪಿ ಜಿಲ್ಲೆಯ ಶಾಸಕರಾದ ಯಶಪಾಲ್ ಸುವರ್ಣ, ವಿ.ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಎ.ಕಿರಣ್ ಕುಮಾರ ಕೊಡ್ಲಿ, ಗುರುರಾಜ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಹಕಾರಿ ಕ್ಷೇತ್ರದ ಹಿರಿಯ ಧುರೀಣ ಟಿ. ಶಂಭು ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಕರಾವಳಿಯ ಪ್ರಸಿದ್ಧ ಕಲಾವಿದರಿಂದ ಯಕ್ಷ-ಗಾನ- ನಾದ ವೈಕುಂಠ ಕಾರ್ಯಕ್ರಮ ನಡೆಯಲಿದೆ. ಸೊಸೈಟಿಯು ಶೀಘ್ರ ಸಾಲ ಮಂಜೂರಾತಿ, ದೀರ್ಘಾವಧಿ ಮರು ಪಾವತಿ, ಸರಳ ದಾಖಲೆಗಳು, ಕನಿಷ್ಠ ಸೇವಾ ಶುಲ್ಕದ ಸೇವೆ ನೀಡಲಿದೆ ಎಂದು ಉದಯಕುಮಾರ್ ಶೆಟ್ಟಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷೆ ಪ್ರಣೀತಾ ಶರದ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಕಾರಿ ಹರ್ಷಿತಾ, ನಿರ್ದೇಶಕರಾದ ಸುಧಾಕರ ಹೆಗ್ಡೆ, ಉಮೇಶ್ ನಾಯರಿ ಉಪಸ್ಥಿತರಿದ್ದರು.






