Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುದುರೆಮುಖ | ಇಬ್ಬರ ಜೀವ ಬಲಿ ಪಡೆದಿದ್ದ...

ಕುದುರೆಮುಖ | ಇಬ್ಬರ ಜೀವ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

ವಾರ್ತಾಭಾರತಿವಾರ್ತಾಭಾರತಿ3 Nov 2025 6:41 PM IST
share
ಕುದುರೆಮುಖ | ಇಬ್ಬರ ಜೀವ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ
ಎರಡು ದಿನಗಳ ಕಾರ್ಯಾಚರಣೆ : ನಾಗರಹೊಳೆಗೆ ಸ್ಥಳಾಂತರ

ಕಾರ್ಕಳ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಕೆರೆಕಟ್ಟೆ ಪ್ರದೇಶದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಕೊನೆಗೂ ಸೆರೆ ಹಿಡಿದಿದೆ. ತೀವ್ರ ಕಾರ್ಯಾಚರಣೆಯ ಮೂಲಕ ರವಿವಾರ ಸಂಜೆ ವೇಳೆ ಕುದುರೆಮುಖ ಭಗವತಿ ನೇಚರ್ ಕ್ಯಾಂಪ್ ಸಮೀಪದ ಅರಣ್ಯದಲ್ಲಿ ಒಂಟಿ ಸಲಗವನ್ನು ಯಶಸ್ವಿಯಾಗಿ ಹಿಡಿದು ನಾಗರ ಹೊಳೆಗೆ ಸ್ಥಳಾಂತರಿಸಲಾಗಿದೆ.

ಕಾಡಿನಿಂದ ಸೊಪ್ಪು ತರಲು ಹೋಗಿದ್ದ ಹರೀಶ್ ಶೆಟ್ಟಿ (44) ಮತ್ತು ಉಮೇಶ್ ಗೌಡ(48) ಎಂಬವರ ಮೇಲೆ ಶುಕ್ರವಾರ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದರ ವಿರುದ್ಧ ಸ್ಥಳೀಯರು ಎಸ್‌ಕೆ ಬಾರ್ಡರ್‌ನ್ನು ಮುಚ್ಚಿ ತೀವ್ರ ಪ್ರತಿಭಟನೆ ನಡೆಸಿ, ಗರಿಷ್ಠ ಪರಿಹಾರ ಹಾಗೂ ಆನೆ ಸೆರೆಹಿಡಿಯುವಂತೆ ಆಗ್ರಹಿಸಿದ್ದರು.

ಇಲಾಖೆಯಿಂದ ಕಾರ್ಯಾಚರಣೆ :

ಕುದುರೆಮುಖ ಅರಣ್ಯದೊಳಗೆ ಬೀಡುಬಿಟ್ಟಿದ್ದ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಮಂಗಳೂರು ಅರಣ್ಯ ವೃತ್ತ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಯಿತು.

ಈ ಕಾರ್ಯಾಚರಣೆಯಲ್ಲಿ 200ಕ್ಕೂ ಅಧಿಕ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಸೇರಿದಂತೆ ಕುದುರೆಮುಖ, ಮಂಗಳೂರು, ಮತ್ತು ಚಿಕ್ಕಮಗಳೂರು ವಲಯದ ತಂಡಗಳು ಪಾಲ್ಗೊಂಡಿದ್ದವು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು, ಕೊಡಗು ಜಿಲ್ಲೆಯ ದುಬಾರೆ ಹಾಗೂ ನಾಗರಹೊಳೆ ಆನೆ ಬಿಡಾರಗಳಿಂದ ಬಂದಿದ್ದ ನುರಿತ ತಂಡಗಳು ಮತ್ತು ತರಬೇತಿ ಪಡೆದ ಆನೆಗಳ ಸಹಕಾರದಲ್ಲಿ ತೀವ್ರ ಕಾರ್ಯಾಚರಣೆ ನಡೆಸಲಾಯಿತು.

ಡ್ರೋನ್‌ಗಳ ಸಹಾಯದಿಂದ ಕುದುರೆಮುಖದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹುಡುಕಾಟ ನಡೆಸಿ, ಬೆಳಗಿನ ವೇಳೆಯಲ್ಲಿ ಭಗವತಿ ಕ್ಯಾಂಪ್ ಹತ್ತಿರ ಆನೆ ಇರುವುದನ್ನು ಪತ್ತೆ ಹಚ್ಚಲಾಯಿತು. ಸಂಜೆ ವೇಳೆ ಆನೆಯನ್ನು ನಿಖರ ಯೋಜನೆ ರೂಪಿಸಿ ಸೆರೆ ಹಿಡಿಯುವಲ್ಲಿ ಇಲಾಖೆ ಯಶಸ್ವಿಯಾಯಿತು.

ನಾಗರಹೊಳೆಗೆ ಸ್ಥಳಾಂತರ :

ಕಾರ್ಯಾಚರಣೆ 2 ದಿನಗಳ ಕಾಲ ನಿರಂತರ ನಡೆಸಲಾಗಿದ್ದು, ಹಗಲು ವೇಳೆ ಡ್ರೋನ್ ತಂತ್ರಜ್ಞಾನ ಮತ್ತು ರಾತ್ರಿ ವೇಳೆ ಥರ್ಮಲ್ ಡ್ರೋನ್ ಕ್ಯಾಮೆರಾ ಬಳಕೆ ಮಾಡಲಾಗಿತ್ತು. ಸಿಡೇಟಿವ್ ಡಾರ್ಟ್ ಪ್ರಯೋಗಿಸಿ ಆನೆಯನ್ನು ಸೆರೆಹಿಡಿಯಲಾಯಿತು.

ಸುಮಾರು 40 ವರ್ಷದ 5 ಟನ್ ತೂಕದ ಒಂಟಿ ಸಲಗ ಕೊನೆಗೂ ಇಲಾಖೆಯ ಬಲೆಗೆ ಬಿದ್ದಿದ್ದು, ಬಳಿಕ ಸುರಕ್ಷತಾ ಕ್ರಮದೊಂದಿಗೆ ಆನೆಯನ್ನು ಟ್ರಕ್‌ನಲ್ಲಿ ಹೊತ್ತೊಯ್ದು ನಾಗರಹೊಳೆ ದೊಡ್ಡ ಹರವೆ ಬಿಡಾರಕ್ಕೆ ಸ್ಥಳಾಂತರಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ವನ್ಯಜೀವಿ ತಜ್ಞ ವೈದ್ಯ ಡಾ.ಮುಜೀಬ್, ಶಾರ್ಪ್ ಶೂಟರ್ ಅಕ್ರಮ್, ಹಾಗೂ ಪ್ರಾಜೆಕ್ಟ್ ಎಲಿಫೆಂಟ್‌ನ ಎಪಿಸಿಸಿಎಫ್ ಮನೋಜ್ ರಾಜನ್, ಮಂಗಳೂರು ವಲಯದ ಸಿಸಿಎಫ್ ಕರಿಕಾಲನ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್‌ಒ ಶಿವರಾಮ್ ಬಾಬು, ಎಸಿಎಫ್, ಆರ್‌ಎಫ್‌ಒ, ಡಿಆರ್‌ಎಫ್‌ಒ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

ಆನೆಯ ಆರೋಗ್ಯವನ್ನು ಡಾ.ಮುಜೀಬ್ ತಪಾಸಣೆ ನಡೆಸಿದ್ದು, ಆನೆಗೆ ಯಾವುದೇ ಗಂಭೀರ ಗಾಯಗಳಿಲ್ಲ ಮತ್ತು ಆರೋಗ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆನೆ ಆಗುಂಬೆ-ಭಾಗಮಂಡಲ ಪ್ರದೇಶಗಳ ನಡುವೆ ಸಂಚರಿಸುವ ಸಲಗವಾಗಿದ್ದು, ಕೆರೆಕಟ್ಟೆ ಭಾಗದಲ್ಲಿ ಇಬ್ಬರ ಸಾವಿಗೆ ಕಾರಣವಾದ ನಂತರ ಕುದುರೆಮುಖದ ಕಾಡಿನಲ್ಲಿ ತಿರುಗಾಡಿಕೊಂಡಿತ್ತು ಎಂದು ಡಿಎಫ್‌ಒ ಶಿವರಾಮ್ ಬಾಬು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X