Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ : ಕೋಮು ಸೌಹಾರ್ದತೆಗೆ...

ಕುಂದಾಪುರ : ಕೋಮು ಸೌಹಾರ್ದತೆಗೆ ಸಾಕ್ಷಿಯಾದ ನವರಾತ್ರಿ ಮೆರವಣಿಗೆ - ಉರೂಸ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Oct 2023 4:47 PM IST
share
ಕುಂದಾಪುರ : ಕೋಮು ಸೌಹಾರ್ದತೆಗೆ ಸಾಕ್ಷಿಯಾದ ನವರಾತ್ರಿ ಮೆರವಣಿಗೆ - ಉರೂಸ್ ಕಾರ್ಯಕ್ರಮ

ಕುಂದಾಪುರ : ನಗರದಲ್ಲಿ ಸೋಮವಾರ ಸಂಜೆ ನಡೆದ ವಿವಿಧ ಮೂರು ಕಡೆಗಳ ನವರಾತ್ರಿ ಶಾರದೆ ವಿಸರ್ಜನಾ ಮೆರವಣಿಗೆ ಹಾಗೂ ದರ್ಗಾದ ಉರೂಸ್ ಕಾರ್ಯಕ್ರಮವು ಸಮನ್ವಯತೆ ಸಾಧಿಸುವ ಮೂಲಕ ಕೋಮು ಸೌಹಾರ್ದತೆಗೆ ಸಾಕ್ಷಿಯಾಯಿತು.

ಕುಂದಾಪುರದ ಶ್ರೀರಾಮಮಂದಿರ ದೇವಸ್ಥಾನ, ವೆಂಕಟರಮಣ ದೇವಸ್ಥಾನ, ರಕ್ತೇಶ್ವರಿ ದೇವಸ್ಥಾನದ ನವರಾತ್ರಿಯ ಶಾರದಾ ದೇವಿ ವಿಸರ್ಜನಾ ಮೆರವಣಿಗೆ ಮತ್ತು ಹಝ್ರತ್ ಸುಲ್ತಾನ್ ಯೂಸುಫ್ ವಲಿಯಲ್ಲಾಹಿ ದರ್ಗಾದ ವಾರ್ಷಿಕ ಉರೂಸ್ ಕಾರ್ಯಕ್ರಮ ಸೋಮವಾರ ಸಂಜೆ ಏಕಕಾಲದಲ್ಲಿ ಜರಗಬೇಕಾಗಿತ್ತು. ಈ ಸಂಬಂಧ ಪೊಲೀಸರು ಮೊದಲೇ ಎರಡು ಧರ್ಮದ ಮುಖಂಡರ ಬಳಿ ಸಮನ್ವಯತೆ ಸಾಧಿಸಿ ಮೂರು ಮೆರವಣಿಗೆ ಹಾಗೂ ಉರೂಸ್ ಕಾರ್ಯಕ್ರಮ ಸಂಭ್ರಮದಿಂದ ಜರಗುವ ಸಲುವಾಗಿ ಸಮಯ ನಿಗದಿ ಮಾಡಿದ್ದರು.

ಅದರಂತೆಯೇ ರಾಮ ಮಂದಿರ ಮತ್ತು ವೆಂಕಟರಮಣ ದೇವಸ್ಥಾನದ ಮೆರವಣಿಗೆ ಬೇರೆ ಬೇರೆ ಸಮಯದಲ್ಲಿ ನಡೆದಿದ್ದು ಇದರ ನಡುವಿನ ಸಮಯದಲ್ಲಿ ಉರೂಸ್ ಮೆರವಣಿಗೆ ಸಾಗಿತು. ಉರೂಸ್ ಹಿನ್ನೆಲೆಯಲ್ಲಿ ದರ್ಗಾ ಸಮೀಪದಿಂದ ಫೆರ್ರಿ ರಸ್ತೆ ಪಾರ್ಕ್ ತನಕ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

ಉರೂಸ್ ಪ್ರಯುಕ್ತ ಹಾಕಲಾದ ವಿದ್ಯುತ್ ದೀಪಾಲಂಕಾರ ಹಾಗೂ ಸ್ವಾಗತ ಕಮಾನು ರಾಮಮಂದಿರ, ವೆಂಕಟರಮಣ ದೇವಸ್ಥಾನದಲ್ಲಿನ ಶಾರದಾ ಮೂರ್ತಿ ಮೆರವಣಿಗೆಗೆ ತಡೆಯಾಗುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಕಮಾನಿನ ಮೇಲ್ಭಾಗವನ್ನು ಮುಸ್ಲಿಮರು ತೆರವು ಮಾಡಿದರು. ಅದೇ ರೀತಿ ವಿದ್ಯುತ್ ದೀಪಾಲಂಕಾರಕ್ಕೆ ತಗುಲದಂತೆ ಅಗತ್ಯ ಕ್ರಮಗಳನ್ನು ಮಾಡಿ ಕೊಟ್ಟು ಮೆರವಣಿಗೆ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.

ದರ್ಗಾದ ಎದುರು ಮೆರವಣಿಗೆ ತೆರಳುವಾಗ ಜಾಗಟೆ, ಚಂಡೆ ಬಾರಿಸುವು ದನ್ನು ನಿಲ್ಲಿಸಿ ಮುಸ್ಲಿಂ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಲಾಯಿತು. ಈ ವೇಳೆ ದರ್ಗಾ ಬಳಿ ಜಮಾಯಿಸಿದ್ದ ಮುಸ್ಲಿಮರು ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದ ಹಿಂದೂಗಳಿಗೆ ಹಬ್ಬದ ಶುಭಾಶಯ ಕೋರಿದರು.

ಮುಖಂಡರಾದ ಅಬು ಮುಹಮ್ಮದ್ ಕುಂದಾಪುರ, ರಫೀಕ್ ಅಹಮದ್ ಗಂಗೊಳ್ಳಿ, ಶ್ರೀರಾಮಮಂದಿರ ದೇವಸ್ಥಾನದ ದೇವಕಿ ಸಣ್ಣಯ್ಯ, ವೆಂಕಟರಮಣ ದೇವಸ್ಥಾನದ ತ್ರಿವಿಕ್ರಮ ಪೈ, ಕೇಶವ ಭಟ್, ರಕ್ತೇಶ್ವರಿ ದೇವಸ್ಥಾನದ ವಿಶ್ವನಾಥ ಶೆಟ್ಟಿ, ಶ್ರೀಧರ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ಕುಂದಾಪುರ ಪೊಲೀಸ್ ನಿರೀಕ್ಷಕ ನಂದಕುಮಾರ್, ಕುಂದಾಪುರ ಉಪ ವಿಭಾಗದ ವಿವಿಧ ಪೊಲೀಸ್ ಠಾಣೆ ಉಪನಿರೀಕ್ಷಕರು, ಸಿಬ್ಬಂದಿಗಳು ಹಾಜರಿದ್ದರು. ಭದ್ರತೆಗಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ಹಾಗೂ ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿತ್ತು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X